ಮಹಾರಾಷ್ಟ್ರ ಶಸ್ತ್ರಾಸ್ತ್ರ ತಯಾರಿಕಾ ಘಟಕದಲ್ಲಿ ಸ್ಪೋಟ ಓರ್ವ ನ ಮೃತ್ಯು  10 ಕಾರ್ಮಿಕರು ನಾಪತ್ತೆ  ಕಾರ್ಮಿಕರಿಗಾಗಿ ಶೋಧ

36

“ರಕ್ಷಣಾ ಇಲಾಖೆಗೆ ಸಣ್ಣ ಪ್ರಮಾಣದ ಶಸ್ತಾಸ್ತ್ರಗಳನ್ನು ತಯಾರಿಸುವ ಮಹಾರಾಷ್ಟ್ರದ ಭಂದಾರಾ ಜಿಲ್ಲೆಯ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು 8 ಜನ ಮೃತಪಟ್ಟಿದ್ದಾರೆ.

ಶುಕ್ರವಾರ ಬೆಳಿಗ್ಗೆ ಜವಾಹರ್ ನಗರದಲ್ಲಿನ ರಕ್ಷಣಾ ಇಲಾಖೆ ಕಾರ್ಖಾನೆಯ ಘಟಕವೊಂದರ ಮಾಳಿಗೆ ಕಳಚಿ ಬಿದ್ದಿದ್ದರಿಂದ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಕೊಟ್ಲೆ ತಿಳಿಸಿದ್ದಾರೆ. ಅವಶೇಷಗಳ ಅಡಿ ಇನ್ನೂ 7 ಜನ ಸಿಲುಕಿದ್ದಾರೆ. ಅವರನ್ನು ಹೊರತೆಗೆಯುವ ಕಾರ್ಯಾಚರಣೆ ನಡೆದಿದೆ ಎಂದು ತಿಳಿಸಿದ್ದಾರೆ.

ಸ್ಥಳಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಸಂಖ್ಯೆ ಹೆಚ್ಚಾಗಬಹುದು ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಾರ್ಖಾನೆ ಆವರಣದಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಕೋಲ್ಟೆ ತಿಳಿಸಿದ್ದಾರೆ

. ಮೇಲ್ಛಾವಣಿ ಕುಸಿದಿದ್ದು, ಅವಶೇಷಗಳನ್ನು ತೆಗೆಯಲು ಅಗೆಯುವ ಯಂತ್ರವನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು. ಜವಾಹರ್ ನಗರ ಪ್ರದೇಶದಲ್ಲಿರುವ ಕಾರ್ಖಾನೆಯ ಎಲ್‌ಟಿಪಿ ವಿಭಾಗದಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಫೋಟದ ಸಮಯದಲ್ಲಿ ವಿಭಾಗದಲ್ಲಿ 14 ನೌಕರರು ಕೆಲಸ ಮಾಡುತ್ತಿದ್ದರು, ಅವರಲ್ಲಿ ಮೂವರನ್ನು ಜೀವಂತವಾಗಿ ರಕ್ಷಿಸಲಾಗಿದೆ ಮತ್ತು ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.

ಪಾರುಗಾಣಿಕಾ ಮತ್ತು ವೈದ್ಯಕೀಯ ಸಿಬ್ಬಂದಿ ಬದುಕುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದರೆ, ಅಗ್ನಿಶಾಮಕ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ

. ಸ್ಫೋಟದ ತೀವ್ರತೆ ಎಷ್ಟು ಇತ್ತೆಂದರೆ ಸುಮಾರು 5 ಕಿಮೀ ದೂರದ ವರೆಗೆ ಶಬ್ದ ಕೇಳಿಸಿತು. ಫ್ಯಾಕ್ಟರಿಯಿಂದ ದಟ್ಟ ಹೊಗೆ ಏಳುತ್ತಿರುವುದು ದೂರದಿಂದ ಸೆರೆ ಹಿಡಿದಿರುವ ವಿಡಿಯೋದಲ್ಲಿ ಕಂಡು ಬಂದಿದೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...

ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಭಾವಿ ಪತಿ ಸೈಯದ್

ಬೆಂಗಳೂರು: ತನ್ನನ್ನು  ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ...

1 ಲಕ್ಷ ರೂ ಬಿಲ್ ಮಾಡಿದ ಆಸ್ಪತ್ರೆ ಐಟಮೈಸ್ಡ್ ಬಿಲ್ ಕೇಳಿದ ಮೇಲೆ 57 ಸಾವಿರಕ್ಕೆ ಇಳಿಕೆ ರೋಗಿ ತಾನು ಮಾಡಿಸಿಕೊಳ್ಳದ ಶಸ್ತ್ರಚಿಕಿತ್ಸೆಗೂ ಬಿಲ್

ನವದೆಹಲಿ: ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಯೊಂದು ಮನಸೋ ಇಚ್ಛೆ ಬಿಲ್ ಮಾಡಿ ಹಣ ಪೀಕುವ...

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿಯನ್ನು ಅತಿಕ್ರಮಣ ಮಾಡಿದವರು ಮುಸ್ಲಿಮರೇ:: ಸಚಿವ ಜಮೀರ್ ಅಹ್ಮದ್

ಬೆಂಗಳೂರು: ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಸೋಮವಾರ...