ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ  ಮನವಿ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ನಿಯೋಗ

35

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘಟನೆಯ ಪದಾಧಿಕಾರಿಗಳು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಅರ್ಪಿಸಿದರು.

ಮನವಿಯಲ್ಲಿ ಇರುವ ಬೇಡಿಕೆಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ನಮ್ಮ ಮನವಿ ಹೀಗಿದೆ: ನಮ್ಮ ದೇಶದಲ್ಲಿ ಮಹಿಳೆಯರು, ಮಕ್ಕಳು, ಗರ್ಭಿಣಿಯರು, ಬಾಣಂತಿಯರು, ಕಿಶೋರಿಯರು ಎದುರಿಸುತ್ತಿರುವ ಅಪೌಷ್ಠಿಕತೆ, ರಕ್ತಹೀನತೆ, ಆರೋಗ್ಯ ಸಮಸ್ಯೆಗಳನ್ನು ತೊಡೆದು ಹಾಕುವ ಹಿನ್ನೆಲೆಯಲ್ಲಿ

ಕಳೆದ 50 ವರ್ಷಗಳ ಹಿಂದೆ ಆರಂಭಿಸಿದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐ.ಸಿ.ಡಿ.ಎಸ್) ಪರಿಣಾಮಕಾರಿಯಾಗಲು ಅಂಗನವಾಡಿ ಕಾರ್ಯಕರ್ತೆಯರು ಸಾಕಷ್ಟು ಶ್ರಮವಹಿಸಿ ಕೆಲಸ ನಿರ್ವಹಿಸುತ್ತಿದ್ದೇವೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಐ.ಸಿ.ಡಿ.ಎಸ್ ಯೋಜನೆಯಲ್ಲಿ ಮೂರರಿಂದ ಆರು ವರ್ಷದ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ, ಪೂರಕ ಪೌಷ್ಠಿಕ ಆಹಾರ ವಿತರಣೆ, ಮಕ್ಕಳಿಗೆ ಚುಚ್ಚುಮದ್ದು ಕೊಡಿಸುವುದು, ಭಾಗ್ಯಲಕ್ಷ್ಮಿ, ಮಾತೃವಂದನಾ ಅರ್ಜಿಯನ್ನು ಫಲಾನುಭವಿಗಳಿಗೆ ನೀಡುವುದು.

ಬಿ.ಎಲ್.ಒ ಕೆಲಸ, ಕೇಂದ್ರ ಸರ್ಕಾರ ಯೋಜನೆಯಲ್ಲಿ ಪೋಷಣ್ ಟ್ರ್ಯಾಕರ್‌ನಲ್ಲಿ ಮಕ್ಕಳು ಮತ್ತು ಗರ್ಭಿಣಿ & ಬಾಣಂತಿಯರ ತೂಕ, ಎತ್ತರ ಅಳವಡಿಸುವುದು. 2020-2021-2022 ರಲ್ಲಿ ಕರೋನಾ ವಾರಿಯರ್ಸ್ ಗಳಾಗಿ, ಹೀಗೆ ಹತ್ತು ಹಲವು ಕೆಲಸಗಳನ್ನು ಕಾರ್ಯಕರ್ತೆಯರಿಂದ 50 ವರ್ಷಗಳಿಂದ ಮಾಡಿಸುತ್ತಿದೆ.

ಕನಿಷ್ಠ ಕೂಲಿಯನ್ನು ನೀಡುತ್ತಿಲ್ಲ. 11,000/ ರೂ ಗೌರವಧನ ಆಧಾರದಲ್ಲಿ ಮಹಿಳೆಯರನ್ನು ಹೀಗೆ ದುಡಿಸಿಕೊಳ್ಳುತ್ತಿರುವುದನ್ನು ನಮ್ಮ ಸಂಘಟನೆಯಿಂದ ಖಂಡಿಸುತ್ತೇವೆ.

ನಮ್ಮ ಮುಖ್ಯ ಬೇಡಿಕೆಗಳು:- 1.ಅಂಗನವಾಡಿ ಕಾರ್ಯಕರ್ತೆಯರಿಗೆ 25,000 ರೂ ಹಾಗೂ ಸಹಾಯಕಿಯರಿಗೆ 12,000 ಸಾವಿರ ರೂ ಕನಿಷ್ಠವೇತನವನ್ನು ನೀಡಬೇಕು.

2. ಅಂಗನವಾಡಿ ಕಾರ್ಯಕರ್ತೆಯರನ್ನು ಸಿ.ದರ್ಜೆ ಎಂದು & ಸಹಾಯಕಿಯರನ್ನು ಡಿ.ದರ್ಜೆ ಸರ್ಕಾರಿ ನೌಕರರೆಂದು ಪರಿಗಣಿಸಿ, ಗುಜರಾತ್ ಹೈಕೋರ್ಟ್ ನೀಡಿರುವ ಆದೇಶದ ಪ್ರಕಾರ ನಮ್ಮ ಕರ್ನಾಟಕದಲ್ಲಿಯೂ ಜಾರಿ ಮಾಡಿ, ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಎಂದು ಮನವಿ ಮಾಡಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...