ಗರ್ಭಿಣಿ ಹಸುವಿನ ತಲೆ ಕಡಿದು  ಮಾಂಸ ಕದ್ದೊಯ್ದಿದ್ದ ಐವರು ಆರೋಪಿಗಳ ಬಂಧನ

2

ಗರ್ಭಿಣಿ ಹಸುವಿನ ತಲೆ ಕಡಿದು ಕೊಂದು ಮಾಂಸ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಘಟನೆ ನಡೆದಿದ್ದು ಮೂರು ದಿನಗಳ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಗೋಹಿಂಸೆ ಮತ್ತು ಗೋಹತ್ಯೆಯನ್ನ ಸರ್ಕಾರ ಯಾವುದೇ ಕಾರಣಕ್ಕೂ ಬೆಂಬಲಿಸಲ್ಲ.

ಗೋ ಹಂತಕರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ. ಗೋ ಮಾಂಸ ಸಾಗಾಟದ ಜಾಲ ಇದರೆ ಸಂಪೂರ್ಣ ಮಾಹಿತಿ ಕಲೆ ಹಾಕುವಂತೆ ಗೃಹ ಸಚಿವ ಪರಮೇಶ್ವರ್ ಸಭೆಯಲ್ಲಿ ಸೂಚನೆ ನೀಡಿದ್ದರು.

ಇನ್ನು ಕಾರವಾರ ಘಟನೆ ನಂತರ ತನಿಖೆ ಕೈಗೊಂಡಿದ್ದ ಎಸ್ಪಿ ಎಂ.ನಾರಾಯಣ ನೇತೃತ್ವದ ತಂಡ ಇದುವರೆಗೆ ಐವರು ಗೋಹಂತಕರನ್ನು ಬಂಧಿಸಿದ್ದಾರೆ.

ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದ ಕೃಷ್ಣ ಆಚಾರಿ ಎಂಬುವರು ಹಸುವನ್ನು ಮೇಯಲು ಕಾಡಿಗೆ ಬಿಟ್ಟಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ.

ಹೀಗಾಗಿ ಹುಡುಕಾಟ ನಡೆಸಿದ್ದಾಗ ಗೋವನ್ನು ಹತ್ಯೆ ಮಾಡಿರುವ ಕುರುಹು ಪತ್ತೆಯಾಗಿತ್ತು. ಹಸುವನ್ನು ಕೊಂದಿದ್ದ ದುರುಳರು ಹಸುವಿನ ಹೊಟ್ಟೆಯಲ್ಲಿದ್ದ ಕರುವಿನ ಮಾಂಸವನ್ನು ಹೊತ್ತೊಯ್ದಿದ್ದು ಈ ಘಟನೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು

Leave a comment

Leave a Reply

Your email address will not be published. Required fields are marked *

Related Articles

ಉಡುಪಿ ನಗರ ಸರಣಿ ಮನೆ ಕಳ್ಳತನ ಅಂತರ್ ರಾಜ್ಯ ಕಳ್ಳನನ್ನು ಬಂಧಿಸಿದ ವಿಶೇಷ ಪೊಲೀಸ್ ತಂಡ

“ನಗರದಲ್ಲಿ ಸರಣಿ ಮನೆಗಳ್ಳತನ ಪ್ರಕರಣದ ಅಂತರ್‌ ರಾಜ್ಯ ಕಳ್ಳರನ್ನು ಪತ್ತೆ ಹಚ್ಚಲು ಪೊಲೀಸ್ ವರಿಷ್ಠಾಧಿಕಾರಿ ಅವರ...

ಮೈಸೂರಿನಲ್ಲಿ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಆರು ಮಂದಿ ಬಂಧನ ಮಹಾರಾಷ್ಟ್ರ ಮೈಸೂರು ಪೊಲೀಸರ ಜಂಟಿ ಕಾರ್ಯಚರಣೆ

“ಸಾಂಸ್ಕೃತಿಕ.  ನಗರಿ ಮೈಸೂರಿನಲ್ಲಿ ಸಿಂಥೆಟಿಕ್‌ ಡ್ರಗ್ಸ್ ಎಂಡಿಎಂಎ ತಯಾರಿಕಾ ಘಟಕ   ಪತ್ತೆಯಾಗಿದ್ದು ಕೋಟ್ಯಾಂತರ ರೂ   ಮೌಲ್ಯದ ...

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 40 ಕೋಟಿಗೂ ಅಧಿಕ ಹಣ ವಂಚಿಸಿದ್ದ ಆರೋಪಿಯನ್ನು ಬಂಧಿಸಿದ ಕಾರವಾರ ಪೊಲೀಸ್

‘ಡಿಜಿಟಲ್ ಅರೆಸ್ಟ್’ ವಂಚನೆ: ರಾಷ್ಟ್ರವ್ಯಾಪಿ ರೂ 40 ಕೋಟಿ ವಂಚಿಸಿದ ಆರೋಪಿ ಬಂಧನ ಕಾರವಾರ: ‘ಡಿಜಿಟಲ್...

180 ಜನರ ಸಾವಿಗೆ ಕಾರಣವಾಗಿದ್ದ 7/11 ಮುಂಬೈ ರೈಲು ಬಾಂಬ್ ಸ್ಫೋಟ ಪ್ರಕರಣ: ಸಾಕ್ಷಾಧಾರ ಕೊರತೆ ಎಲ್ಲಾ 12 ಆರೋಪಿಗಳು ಖುಲಾಸೆ.

2006 ರ ಮುಂಬೈ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 12 ಮಂದಿ ಆರೋಪಿಗಳನ್ನು ಸಾಕ್ಷ್ಯಾಧಾರಗಳ...