2022 ಬಂಗಾಳ ಬಾಂಬ್ ಸ್ಫೋಟ ಪ್ರಕರಣ: ಪ್ರಮುಖ ಆರೋಪಿ ಬಂಧಿಸಿದ NIA

28

2022ರಲ್ಲಿ ಪಶ್ಚಿಮ ಬಂಗಾಳದ ಭೂಪತಿನಗರದಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಮೂವರು ಮೃತಪಟ್ಟಿದ್ದರು. ಪ್ರಕರಣದ ಮುಖ್ಯ ತನಿಖಾಧಿಕಾರಿಯ ನಿರಂತರ ಪ್ರಯತ್ನದ ನಂತರ ಪುರ್ಬಾ ಮೇದಿನಿಪುರ ಜಿಲ್ಲೆಯ ಭೂಪತಿನಗರದ ನಿವಾಸಿ ಪಚಾನನ್ ಘೋರೈ ಅವರನ್ನು ಶುಕ್ರವಾರ ಬಂಧಿಸಲಾಗಿದೆ

. ತನಿಖೆಯ ಸಂದರ್ಭದಲ್ಲಿ ಆರೋಪಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ

. ರಾಜ್ ಕುಮಾರ್ ಮನ್ನಾ ಎಂಬವರ ಮನೆಯಲ್ಲಿ ಸಂಭವಿಸಿದ ಹೆಚ್ಚಿನ ತೀವ್ರತೆಯ ಸ್ಫೋಟದಲ್ಲಿ ಮಾಲೀಕ ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಬುದ್ಧದೇಬ್ ಮನ್ನಾ ಅಲಿಯಾಸ್ ಲಾಲು ಮತ್ತು ಬಿಸ್ವಜಿತ್ ಗಯೆನ್ ತದನಂತರ ಸಾವನ್ನಪ್ಪಿದ್ದರು.


ಡಿಸೆಂಬರ್ 20, 2022 ರಂದು ರಾಜ್ಯ ಪೊಲೀಸರಿಂದ ತನಿಖೆಯನ್ನು ವಹಿಸಿಕೊಂಡ NIA, ಈ ಪ್ರದೇಶದಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರ ಹೆಚ್ಚಿಸಲು, ಕಚ್ಚಾ ಬಾಂಬ್‌ಗಳನ್ನು ತಯಾರಿಸಲು ಸ್ಫೋಟಕಗಳ ಪೂರೈಕೆಗೆ ಸಂಬಂಧಿಸಿದ ಕ್ರಿಮಿನಲ್ ಪಿತೂರಿಯ ಪರಿಣಾಮವಾಗಿ ಸ್ಫೋಟ ಸಂಭವಿಸಿದೆ ಎಂದು ಹೇಳಿತ್ತು.

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...