ಮುಡಾ ಪ್ರಕರಣ ದೂರುದಾರ ಸ್ನೇಹಮಯಿ ಕೃಷ್ಣ ಮೇಲೆ ವಾಮಾಚಾರ ಪ್ರಯೋಗ ಪ್ರಸಾದ್ ಅತ್ತಾವರ್ ಸೇರಿ ಸಿದ್ದರಾಮಯ್ಯ ಬೆಂಬಲಿಗರ ವಿರುದ್ಧ ದೂರು

27

ನನ್ನ ಮೇಲೆ ವಾಮಾಚಾರ ಹಾಗೂ ವಶೀಕರಣ ಪ್ರಯೋಗ ನಡೆಯುತ್ತಿದೆ ಎಂದು ಮುಡಾ ಭೂ ಅಕ್ರಮ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರು ಆರೋಪಿಸಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರ ವಿರುದ್ಧ ದೂರು ದಾಖಲಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಸ್ನೇಹಮಯಿ ಕೃಷ್ಣ ಅವರು, ಮಂಗಳೂರಿನಲ್ಲಿ ಇತ್ತೀಚಿಗೆ ಬಂಧನಕ್ಕೊಳಗಾದ ಪ್ರಸಾದ್ ಅತ್ತಾವರ ಎಂಬುವರ ಫೋನ್ ಪರಿಶೀಲಿಸಿದಾಗ ನನ್ನ ಮತ್ತು ಗಂಗರಾಜು ಅವರ ಫೋಟೋ ಇಟ್ಟು, ಪ್ರಾಣಿಗಳ ಬಲಿಕೊಟ್ಟು ವಾಮಾಚಾರ ಮಾಡಿರುವುದು ಕಂಡುಬಂದಿದೆ.


ಇದರ ಜೊತೆ ನನ್ನನ್ನು ಭೇಟಿ ಮಾಡಿ ಆಮಿಷವೊಡ್ಡಿದ್ದ ಹರ್ಷ ಮತ್ತು ಶ್ರೀನಿಧಿ ಅವರ ಹೆಸರನ್ನು ಚೀಟಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೆಲ್ಲ ನೋಡಿದಾಗ ಏನೋ ದೊಡ್ಡ ಸಂಚು ರೂಪಿಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಹೇಳಿದರು.


ತಮ್ಮ ಹಾಗೂ ಗಂಗರಾಜು ಅವರ ಫೋಟೋ ಇಟ್ಟು ಪ್ರಾಣಿ ಬಲಿ ಕೊಟ್ಟಿರುವ ವಿಚಾರವಾಗಿ ಮಾತನಾಡಿ, ಡಿ.9ರಂದು ಆ ಪೂಜೆಗಳು ನಡೆದಿವೆ, ಡಿ.13ರಂದು ಹರ್ಷ ಮತ್ತು ಶ್ರೀನಿಧಿ ಅವರು ನನ್ನನ್ನು ಭೇಟಿ ಮಾಡಿದ್ದರು. ಮುಡಾ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಬೇಕು ಎಂದು ಸಲ್ಲಿಸಿರುವ ಅರ್ಜಿಯನ್ನು ದಯವಿಟ್ಟು ವಾಪಸ್ ತೆಗೆದುಕೊಳ್ಳಿ

. ನಿಮಗೆ ಎಷ್ಟು ದುಡ್ಡು ಬೇಕೋ ಅಷ್ಟು ಕೊಡುತ್ತೇವೆ ಎಂದು ಅವರು ಹೇಳಿದ್ದರು. ಇದರ ಜೊತೆಗೆ ನನ್ನ ಮಗನ ಜೊತೆ ಮಾತನಾಡಿ, ನಮ್ಮ ಬಾಸ್ ಮಂಗಳೂರಿನಲ್ಲಿದ್ದಾರೆ ಎಂದು ಪ್ರಸಾದ್ ಅತ್ತಾವರ್ ಅವರ ಫೋಟೋ ತೋರಿಸಿ, ಇರುವ ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ. ಅವರೇ ನೀವು ಹೋಗಿ ಕೆಲಸ ಆಗುತ್ತದೆ ಎಂದು ಹೇಳಿ ಕಳುಹಿಸಿದ್ದರು ಎಂದು ಹೇಳಿದ್ದರು

. ಇದರಲ್ಲಿ ಸಾಕಷ್ಟು ಅನುಮಾನಾಸ್ಪದ ಸಂಗತಿಗಳು ಕಂಡು ಬಂದಿರುವುದರಿಂದ ಈ ಬಗ್ಗೆ ಸಮಗ್ರ ತನಿಖೆ ನಡೆಸಿದರೆ ಇದರ ಹಿಂದೆ ಯಾರಿದ್ದಾರೆ, ಯಾವ ಕಾರಣಕ್ಕೆ ಈ ರೀತಿ ಮಾಡಿದ್ದಾರೆ ಎಂದು ಗೊತ್ತಾಗುತ್ತದೆ. ಘಟನೆ ಸಂಬಂಧ ಈಗಾಗಲೇ ಬರ್ಕೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ವಿಚಾರ ಸಂಬಂಧ ನನ್ನ ಬಳಿ ಇರುವ ಸಾಕ್ಷಿಗಳನ್ನು ಪೊಲೀಸರಿಗೆ ನೀಡುತ್ತೇನೆಂದು ತಿಳಿಸಿದರು.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...