thekarnatakatoday.com
Crime

2022 ಬಂಗಾಳ ಬಾಂಬ್ ಸ್ಫೋಟ ಪ್ರಕರಣ: ಪ್ರಮುಖ ಆರೋಪಿ ಬಂಧಿಸಿದ NIA

2022ರಲ್ಲಿ ಪಶ್ಚಿಮ ಬಂಗಾಳದ ಭೂಪತಿನಗರದಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಮೂವರು ಮೃತಪಟ್ಟಿದ್ದರು. ಪ್ರಕರಣದ ಮುಖ್ಯ ತನಿಖಾಧಿಕಾರಿಯ ನಿರಂತರ ಪ್ರಯತ್ನದ ನಂತರ ಪುರ್ಬಾ ಮೇದಿನಿಪುರ ಜಿಲ್ಲೆಯ ಭೂಪತಿನಗರದ ನಿವಾಸಿ ಪಚಾನನ್ ಘೋರೈ ಅವರನ್ನು ಶುಕ್ರವಾರ ಬಂಧಿಸಲಾಗಿದೆ

. ತನಿಖೆಯ ಸಂದರ್ಭದಲ್ಲಿ ಆರೋಪಿ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ

. ರಾಜ್ ಕುಮಾರ್ ಮನ್ನಾ ಎಂಬವರ ಮನೆಯಲ್ಲಿ ಸಂಭವಿಸಿದ ಹೆಚ್ಚಿನ ತೀವ್ರತೆಯ ಸ್ಫೋಟದಲ್ಲಿ ಮಾಲೀಕ ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಬುದ್ಧದೇಬ್ ಮನ್ನಾ ಅಲಿಯಾಸ್ ಲಾಲು ಮತ್ತು ಬಿಸ್ವಜಿತ್ ಗಯೆನ್ ತದನಂತರ ಸಾವನ್ನಪ್ಪಿದ್ದರು.


ಡಿಸೆಂಬರ್ 20, 2022 ರಂದು ರಾಜ್ಯ ಪೊಲೀಸರಿಂದ ತನಿಖೆಯನ್ನು ವಹಿಸಿಕೊಂಡ NIA, ಈ ಪ್ರದೇಶದಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರ ಹೆಚ್ಚಿಸಲು, ಕಚ್ಚಾ ಬಾಂಬ್‌ಗಳನ್ನು ತಯಾರಿಸಲು ಸ್ಫೋಟಕಗಳ ಪೂರೈಕೆಗೆ ಸಂಬಂಧಿಸಿದ ಕ್ರಿಮಿನಲ್ ಪಿತೂರಿಯ ಪರಿಣಾಮವಾಗಿ ಸ್ಫೋಟ ಸಂಭವಿಸಿದೆ ಎಂದು ಹೇಳಿತ್ತು.

Related posts

ಜಮ್ಮು ಕಾಶ್ಮೀರ ಸಹೋದ್ಯೋಗಿಯ ಹತ್ಯೆ ನಡೆಸಿ ಆತ್ಮಹತ್ಯೆಗೆ ಶರಣಾದ ಪೊಲೀಸ್

The Karnataka Today

ಗರ್ಭಿಣಿ ಹಸುವಿನ ತಲೆ ಕಡಿದ ಆರೋಪಿ ಫೈಝಲ್ ನಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನ ಆರೋಪಿ ಫೈಝಲ್ ಕಾಲಿಗೆ ಗುಂಡಿಕ್ಕಿದ ಪೊಲೀಸರು

The Karnataka Today

ಗೆಳತಿ ಹಾಗೂ ಆಕೆಯ ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆಗೈದ   ಆರೋಪಿ ಅಫಾನ್

The Karnataka Today

Leave a Comment