26/11 ಮುಂಬೈ ದಾಳಿ ಸೂತ್ರದಾರ ಉಗ್ರ ತಹವ್ವೂರ್ ರಾಣಾ  ಭಾರತಕ್ಕೆ ಗಡಿಪಾರು ಮಾಡಲು ಅಮೆರಿಕ ಸುಪ್ರೀಂ ಕೋರ್ಟ್ ಸಮ್ಮತಿ

45

“26/11ರ ಮುಂಬೈ ದಾಳಿಯ ಅಪರಾಧಿ ತಹವ್ವೂರ್ ರಾಣಾನನ್ನು ಭಾರತಕ್ಕೆ ಗಡೀಪಾರು ಮಾಡುವ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್ ತೆರವುಗೊಳಿಸಿದ್ದು, ಪ್ರಕರಣದಲ್ಲಿ ರಾಣಾ ಮೇಲೆ ದೋಷಾರೋಪಣೆ ವಿರುದ್ಧದ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ.

2008 ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಭಾರತಕ್ಕೆ ಬೇಕಾಗಿದ್ದ ಪಾಕಿಸ್ತಾನಿ ಮೂಲದ ಕೆನಡಾದ ಪ್ರಜೆ ರಾಣಾನನ್ನು ಹಸ್ತಾಂತರಿಸುವಂತೆ ಕೋರಲಾಗಿತ್ತು. ಭಾರತಕ್ಕೆ ಗಡೀಪಾರು ಮಾಡದಿರಲು ರಾಣಾನಿಗೆ ಇದ್ದ ಕೊನೆಯ ಕಾನೂನು ಅವಕಾಶ ಕೈತಪ್ಪಿದ್ದು, ಭಾರತಕ್ಕೆ ಗಡೀಪಾರು ಮಾಡಲು ಅಮೆರಿಕ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ಇದಕ್ಕೂ ಮೊದಲು, ಸ್ಯಾನ್ ಫ್ರಾನ್ಸಿಸ್ಕೋದ ಯುಎಸ್ ಕೋರ್ಟ್ ಆಫ್ ಅಪೀಲ್ಸ್ ಫಾರ್ ದಿ ನಾರ್ತ್ ಸರ್ಕ್ಯೂಟ್ ಸೇರಿದಂತೆ ಹಲವಾರು ಫೆಡರಲ್ ನ್ಯಾಯಾಲಯಗಳಲ್ಲಿ ಕಾನೂನು ಹೋರಾಟದಲ್ಲಿ ತಹವ್ವೂರ್ ರಾಣಾಗೆ ಸೋಲು ಉಂಟಾಗಿತ್ತು.

ಕಳೆದ ವರ್ಷ ನವೆಂಬರ್ 13 ರಂದು, ರಾಣಾ ಯುಎಸ್ ಸುಪ್ರೀಂ ಕೋರ್ಟ್‌ನಲ್ಲಿ ಸರ್ಟಿಯೊರಾರಿ ರಿಟ್ ಅರ್ಜಿ ಸಲ್ಲಿಸಿದ್ದನು. ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ ನಂತರ ಜನವರಿ 21 ರಂದು ಸುಪ್ರೀಂ ಕೋರ್ಟ್ ಇದನ್ನು ನಿರಾಕರಿಸಿತು.

ರಾಣಾ, ಪ್ರಸ್ತುತ ಲಾಸ್ ಏಂಜಲೀಸ್‌ನ ಮೆಟ್ರೋಪಾಲಿಟನ್ ಡಿಟೆನ್ಷನ್ ಸೆಂಟರ್‌ನಲ್ಲಿ ಬಂಧಿತನಾಗಿದ್ದಾನೆ. ಕಳೆದ ತಿಂಗಳು ಕ್ಯಾಲಿಫೋರ್ನಿಯಾದ ಜಿಲ್ಲಾ ಕೇಂದ್ರ ಕೋರ್ಟ್ 26/11 ದಾಳಿಯ ಆರೋಪಿ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿತ್ತು.

Leave a comment

Leave a Reply

Your email address will not be published. Required fields are marked *

Related Articles

ಜೆರುಸಲೇಂ ಅಲ್-ಅಕ್ಸಾ ಮಸೀದಿ  ಮೇಲೆ ಇರಾನ್ ಕ್ಷಿಪಣಿ ದಾಳಿ

ಈದ್ ಅಲ್-ಫಿತರ್‌ ದಿನವೇ ಜೆರುಸಲೇಂ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಅಲ್-ಅಕ್ಸಾ ಮಸೀದಿಯಿಂದ ಕೇವಲ...

ಇಂಧನ ಮೂಲಸೌಕರ್ಯದ ಮೇಲೆ ದಾಳಿಗೆ ಇರಾನ್ ತೀವ್ರ ಆಕ್ರೋಶ ಅನಿಯಂತ್ರಿತ ಪ್ರತಿದಾಳಿ” ಇರಾನ್ ಸ್ಪಷ್ಟ ಎಚ್ಚರಿಕೆ

“ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಇಂಧನ ಮೂಲಸೌಕರ್ಯದ ಮೇಲೆ ನಡೆದ ದಾಳಿಗೆ ಇರಾನ್ ತೀವ್ರ...

ಹಾರ್ಮುಜ್ ಜಲಸಂಧಿಯ ಬಳಿ ಸಮುದ್ರ ಸಂಚಾರಕ್ಕೆ ಅಡ್ಡಿ ಭಾರತೀಯ ಯುದ್ಧನೌಕೆ    ಭದ್ರತೆಯಲ್ಲಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಎಲ್ ಪಿಜಿ ಟ್ಯಾಂಕರ್

ನವದೆಹಲಿ: ಇರಾನ್ ಸಂಘರ್ಷದ ನಡುವೆಯೇ ಶನಿವಾರವೂ ಕೂಡ ಭಾರತ ಮೂಲದ  ಎಲ್ ಪಿಜಿ  ಟ್ಯಾಂಕರ್ ವೊಂದು...

ಇರಾನ್‌ನ ಪ್ರಮುಖ ತೈಲ ಶುದ್ಧೀಕರಣ ಘಟಕ ಮೇಲೆ ಇಸ್ರೇಲ್ ದಾಳಿ ನೆರೆ ರಾಷ್ಟ್ರ ಗಳ ಕ್ಷಮೆ ಕೇಳಿದ ಇರಾನ್

ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಎರಡನೇ ವಾರಕ್ಕೆ ಕಾಲಿಟ್ಟಿದ್ದು, ಇರಾನ್ ಹಾಗೂ ಮಧ್ಯಪ್ರಾಚ್ಯದ...