ಮಹಾರಾಷ್ಟ್ರ ಶಸ್ತ್ರಾಸ್ತ್ರ ತಯಾರಿಕಾ ಘಟಕದಲ್ಲಿ ಸ್ಪೋಟ ಓರ್ವ ನ ಮೃತ್ಯು  10 ಕಾರ್ಮಿಕರು ನಾಪತ್ತೆ  ಕಾರ್ಮಿಕರಿಗಾಗಿ ಶೋಧ

3

“ರಕ್ಷಣಾ ಇಲಾಖೆಗೆ ಸಣ್ಣ ಪ್ರಮಾಣದ ಶಸ್ತಾಸ್ತ್ರಗಳನ್ನು ತಯಾರಿಸುವ ಮಹಾರಾಷ್ಟ್ರದ ಭಂದಾರಾ ಜಿಲ್ಲೆಯ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು 8 ಜನ ಮೃತಪಟ್ಟಿದ್ದಾರೆ.

ಶುಕ್ರವಾರ ಬೆಳಿಗ್ಗೆ ಜವಾಹರ್ ನಗರದಲ್ಲಿನ ರಕ್ಷಣಾ ಇಲಾಖೆ ಕಾರ್ಖಾನೆಯ ಘಟಕವೊಂದರ ಮಾಳಿಗೆ ಕಳಚಿ ಬಿದ್ದಿದ್ದರಿಂದ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಕೊಟ್ಲೆ ತಿಳಿಸಿದ್ದಾರೆ. ಅವಶೇಷಗಳ ಅಡಿ ಇನ್ನೂ 7 ಜನ ಸಿಲುಕಿದ್ದಾರೆ. ಅವರನ್ನು ಹೊರತೆಗೆಯುವ ಕಾರ್ಯಾಚರಣೆ ನಡೆದಿದೆ ಎಂದು ತಿಳಿಸಿದ್ದಾರೆ.

ಸ್ಥಳಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಸಂಖ್ಯೆ ಹೆಚ್ಚಾಗಬಹುದು ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಾರ್ಖಾನೆ ಆವರಣದಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಕೋಲ್ಟೆ ತಿಳಿಸಿದ್ದಾರೆ

. ಮೇಲ್ಛಾವಣಿ ಕುಸಿದಿದ್ದು, ಅವಶೇಷಗಳನ್ನು ತೆಗೆಯಲು ಅಗೆಯುವ ಯಂತ್ರವನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು. ಜವಾಹರ್ ನಗರ ಪ್ರದೇಶದಲ್ಲಿರುವ ಕಾರ್ಖಾನೆಯ ಎಲ್‌ಟಿಪಿ ವಿಭಾಗದಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಫೋಟದ ಸಮಯದಲ್ಲಿ ವಿಭಾಗದಲ್ಲಿ 14 ನೌಕರರು ಕೆಲಸ ಮಾಡುತ್ತಿದ್ದರು, ಅವರಲ್ಲಿ ಮೂವರನ್ನು ಜೀವಂತವಾಗಿ ರಕ್ಷಿಸಲಾಗಿದೆ ಮತ್ತು ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.

ಪಾರುಗಾಣಿಕಾ ಮತ್ತು ವೈದ್ಯಕೀಯ ಸಿಬ್ಬಂದಿ ಬದುಕುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದರೆ, ಅಗ್ನಿಶಾಮಕ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ

. ಸ್ಫೋಟದ ತೀವ್ರತೆ ಎಷ್ಟು ಇತ್ತೆಂದರೆ ಸುಮಾರು 5 ಕಿಮೀ ದೂರದ ವರೆಗೆ ಶಬ್ದ ಕೇಳಿಸಿತು. ಫ್ಯಾಕ್ಟರಿಯಿಂದ ದಟ್ಟ ಹೊಗೆ ಏಳುತ್ತಿರುವುದು ದೂರದಿಂದ ಸೆರೆ ಹಿಡಿದಿರುವ ವಿಡಿಯೋದಲ್ಲಿ ಕಂಡು ಬಂದಿದೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...