ರಾಜಕೀಯ ಪ್ರಯತ್ನ ವಿಫಲವಾಗಬಹುದು, ಪ್ರಾರ್ಥನೆಗೆ ಗೆಲುವು ನಿಶ್ಚಿತ: ಡಿಸಿಎಂ ಡಿಕೆ ಶಿವಕುಮಾರ್

3

ರಾಜಕೀಯ ಪ್ರಯತ್ನ ವಿಫಲವಾಗಬಹುದು, ಪ್ರಾರ್ಥನೆಗೆ ಗೆಲುವು ನಿಶ್ಚಿತ: ಡಿಸಿಎಂ ಡಿಕೆ ಶಿವಕುಮಾರ್ ಮಾರ್ಮಿಕ ಟ್ವೀಟ್! ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಮುಂದಿಟ್ಟು ಉದ್ದೇಶಪೂರ್ವಕವಾಗಿಯೇ ಡಿಕೆಶಿ ಪ್ರಭಾವವನ್ನು ಕುಗ್ಗಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.


ಬೆಂಗಳೂರು: ಕಾಂಗ್ರೆಸ್ ನಲ್ಲಿ ಅಧ್ಯಕ್ಷರ ಬದಲಾವಣೆ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಅಲ್ಲದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು, ‘ಕೆಲವು ರಾಜ್ಯಗಳ ಪ್ರದೇಶ ಕಾಂಗ್ರೆಸ್‌ ಸಮಿತಿಗಳ (ಪಿಸಿಸಿ) ಅಧ್ಯಕ್ಷರನ್ನು ಸದ್ಯವೇ ಬದಲಾಯಿಸಲಾಗುವುದು ಎಂದು ಹೇಳಿರುವುದು

ಕಾಂಗ್ರೆಸ್‌ ವಲಯದಲ್ಲಿ ತೀವ್ರ ಚರ್ಚೆಗೂ ಕಾರಣವಾಗಿದೆ. ಕಲಬುರಗಿಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಶೀಘ್ರದಲ್ಲೇ ಕೆಲವು ರಾಜ್ಯಗಳಲ್ಲಿ ಅಧ್ಯಕ್ಷರ ಬದಲಾವಣೆ ಆಗುತ್ತದೆ.

ಒಡಿಶಾದಲ್ಲಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದೇನೆ. ಅಲ್ಲಿ ಹಿಂದುಳಿದ ವರ್ಗದವರು ಪಿಸಿಸಿ ಅಧ್ಯಕ್ಷರಾಗಿದ್ದಾರೆ. ಬೇರೆ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂದು ಹೇಳಿದ್ದರು.

ಇನ್ನು ರಾಜ್ಯದಲ್ಲೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವಂತೆ ದಲಿತ ಸಚಿವರು, ಕೆಲವು ಶಾಸಕರು ಒತ್ತಡ ಹೇರುತ್ತಿರುವುದು ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕುತ್ತು ಎಂದು ಹೇಳಲಾಗುತ್ತಿದೆ.

ಇನ್ನು ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಬೆನ್ನಲ್ಲೇ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದರು. ಪ್ರಯತ್ನ ವಿಫಲವಾಗಬಹುದು, ಪ್ರಾರ್ಥನೆಗೆ ಗೆಲುವು ನಿಶ್ಚಿತ ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕ ಚುನಾವಣೆ ಗೆಲುವಿನ ನಂತರ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರ ಮಧ್ಯೆ ಸಿಎಂ ಹುದ್ದೆ ಶೇರಿಂಗ್ ಕುರಿತು ಚರ್ಚೆಗಳು ನಡೆದಿವೆ ಎನ್ನಲಾಗಿದೆ

. ಹೀಗಾಗಿ ಮುಖ್ಯಮಂತ್ರಿ ಗಾದಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಲೇ ಬರುತ್ತಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಮುಂದಿಟ್ಟು ಉದ್ದೇಶಪೂರ್ವಕವಾಗಿಯೇ ಡಿಕೆಶಿ ಪ್ರಭಾವವನ್ನು ಕುಗ್ಗಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಡಿಕೆ ಶಿವಕುಮಾರ್ ಟ್ವೀಟ್ ಗೆ ಹಲವರು ಪ್ರತಿಕ್ರಿಯಿಸಿದ್ದಾರೆ. ನೀವು ಬಿಜೆಪಿಗೆ ಬಂದು ಬಿಡಿ ಸರ್ ಅಭಿವೃದ್ಧಿ ಆದರೂ ಮಾಡಬೋದು.

ಕಾಂಗ್ರೆಸ್ ನಲ್ಲಿ ಇದ್ದರೆ ಏನೂ ಪ್ರಯೋಜನವಿಲ್ಲ. ಕಾಂಗ್ರೆಸ್ ನಲ್ಲಿ ಗೆದ್ದರೂ ಸೋತಂತೆ. ಕಾಂಗ್ರೆಸ್ ಸಿದ್ದಾಂತವಿಲ್ಲದ ಪಕ್ಷ ಎಂದು ಕಮೆಂಟ್ ಮಾಡುತ್ತಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...