ರೋಟರ್ಯಾಕ್ಟ್ ಕ್ಲಬ್ ಉಡುಪಿ ವತಿಯಿಂದ ಆರೋಗ್ಯ ಹಾಗೂ ಸ್ವಚ್ಛತಾ ಅರಿವು ಅಭಿಯಾನ ಉದ್ಘಾಟನೆ

3

ಉಡುಪಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಗ್ರಿ ನೋಳೇ ಶಾಲೆಯಲ್ಲಿ ರೋಟರ್ಯಾಕ್ಟ್ ಕ್ಲಬ್ ಉಡುಪಿ ವತಿಯಿಂದ ಆರೋಗ್ಯ ಹಾಗೂ ಸ್ವಚ್ಛತಾ ಅರಿವು ಅಭಿಯಾನವನ್ನು ಉದ್ಘಾಟಿಸಲಾಯಿತು.

ಉಡುಪಿಯಲ್ಲಿ ಮುಂಚೂಣಿಯಲ್ಲಿರುವ ಒಂದು ಯುವಕ – ಸಾಮಾಜಿಕ ಸಂಘಟನೆಯಾದ ರೋಟರ್ಯಾಕ್ಟ್ ಕ್ಲಬ್ ಉಡುಪಿ ಯ ಸದಸ್ಯರು, ಶಾಲಾ ಮಕ್ಕಳಲ್ಲಿ ಆರೋಗ್ಯ ಹಾಗು ಸ್ವಚ್ಛತೆಯ ಅರಿವನ್ನು ಹೆಚ್ಚಿಸುವ ಸಲುವಾಗಿ ಹಲವಾರು ಶಾಲೆಗಳಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಆಶಯವಿಟ್ಟುಕೊಂಡು,

ಇಂದು ಸಗ್ರಿ ಶಾಲೆಯಲ್ಲಿ ಮೊದಲ ಕಾರ್ಯಕ್ರಮ ಹಾಗು ಉದ್ಘಾಟನಾ ಸಮಾರಂಭ ವನ್ನು ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಖ್ಯಾತ ವೈದ್ಯರಾದ ಡಾ. ರಾಜಲಕ್ಷ್ಮಿ ಅವರು ದೀಪ ಬೆಳಗಿಸಿ ಸ್ವಚ್ಛತೆ ಹಾಗೂ ಆರೋಗ್ಯದ ಕುರಿತು ವಿದ್ಯಾರ್ಥಿಗಳಿಗೆ ವಿಶೇಷ ಅವಧಿಯನ್ನುತೆಗೆದುಕೊಳ್ಳುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಆದ ಶ್ರೀಮತಿ ಕುಸುಮ ಅವರು ಹಾಗು ರೋಟರಿ ಉಡುಪಿಯ ರೋಟಾರ್ಯಾಕ್ಟ್ ಸಭಾಪತಿ ರೋ. ಬಿ ಕೆ ನಾರಾಯಣ್ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರೋಟಾರ್ಯಾಕ್ಟ್ ಉಡುಪಿಯ ಅಧ್ಯಕ್ಷರಾದ ಅಂಶ್ ಕೋಟ್ಯಾನ್ ಸ್ವಾಗತಿಸಿದರು.

ರೋಟಾರ್ಯಾಕ್ಟ್ ಕ್ಲಬ್ ಉಡುಪಿಯ ಸಲಹೆಗಾರರಾದ ಶ್ರೀಹರಿ ಕೆರೆಕೊಡಿಗೆ ಹಾಗು ಸಾಮಾಜಿಕ ಕಾರ್ಯಗಳ ನಿರ್ದೇಶಕಿಯಾದ ಅಪೂರ್ವ ಬೈಕಾಡಿ ಇವರು ಕಾರ್ಯಕ್ರಮ ನಿರೂಸಿದರು.

ಕಾರ್ಯಕ್ರಮದಲ್ಲಿ ರೊಟರಯಾಕ್ಟ್ ಸದಸ್ಯರಾದ ಅರ್ಜುನ್ ರಾವ್, ಮಧುರ ಮೂರ್ತಿ, ಹಾಗು ಇತರ ರೊಟರಾಕ್ಟ್ ಸದಸ್ಯರು ಹಾಗೂ ಶಾಲಾ ಸಿಬ್ಬಂಧಿವರ್ಗದವರೂ ಉಪಸ್ಥಿತರಿದ್ದರು.

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...