ಎನ್’ವಿಎಸ್-02 ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿ. 100ನೇ ಉಡ್ಡಯನದೊಂದಿಗೆ ಇತಿಹಾಸ ಸೃಷ್ಟಿಸಿದ ಇಸ್ರೋ

56

1963ರ ನ.21ರಂದು ಅಮೆರಿಕಾದ ರಾಕೆಟ್ ಬಳಸಿ ಮೊದಲ ಬಾರಿಗೆ ಉಪಗ್ರಹ ಮಾಡಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ, ಬುಧವಾರ ತನ್ನ 100ನೇ ಉಡ್ಡಯನವನ್ನು ಯಶಸ್ವಿಯಾಗಿ ನಡೆದಿದೆ.

ಇಂದು ಬೆಳಿಗ್ಗೆ 6.23ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಎನ್’ವಿಎಸ್-02 ಉಪಗ್ರಹ ಹೊತ್ತ ಜಿಎಸ್ಎಲ್’ವಿ ಬೆಂಕಿ ಉಗುಳುತ್ತಾ ನಭಕ್ಕೆ ಜಿಗಿಯಿತು. ಈ ಮೂಲಕ ಸ್ವದೇಶಿ ಜಿಪಿಎಸ್ ಯೋಜನೆಯ ಭಾಗವಾಗಿ ಎನ್’ವಿಎಸ್-02 ಉಪಗ್ರಹವನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ. 100ನೇ ಉಡ್ಡಯನದೊಂದಿಗೆ ಇತಿಹಾಸ ಸೃಷ್ಟಿಸಿದೆ

. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಇಸ್ರೋ, “ಜಿಎಸ್‌ಎಲ್‌ವಿ- ಎಫ್15 ರಾಕೆಟ್‌ ಮೂಲಕ ಎನ್‌ವಿಎಸ್‌- 02 ಉಪಗ್ರಹ ಉಡ್ಡಯನ ಯೋಜನೆ ಯಶಸ್ವಿಯಾಗಿದೆ. ಬಾಹ್ಯಾಕಾಶ ನ್ಯಾವಿಗೇಷನ್‌ನಲ್ಲಿ ಭಾರತ ಹೊಸ ಎತ್ತರಕ್ಕೆ ತಲುಪಿದೆ ಎಂದು ಸಂತಸ ವ್ಯಕ್ತಪಡಿಸಿದೆ.

ಇಸ್ರೋ ಅಧ್ಯಕ್ಷರಾಗ ಇತ್ತೀಚಿಗೆ ಅಧಿಕಾರ ಸ್ವೀಕರಿಸಿದ ವಿ.ನಾರಾಯಣ್ ಅವರ ಪಾಲಿಗೆ ಇದು ಮೊದಲ ಮಹತ್ವದ ಯೋಜನೆಯಾಗಿದೆ. ರಾಕೆಟ್ ಉಡಾವಣೆ ಯಶಸ್ವಿ ಕುರಿತು ಮಾತನಾಡಿರುವ ನಾರಾಯಣ್ ಅವರು, ಈ ಸಾಧನೆಯು ಟೀಮ್‌ವರ್ಕ್’ನಿಂದ ಆಗಿದ್ದು, ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಕ್ಕಿದೆ. ಈ ವರ್ಷ ಇಸ್ರೋಗೆ ಬಿಡುವಿಲ್ಲದ ವರ್ಷವಾಗಿದೆ.

ಮುಂಬರುವ ತಿಂಗಳುಗಳಲ್ಲಿ ಹಲವಾರು ಮಿಷನ್‌ಗಳು ನಮ್ಮ ಮುಂದಿವೆ. ಗನ್‌ಯಾನ ಭಾಗವಾಗಿ G1 ಮಿಷನ್‌ನ ತಯಾರಿಕೆಯಲ್ಲಿ ಉತ್ತಮವಾಗಿ ಮುನ್ನಡೆಯುತ್ತಿದ್ದೇವೆ. ಇದು ನಿಮಗೆಲ್ಲರಿಗೂ ತಿಳಿದಿರುವ ವಿಚಾರ. ಈ ವರ್ಷ ಇನ್ನೂ ಕೆಲವು ಯೋಜನೆಗಳು ಇಸ್ರೋ ಮುಂದಿವೆ.

ಚಂದ್ರಯಾನ 4, ಚಂದ್ರಯಾನ 5 ಮಿಷನ್‌ಗಳ ಜೊತೆಗೆ ಶ್ರೀಹರಿಕೋಟಾದಲ್ಲಿ ಮೂರನೇ ಉಡಾವಣಾ ಪ್ಯಾಡ್ ಮತ್ತು ಕುಲಶೇಖರಪಟ್ಟಣಂನಲ್ಲಿ ಎರಡನೇ ಉಡಾವಣೆ ಸೇರಿದಂತೆ ಹಲವಾರು ಯೋಜನೆಗಳಿವೆ. ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಯನ್ನು ಹೊರತರುವಲ್ಲಿ ನನ್ನನ್ನು ಇಸ್ರೋ ಅಧ್ಯಕ್ಷನಾಗಿಸಿದ ಪ್ರಧಾನಿ ಮೋದಿಯವರಿಗೆ ಧನ್ಯವಾದ ಹೇಳುತ್ತೇನೆಂದು ಹೇಳಿದ್ದಾರೆ.

ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ಅಧಿಕಾರ ಸ್ವೀಕಾರ ಈ ಎನ್’ವಿಎಸ್ ಸ್ಯಾಟಲೈಟ್ ಭಾರತದ ನ್ಯಾವಿಗೇಷನ್ (ಸ್ವದೇಶಿ ಜಿಪಿಎಸ್) ಉಪಗ್ರಹಗಳ ಜಾಲದ 2ನೇ ತಲೆಮಾರಿನ ಉಪಗ್ರಹವಾಗಿದೆ.

ಇದು ಭಾರತೀಯ ಉಪಖಂಡ (ಜೊತೆಗೆ ಅದರಾಚೆಗಿನ 1500 ಕಿ.ಮೀ.ದೂರದವರೆಗೆ)ದ ಬಳಕೆದಾರರಿಗೆ ನಿಖರ ಸಮಯ, ಸ್ಥಾನ ಮತ್ತು ವೇಗವನ್ನು ನೀಡುವ ಗುರಿಯನ್ನು ಹೊಂದಿದೆ

. ಈ ಉಪಗ್ರಹವು ಭೂಮಿ, ವಾಯು ಮತ್ತು ಸಾಗರ ಸಂಚಾರ, ಕೃಷಿ, ನೌಕೆಗಳ ನಿರ್ವಹಣೆ, ಮೊಬೈಲ್ ಲೊಕೇಷನ್ ಆಧರಿತ ಸೇವೆಗಳು, ಸ್ಯಾಟಲೈಟ್ ಗಳ ಕಕ್ಷೆಯ ನಿರ್ಧಾರ, ಇಂಟರ್ನೆಟ್ ಆಫ್ ಥಿಂಗ್ಸ್ ಆಧರಿತ ಅಪ್ಲಿಕೇಷನ್ ಗಳು, ತುರ್ತು ಮತ್ತು ಸಮಯಾಧಾರಿತ ಸೇವಗಳಿಗೆ ನೆರವು ನೀಡಲಿದೆ

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...