ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಸುಳಿವು ನೀಡಿದ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

57

“ಈಗಾಗಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್‌ ನಾಯಕರು ನಡುವೆ ಪೈಪೋಟಿ ಆರಂಭವಾಗಿದ್ದು, ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಮಹತ್ವದ ಸುಳಿವು ನೀಡಿದ್ದಾರೆ

. ಇಂದು ಕಲಬುರಗಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಶೀಘ್ರದಲ್ಲೇ ಕೆಲವು ರಾಜ್ಯಗಳಲ್ಲಿ ಅಧ್ಯಕ್ಷರ ಬದಲಾವಣೆ ಆಗುತ್ತದೆ. ಒಡಿಶಾದಲ್ಲಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದೇನೆ. ಅಲ್ಲಿ ಹಿಂದುಳಿದ ವರ್ಗದವರು ಪಿಸಿಸಿ ಅಧ್ಯಕ್ಷರಾಗಿದ್ದಾರೆ.


ಬೇರೆ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂದರು. ಇದೇ ವೇಳೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ, ಈ ಬಗ್ಗೆ ನಿರ್ದಿಷ್ಟವಾಗಿ ನಾನು ಹೇಳಲು ಸಾಧ್ಯವಾಗುವುದಿಲ್ಲ.

ಬಾಕಿ ಉಳಿದ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಬದಲಾವಣೆ ಆಗುತ್ತದೆ. ಇನ್ನೆರಡು ದಿನಗಳಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಇನ್ನು ಎಂಟು ದಿನಗಳಲ್ಲಿ ನಮ್ಮಿಂದಲೇ ಪ್ರಕಟಣೆ ಹೊರ ಬೀಳಲಿದೆ ಎಂದು ಸ್ಪಷ್ಟಪಡಿಸಿದರು.

ಇನ್ನು ಸಚಿವರಾದ ಜಿ ಪರಮೇಶ್ವರ, ಸತೀಶ್ ಜಾರಕಿಹೊಳಿ ಭೇಟಿ ಬಗ್ಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಭೇಟಿ ದೊಡ್ಡ ಮಾತಾ? ಎಂದು ಪ್ರಶ್ನೆ ಮಾಡಿದರು.

ನಾನು ಎಐಸಿಸಿ ಅಧ್ಯಕ್ಷ, ಎಲ್ಲರೂ ಬಂದು ಭೇಟಿ ಮಾಡುತ್ತಾರೆ ಇದು ದೊಡ್ಡ ಮಾತಾ? ನಮ್ಮ‌ ರಾಜ್ಯದವರಿಗೆ ಬೇಗ ಅಪಾಯಿಂಟಮೆಂಟ್ ಸಿಗುತ್ತೆ, ಬಂದವರಿಗೆ ಬೇಡ ಅನ್ನಲು ಆಗುತ್ತಾ? ಪರಮೇಶ್ವರ್ ಬರ್ತಾರೆ, ಡಿಕೆ ಶಿವಕುಮಾರ ಬರ್ತಾರೆ, ಸತೀಶ್ ಜಾರಕಿಹೊಳಿ ಬರ್ತಾರೆ, ಸಿದ್ದರಾಮಯ್ಯ ಫೋನ್ ಮಾಡ್ತಾರೆ ಇದರಲ್ಲಿ ವಿಶೇಷ ಏನಿಲ್ಲ ಎಂದರು.


Leave a comment

Leave a Reply

Your email address will not be published. Required fields are marked *

Related Articles

ನೀಟ್ ಪರೀಕ್ಷೆ ನಡೆಸುವ ಎನ್ ಟಿಎನಲ್ಲಿ ಮಹತ್ವದ ಬದಲಾವಣೆ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರಕಾರ

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿ ಪ್ರತಿಭಟನೆ ದೇಶಾದ್ಯಂತ ಹಬ್ಬುತ್ತಿದ್ದಂತೆ ಎಚ್ಚೇತ ಕೇಂದ್ರ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ‘ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ...

ವಂದೇ ಮಾತರಂ’ಗೆ ಅವಮಾನಿಸಿದರೆ 3 ವರ್ಷ ಜೈಲು ಶಿಕ್ಷೆ: ನಾಳೆ ಸಂಸತ್ತಿನಲ್ಲಿ ಮಸೂದೆ ಮಂಡನೆ

ನವದೆಹಲಿ: ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು,...

ಕುಂಭಮೇಳ ವೈರಲ್ ಯುವತಿ ಮೊನಾಲಿಸಾ ದಂಪತಿಗಳಿಗೆ ನೀಡಿದ್ದ ಪೊಲೀಸ್ ರಕ್ಷಣೆಯನ್ನು ಹಿಂಪಡೆದುಕೊಂಡ ಕೇರಳ ಹೈ ಕೋರ್ಟ್

“ಕೊಚ್ಚಿ: ಕುಂಭಮೇಳ 2025 ರಲ್ಲಿ ಸಾಕಷ್ಟು ವೈರಲ್‌ ಆಗಿದ್ದ ಯುವತಿ ಮೊನಾಲಿಸಾ ಭೋಸ್ಲೆ ಹಾಗೂ ಆಕೆಯ...