thekarnatakatoday.com
Crime

ಕಾರವಾರಹಾಗೂ ಕೊಚ್ಚಿ ನೌಕಾ ಸೇನಾ ನೆಲೆಗಳ ಮಾಹಿತಿ ಪಾಕಿಸ್ತಾನಕ್ಕೆ ನೀಡುತ್ತಿದ್ದ ಮೂವರ ಬಂಧನ

“ಪಾಕಿಸ್ತಾನ ಮೂಲದ ಗುಪ್ತಚರ ಅಧಿಕಾರಿಗಳಿಗೆ ರಕ್ಷಣಾ ಇಲಾಖೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಮೂವರನ್ನು ಎನ್ ಐ ಎ ಬಂಧಿಸಿದೆ.

ಕಾರವಾರ ನೌಕಾ ನೆಲೆ ಮತ್ತು ಕೊಚ್ಚಿ ನೌಕಾ ನೆಲೆಯಲ್ಲಿರುವ ಭಾರತೀಯ ರಕ್ಷಣಾ ಸಂಸ್ಥೆಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಬಂಧಿತ ಆರೋಪಿಗಳು ಹಂಚಿಕೊಳ್ಳುತ್ತಿದ್ದರು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಪ್ರಕಟಣೆಯಲ್ಲಿ ತಿಳಿಸಿದೆ.

ವೇತನ್ ಲಕ್ಷ್ಮಣ್ ತಂಡೇಲ್ ಮತ್ತು ಅಕ್ಷಯ್ ರವಿ ನಾಯಕ್ ಅವರನ್ನು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಂಧಿಸಲಾಗಿದ್ದರೆ, ಅಭಿಲಾಷ್ ಪಿಎ ಅವರನ್ನು ಕೇರಳದ ಕೊಚ್ಚಿಯಿಂದ ಬಂಧಿಸಲಾಗಿದೆ ಎಂದು ಎನ್ಐಎ ತಿಳಿಸಿದೆ.

ಮಂಗಳವಾರ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಬಂಧಿಸಲಾದ ಈ ಮೂವರು ಆರೋಪಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಪಾಕಿಸ್ತಾನ ಗುಪ್ತಚರ ಕಾರ್ಯಾಚರಣೆ(PIO) ಗಳೊಂದಿಗೆ ಸಂಪರ್ಕದಲ್ಲಿ ಇರುವುದು ಕಂಡುಬಂದಿದೆ ಎಂದು ಎನ್ಐಎ ಹೇಳಿದೆ.

ಎನ್ಐಎ ತನಿಖೆಯ ಪ್ರಕಾರ, ಕಾರವಾರ ನೌಕಾ ನೆಲೆ ಮತ್ತು ಕೊಚ್ಚಿ ನೌಕಾ ನೆಲೆಯಲ್ಲಿರುವ ಭಾರತೀಯ ರಕ್ಷಣಾ ಸಂಸ್ಥೆಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು

ಮತ್ತು ಈ ಮಾಹಿತಿಗಾಗಿ ಅವರು ಪಿಐಒಗಳಿಂದ ಹಣ ಪಡೆಯುತ್ತಿದ್ದರು. ಈ ಮೂವರು ಸೇರಿದಂತೆ ಪ್ರಕರಣದಲ್ಲಿ ಇದುವರೆಗೆ ಒಟ್ಟು ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಎನ್ಐಎ ತಿಳಿಸಿದೆ.

Related posts

ಮಂಗಳೂರು ಹಿಂದೂ ಕಾರ್ಯಕರ್ತಸುಹಾಸ್ ಶೆಟ್ಟಿ ಹತ್ಯೆ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ ವಿಶ್ವ ಹಿಂದೂ ಪರಿಷತ್

The Karnataka Today

ಕೊಲೆ ಆರೋಪಿಗೆ ಜಾಮೀನು ನೀಡಲು  ಹೈಕೋರ್ಟ್  ನ್ಯಾಯಮೂರ್ತಿಗಳ ಹೆಸರಿನಲ್ಲಿ ಹಣ ಪಡೆದು ವಂಚಿಸಿದ್ದ  ವಕೀಲೇ ವಿರುದ್ಧ ಎಫ್ ಐ ಆರ್

The Karnataka Today

8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ ಇಬ್ಬರು ಆರೋಪಿಗಳ ಮೇಲೆ ಪೋಕ್ಸೋ ಪ್ರಕರಣ ದಾಖಲು

The Karnataka Today

Leave a Comment