ಪ್ರಯಾಗ್ ರಾಜ್ ಮಹಾಕುಂಭಮೇಳ  ಮೂರನೇ ಪುಣ್ಯ ಸ್ನಾನ ಹರಿದು ಬಂದ ಭಕ್ತ ಸಾಗರ

26

“ಮಹಾಕುಂಭಮೇಳದ 21ನೇ ದಿನದ ಮೂರನೇ ಮತ್ತು ಅಂತಿಮ ಪುಣ್ಯ ಸ್ನಾನವು ಸೋಮವಾರ ಬೆಳಿಗ್ಗೆ 5 ಗಂಟೆಗೆ ಪ್ರಾರಂಭವಾಗಿದ್ದು, ಮಂತ್ರಗಳ ಪಠಣ-‘ಹರ್ ಹರ್ ಮಹಾದೇವ್’ ಘೋಷಣೆಗಳು ಮುಗಿಲು ಮುಟ್ಟಿದೆ.

ಭಾನುವಾರ ಬೆಳಿಗ್ಗೆ 9:44 ಕ್ಕೆ ಬಸಂತ್ ಪಂಚಮಿ ಆರಂಭವಾಗುತ್ತಿದ್ದಂತೆ, ಸಾಮಾನ್ಯ ಭಕ್ತರು ಅಮೃತ ಸ್ನಾನವನ್ನು ಪ್ರಾರಂಭಿಸಿದರು. ಇಂದು ಬೆಳಿಗ್ಗೆ 5 ಗಂಟೆಯಿಂದ ಸಾಧುಗಳು ಪುಣ್ಯ ಸ್ನಾನವನ್ನು ಆರಂಭಿಸಿದರು.

ಈ ನಡುವೆ ಮೌನಿ ಅಮಾವಾಸ್ಯೆಯಂದು ಮಹಾ ಕುಂಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ 30 ಮಂದಿ ಸಾವನ್ನಪ್ಪಿದ್ದು, 90ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದ ಹಿನ್ನೆಲೆ ಇಂಂದು ನಡೆಯುತ್ತಿರುವ ಅಮೃತ ಸ್ನಾನದ ಮೇಲೆ ಉತ್ತರಪ್ರದೇಶ ಸರ್ಕಾರ ಹದ್ದಿನ ಕಣ್ಣು ಇರಿಸಿದೆ, ತ್ರಿವೇಣಿ ಸಂಗಮದ ಘಾಟ್‌ಗಳ ಮೇಲೆ ನಿಗಾ ವಹಿಸಿರುವ ಪೊಲೀಸರು ಯಾವುದೇ ಅವಘಡಗಳಾಗದಂತೆ ಎಚ್ಚರಿಕೆ ವಹಿಸಿದ್ದಾರೆ.

ಮಹಾಕುಂಭದ ಎಲ್ಲಾ 25 ಸೆಕ್ಟರ್‌ಗಳು ಹಾಗೂ 30 ಪಾಂಟೂನ್ ಸೇತುವೆಗಳು ಮತ್ತು ಪ್ರಮುಖ ಬ್ಯಾರಿಕೇಡ್ ವಲಯಗಳ ಮೇಲ್ವಿಚಾರಣೆ ನಡೆಸಲಾಗಿದೆ. ಕಂಟ್ರೋಲ್ ರೂಂ ಮೂಲಕ ಕುಂಭ ಕಮಾಂಡ್ ತಂಡದಿಂದ ಮೇಲ್ವಿಚಾರಣೆ ನಡೆಸಲಾಗಿದೆ.

3,000ಕ್ಕೂ ಅಧಿಕ ಕ್ಯಾಮೆರಾ ಮೂಲಕ ನಿಗಾ ಇರಿಸಲಾಗಿದೆ. ಸ್ನಾನದ ನಂತರ ಘಾಟ್‌ಗಳಲ್ಲಿ ಕಾಲಹರಣ ಮಾಡದಂತೆ, ಊಟೋಪಚಾರ ಮಾಡದಂತೆ ಸರ್ಕಾರದಿಂದ ಮನವಿ ಮಾಡಲಾಗಿದೆ. ಸ್ನಾನದ ಬಳಿಕ ಘಾಟ್‌ನಿಂದ ನಿರ್ಗಮಿಸಿ ಗೊತ್ತುಪಡಿಸಿದ ಸ್ಥಳಗಳಲ್ಲಿ ಊಟೊಪಚಾರಕ್ಕೆ ಸಲಹೆ ನೀಡಲಾಗಿದೆ.

ಈಗಾಗಲೇ ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಸಭೆ ನಡೆಸಿದ್ದಾರೆ. ಈ ಹಿಂದೆ ಯಶಸ್ವಿ ಕುಂಭಮೇಳ ನಿಭಾಯಿಸಿದ್ದ ಇಬ್ಬರು ಅಧಿಕಾರಿಗಳಿಗೆ ವಿಶೇಷ ಜವಾಬ್ದಾರಿ ವಹಿಸಲಾಗಿದೆ ಎಂದು ತಿಳಿದುಬಂದಿದೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಸಂತ ಪಂಚಮಿಯ ‘ಅಮೃತ ಸ್ನಾನ’ದ ಕುರಿತು ನಿರಂತರವಾಗಿ ಮಾಹಿತಿ ಪಡೆಯುತ್ತಿದ್ದು, ಬೆಳಿಗ್ಗೆ 3.30 ರಿಂದ ತಮ್ಮ ಅಧಿಕೃತ ನಿವಾಸದ ವಾರ್ ರೂಮಿನಲ್ಲಿ ಡಿಜಿಪಿ, ಗೃಹ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡುತ್ತಿದ್ದಾರೆಂದು ತಿಳಿದುಬಂದಿದೆ.

ಮಹಾಕುಂಭ ಮೇಳದಲ್ಲಿ ನಡೆಯುವ ಪವಿತ್ರ ಶಾಹಿಸ್ನಾನಗಳಲ್ಲಿ ವಸಂತ ಪಂಚಮಿ ಪ್ರಮುಖವಾಗಿದೆ. ಫೆ.12ರಂದು ಮಾಫ ಪೂರ್ಣಿಮೆ ಮತ್ತು ಫೆ.26ರಂದು ಮಹಾಶಿವರಾತ್ರಿಯ ದಿನ ಕೊನೆ ಪುಣ್ಯ ಸ್ನಾನ ನೆರವೇರಲಿವೆ

. ಜ.13ರಂದು ಆರಂಭವಾದ ಕುಂಭಮೇಳಕ್ಕೆ ಇದೂವರೆಗೆ 33 ಕೋಟಿ ಭಕ್ತರು ಭೇಟಿ ನೀಡಿದ್ದಾರೆಂದು ವರದಿಗಳು ತಿಳಿಸಿವೆ

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ಲಖನೌ: ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು...

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...