ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್ ಕಾಲೇಜಿನಲ್ಲಿ ಶಿಕ್ಷಣ ಮುಂದುವರಿಕೆ ಪ್ರಮೋದ್ ಮುತಾಲಿಕ್ ಆಕ್ರೋಶ

36
ನೇಹಾ ಹಿರೇಮಠ್ ಹತ್ಯೆ ಮಾಡಿದ್ರೂ ವ್ಯಾಸಂಗ ಮುಂದುವರಿಕೆ, ಮುತಾಲಿಕ್ ಆಕ್ರೋಶ, ಕೊಲೆ ಆರೋಪಿ ಫಯಾಜ್ ಅಮಾನತು!

ಕಳೆದ ಏಪ್ರಿಲ್ 18ರಂದು ಕಾಲೇಜು ಆವರಣದಲ್ಲೇ ನೇಹಾ ಹಿರೇಮಠ್ ಹತ್ಯೆ ಪ್ರಕರಣದ ಆರೋಪಿ ಫಯಾಜ್ ಕಾಲೇಜಿನಲ್ಲಿ ವ್ಯಾಸಂಗ ಮುಂದುವರೆಸಿರುವ ವಿಚಾರ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ


ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಮತ್ತೆ ಸುದ್ದಿಗೆ ಬಂದಿದ್ದು, ಕೊಲೆ ಆರೋಪಿ ಫಯಾಜ್ ತನ್ನ ಕಾಲೇಜು ವ್ಯಾಸಂಗ ಮುಂದುವರೆಸಿರುವ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಆರೋಪಿಯನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.

ಈ ಸಂಬಂಧ ಶ್ರೀರಾಮ ಸೇನೆ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಕೂಡ ಸ್ವತಃ ನೇಹಾ ಹಿರೇಮಠ ಓದುತ್ತಿದ್ದ ಪಿ.ಸಿ. ಜಾಬಿನ್ ಕಾಲೇಜಿಗೆ ಭೇಟಿ ನೀಡಿ ಕಾಲೇಜು ಪ್ರಾಂಶುಪಾಲರೊಂದಿಗೆ ಮಾತುಕತೆ ನಡೆಸಿದ್ದರು.

ಕೊಲೆ ಮಾಡಿದ ಆರೋಪಿ ಫಯಾಜ್ ನನ್ನು ಈವರೆಗೂ ಏಕೆ ಅಮಾನತ್ತು ಮಾಡಿಲ್ಲವೆಂದು ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದೀಗ ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕಾಲೇಜು ಆಡಳಿತ ಮಂಡಳಿ ಆರೋಪಿ ಫಯಾಜ್ ನನ್ನು ಅಮಾನತು ಮಾಡಿದೆ.

ಮಾತ್ರವಲ್ಲದೇ ಆತನಿಗೆ ಪರೀಕ್ಷೆಗೂ ಅವಕಾಶ ಕೊಡದಿರಲು ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾತನಾಡಿರುವ ಪಿಸಿ ಮಾಬಿನ್ ಕಾಲೇಜ್ ಪ್ರಾಂಶುಪಾಲ ಎಲ್.ಡಿ ಹೊರಕೇರಿ, ‘ಫಯಾಜ್ 2022 ರಲ್ಲಿಬಿಸಿಎ ವ್ಯಾಸಂಗ ಮಾಡತಿದ್ದ. ಐದು ಮತ್ತು ಆರನೇ ಸೆಮಿಸ್ಟರ್ನಲ್ಲಿ ಕೆಲ ವಿಷಯಗಳಲ್ಲಿ ಫೇಲ್ ಆಗಿದ್ದ . ಇದೀಗ ಆತನಿಗೆ ನಾವು ಆತ ಕಾಲೇಜಿಗೆ ಬರಲು ಅನುಮತಿ ಕೊಡುವುದಿಲ್ಲ.

ನಾವು ಪರಿಪೂರ್ಣವಾಗಿ ಆತನನ್ನು ಅಮಾನತು ಮಾಡಿದ್ದೇವೆ ಎಂದು ಹೇಳಿದ್ದಾರೆ. ಸಿಬಿಐ ತನಿಖೆಗೆ ಆಗ್ರಹ ಇನ್ನು ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಹಿಂದೂಪರ ಸಂಘಟನೆಗಳು ಆಗ್ರಹಿಸುತ್ತಿವೆ.

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಈ ಸಂಬಂದ ಹೋರಾಟ ಆರಂಭಿಸಿದ್ದರು. ಅಲ್ಲದೆ ನೇಹಾ ಕೊಲೆಯಲ್ಲಿ ಪ್ರಭಾವಿ ಶಾಸಕನ ಕೈವಾಡ ಇದೆ ಎಂದು ಅವರು ಆರೋಪಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...