ರೋಟರ್ಯಾಕ್ಟ್ ಕ್ಲಬ್ ಉಡುಪಿ ವತಿಯಿಂದ ಆರೋಗ್ಯ ಹಾಗೂ ಸ್ವಚ್ಛತಾ ಅರಿವು ಅಭಿಯಾನ ಉದ್ಘಾಟನೆ

64

ಉಡುಪಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಗ್ರಿ ನೋಳೇ ಶಾಲೆಯಲ್ಲಿ ರೋಟರ್ಯಾಕ್ಟ್ ಕ್ಲಬ್ ಉಡುಪಿ ವತಿಯಿಂದ ಆರೋಗ್ಯ ಹಾಗೂ ಸ್ವಚ್ಛತಾ ಅರಿವು ಅಭಿಯಾನವನ್ನು ಉದ್ಘಾಟಿಸಲಾಯಿತು.

ಉಡುಪಿಯಲ್ಲಿ ಮುಂಚೂಣಿಯಲ್ಲಿರುವ ಒಂದು ಯುವಕ – ಸಾಮಾಜಿಕ ಸಂಘಟನೆಯಾದ ರೋಟರ್ಯಾಕ್ಟ್ ಕ್ಲಬ್ ಉಡುಪಿ ಯ ಸದಸ್ಯರು, ಶಾಲಾ ಮಕ್ಕಳಲ್ಲಿ ಆರೋಗ್ಯ ಹಾಗು ಸ್ವಚ್ಛತೆಯ ಅರಿವನ್ನು ಹೆಚ್ಚಿಸುವ ಸಲುವಾಗಿ ಹಲವಾರು ಶಾಲೆಗಳಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಆಶಯವಿಟ್ಟುಕೊಂಡು,

ಇಂದು ಸಗ್ರಿ ಶಾಲೆಯಲ್ಲಿ ಮೊದಲ ಕಾರ್ಯಕ್ರಮ ಹಾಗು ಉದ್ಘಾಟನಾ ಸಮಾರಂಭ ವನ್ನು ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಖ್ಯಾತ ವೈದ್ಯರಾದ ಡಾ. ರಾಜಲಕ್ಷ್ಮಿ ಅವರು ದೀಪ ಬೆಳಗಿಸಿ ಸ್ವಚ್ಛತೆ ಹಾಗೂ ಆರೋಗ್ಯದ ಕುರಿತು ವಿದ್ಯಾರ್ಥಿಗಳಿಗೆ ವಿಶೇಷ ಅವಧಿಯನ್ನುತೆಗೆದುಕೊಳ್ಳುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಆದ ಶ್ರೀಮತಿ ಕುಸುಮ ಅವರು ಹಾಗು ರೋಟರಿ ಉಡುಪಿಯ ರೋಟಾರ್ಯಾಕ್ಟ್ ಸಭಾಪತಿ ರೋ. ಬಿ ಕೆ ನಾರಾಯಣ್ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರೋಟಾರ್ಯಾಕ್ಟ್ ಉಡುಪಿಯ ಅಧ್ಯಕ್ಷರಾದ ಅಂಶ್ ಕೋಟ್ಯಾನ್ ಸ್ವಾಗತಿಸಿದರು.

ರೋಟಾರ್ಯಾಕ್ಟ್ ಕ್ಲಬ್ ಉಡುಪಿಯ ಸಲಹೆಗಾರರಾದ ಶ್ರೀಹರಿ ಕೆರೆಕೊಡಿಗೆ ಹಾಗು ಸಾಮಾಜಿಕ ಕಾರ್ಯಗಳ ನಿರ್ದೇಶಕಿಯಾದ ಅಪೂರ್ವ ಬೈಕಾಡಿ ಇವರು ಕಾರ್ಯಕ್ರಮ ನಿರೂಸಿದರು.

ಕಾರ್ಯಕ್ರಮದಲ್ಲಿ ರೊಟರಯಾಕ್ಟ್ ಸದಸ್ಯರಾದ ಅರ್ಜುನ್ ರಾವ್, ಮಧುರ ಮೂರ್ತಿ, ಹಾಗು ಇತರ ರೊಟರಾಕ್ಟ್ ಸದಸ್ಯರು ಹಾಗೂ ಶಾಲಾ ಸಿಬ್ಬಂಧಿವರ್ಗದವರೂ ಉಪಸ್ಥಿತರಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಪಡುಬಿದ್ರಿ  ಕಡಲು ಕೊರೆತದಿಂದ ರಕ್ಷಣೆಗೆ  ತಡೆಗೋಡೆ ನಿರ್ಮಾಣಕ್ಕೆ ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ ವಿ ಅಮೀನ್ ಮನವಿ

ಪಡುಬಿದ್ರಿ, ಜು. 4:** ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ...

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್...

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ...