ಯುವತಿ ಮೇಲೆ ಕಳೆದ ಐದು ವರ್ಷಗಳಿಂದ ನಿರಂತರ ಸಾಮೂಹಿಕ ಅತ್ಯಾಚಾರ ನಡೆಸಿದ 59 ಆರೋಪಿಗಳಲ್ಲಿ 57 ಮಂದಿಯನ್ನು ಬಂಧಿಸಿದ ಪೊಲೀಸರು

35
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, 59 ಆರೋಪಿಗಳ ಪೈಕಿ 57 ಮಂದಿ ಬಂಧನ!

ಮಹಿಳಾ ಐಪಿಎಸ್ ಅಧಿಕಾರಿ ಎಸ್ ಅಜಿತಾ ಬೇಗಂ ನೇತೃತ್ವದ ವಿಶೇಷ ತನಿಖಾ ತಂಡವು ಜಿಲ್ಲಾ ಪೊಲೀಸ್ ಮುಖ್ಯಸ್ಥರ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿದೆ.


ಪತ್ತನಂತಿಟ್ಟ: ಕೇರಳದ ಪತ್ತಂತಿಟ್ಟ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 59 ಮಂದಿ ಆರೋಪಿಗಳ ಪೈಕಿ 57 ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಜನವರಿ 10 ರಂದು ಇಳವುಂತಿಟ್ಟ ಪೊಲೀಸ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾದಾಗಿನಿಂದ ಇಲ್ಲಿಯವರೆಗೂ ವಿದೇಶದಲ್ಲಿರುವ ಇಬ್ಬರನ್ನು ಹೊರತುಪಡಿಸಿ ಪಟ್ಟಿಯಲ್ಲಿರುವ ಎಲ್ಲಾ ಆರೋಪಿಗಳನ್ನು ಸಮಗ್ರ ತನಿಖೆಯ ಮೂಲಕ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ವಿ ಜಿ ವಿನೋದ್ ಕುಮಾರ್ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕೊನೆಯ ಆರೋಪಿ 25 ವರ್ಷದ ಯುವಕನನ್ನು ಭಾನುವಾರ ಬೆಳಿಗ್ಗೆ ಅವರ ಮನೆಯ ಸಮೀಪದಲ್ಲಿಯೇ ಬಂಧಿಸಲಾಗಿದೆ.

ಮಹಿಳಾ ಐಪಿಎಸ್ ಅಧಿಕಾರಿ ಎಸ್ ಅಜಿತಾ ಬೇಗಂ ನೇತೃತ್ವದ ವಿಶೇಷ ತನಿಖಾ ತಂಡವು ಜಿಲ್ಲಾ ಪೊಲೀಸ್ ಮುಖ್ಯಸ್ಥರ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿದೆ.

ಆರೋಪಿಗಳ ಹೇಳಿಕೆ ಆಧರಿಸಿ ಜಿಲ್ಲೆಯ ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 30 ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳಲ್ಲಿ ಐವರು ಅಪ್ರಾಪ್ತರು ಕೂಡ ಇದ್ದಾರೆ.

ತನಿಖೆ ಪೂರ್ಣಗೊಳಿಸಿ ಆದಷ್ಟು ಬೇಗ ದೋಷಾರೋಪ ಪಟ್ಟಿ ಸಲ್ಲಿಸುವುದು ಪೊಲೀಸ್ ತಂಡದ ಉದ್ದೇಶವಾಗಿದೆ’ ಎಂದು ಅಧಿಕಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಪತ್ತನಂತಿಟ್ಟದ ಖಾಸಗಿ ಬಸ್ ನಿಲ್ದಾಣದಲ್ಲಿ ಹಲವು ಆರೋಪಿಗಳು ಬಾಲಕಿಯನ್ನು ಭೇಟಿಯಾಗಿದ್ದು, ನಂತರ ಆಕೆಯನ್ನು ವಾಹನಗಳಲ್ಲಿ ವಿವಿಧ ಸ್ಥಳಗಳಿಗೆ ಕರೆದೊಯ್ದು ದೌರ್ಜನ್ಯವೆಸಗಿರುವುದು ಇವರೆಗಿನ ತನಿಖೆಯಿಂದ ತಿಳಿದುಬಂದಿದೆ.

ಕಳೆದ ವರ್ಷ ಹನ್ನೆರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ಯುವಕನೊಬ್ಬ ರಾನ್ನಿಯ ರಬ್ಬರ್ ತೋಟಕ್ಕೆ ಕರೆದೊಯ್ದು ಇತರ ಮೂವರೊಂದಿಗೆ ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವುದು ತನಿಖೆಯಿಂದ ತಿಳಿದುಬಂದಿದೆ.

  2024 ರ ಜನವರಿಯಲ್ಲಿ ಕಾರಿನೊಳಗೆ ಮತ್ತು ಪಥನಂತಿಟ್ಟ ಜನರಲ್ ಆಸ್ಪತ್ರೆಯಲ್ಲಿ ನಡೆದ ಘಟನೆಗಳು ಸೇರಿದಂತೆ ಐದು ಸಂದರ್ಭಗಳಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.

ಈಗ 18 ವರ್ಷ ತುಂಬಿರುವ ಯುವತಿ 13 ವರ್ಷದಿಂದ 62 ವ್ಯಕ್ತಿಗಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿ ನಡೆಸಿದ ಕೌನ್ಸೆಲಿಂಗ್‌ನಲ್ಲಿ ಈ ವಿಷಯ ಬೆಳಕಿಗೆ ಬಂದಿದೆ.

ಆಕೆಯ ನಡವಳಿಕೆಯಲ್ಲಿ ಗಮನಾರ್ಹ ಬದಲಾವಣೆಗಳ ಬಗ್ಗೆ ಸಂಸ್ಥೆಯು ಸಮಿತಿಗೆ ತಿಳಿಸಿದೆ. ನಂತರ ಸಮಿತಿಯು ಪೊಲೀಸರಿಗೆ ಸೂಚನೆ ನೀಡಿದ್ದು, ತನಿಖೆ ನಡೆಯುತ್ತಿದೆ.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ಲಖನೌ: ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು...

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...