ಲೋಕಸಭಾ ವಿರೋಧ ಪಕ್ಷ ಉಪನಾಯಕ ಗೌರವ್ ಗೊಗೊಯ್ ಪತ್ನಿಯಿಂದ ಐ ಎಸ್ ಐ ಸಹಚರ ಪಾಕ್ ಪ್ರಜೆ ಅಲಿ ತೌಕೀರ್ ಶೇಖ್ ಜೊತೆ ನಂಟು ::ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ

1

“ಲೋಕಸಭೆಯ ವಿರೋಧ ಪಕ್ಷದ ಉಪ ನಾಯಕ ಗೌರವ್ ಗೊಗೊಯ್ ಅವರ ಬ್ರಿಟಿಷ್ ಪತ್ನಿಯೊಂದಿಗೆ ನಂಟಿರುವ ಪಾಕ್ ಪ್ರಜೆ ಅಲಿ ತೌಕೀರ್ ಶೇಖ್ ಇಲ್ಲಿಯವರೆಗೆ 18 ಬಾರಿ ಭಾರತಕ್ಕೆ ಭೇಟಿ ನೀಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ.

ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಈ ವಿಷಯ ತಿಳಿಸಿದ ಶರ್ಮಾ, ಪ್ರಕರಣದ ಆರಂಭಿಕ ಮಾಹಿತಿಯು ಕಾಂಗ್ರೆಸ್‌ಗೆ ‘ಅತ್ಯಂತ ಮಾರಕ’ ಮತ್ತು ಅಸ್ಸಾಂನ ರಾಜಕೀಯದ ಮೇಲೆ ‘ದೊಡ್ಡ ಪರಿಣಾಮ’ ಬೀರಲಿದೆ ಎಂದರು.

ಅಲಿ ತೌಕೀರ್ ಶೇಖ್ ಭಾರತಕ್ಕೆ 18 ಬಾರಿ ಭೇಟಿ ನೀಡಿದ್ದರು ಎಂದು ಪ್ರಕರಣದ ಕುರಿತು ಅಸ್ಸಾಂ ಪೊಲೀಸ್ ಎಸ್‌ಐಟಿ ಪತ್ತೆ ಮಾಡಿದೆ. ಅವರನ್ನು ಯಾರು ಆಹ್ವಾನಿಸಿ, ಆತಿಥ್ಯ ನೀಡಿದ್ದರು ಎಂಬುದು ಈಗ ತಿಳಿಯಬೇಕಾಗಿದೆ.

ಇದು ಅಸ್ಸಾಂ ರಾಜಕೀಯದ ಮೇಲೆ ಭಾರಿ ಪರಿಣಾಮ ಬೀರಲಿದೆ. ಸತ್ಯಗಳು ಕಾಂಗ್ರೆಸ್ ಪಕ್ಷಕ್ಕೆ ಬಹಳ ಮಾರಕವಾಗಲಿವೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದರು.

ಜವಾಬ್ದಾರಿಯುತ ವ್ಯಕ್ತಿಯಾಗಿ ವಿಧಾನಸಭೆಯೊಳಗೆ ನಿಂತು ಹೇಳುತ್ತಿದ್ದೇನೆ, ಶೇಖ್ ಜಾಲವನ್ನು ಬೇಧಿಸುತ್ತೇವೆ ಎಂದು ಅಸ್ಸಾಂ ವಿಧಾನಸಭೆಗೆ ಭರವಸೆ ನೀಡುತ್ತೇನೆ. ಮೂರು ತಿಂಗಳ ಕಾಲಾವಕಾಶ ನೀಡಿ, ಆಗಸ್ಟ್ ತಿಂಗಳ ಅಧಿವೇಶನದಲ್ಲಿ ಎಲ್ಲವನ್ನೂ ತಿಳಿಸುತ್ತೇವೆ ಎಂದು ಅವರು ತಿಳಿಸಿದರು

. “ಶೇಖ್ ಅವರ ಟ್ವೀಟ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಚಟುವಟಿಕೆಗಳು ಅಸ್ಸಾಂ ವಲಸಿಗರ ಮೇಲೆ ಇವೆ. ಇದು ಭಾರತದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವ ಪ್ರಯತ್ನವಾಗಿದೆ” ಎಂದು ಅವರು ಆರೋಪಿಸಿದರು.

ಗೊಗೊಯ್ ಅವರ ಪತ್ನಿ ಎಲಿಜಬೆತ್ ಕೋಲ್ಬರ್ನ್ ಪಾಕಿಸ್ತಾನದ ಬೇಹುಗಾರಿಕೆ ISI ಜೊತೆಗೆ ಸಂಪರ್ಕ ಹೊಂದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಾಗೂ ಬಿಜೆಪಿ ವಾಗ್ದಾಳಿ ನಡೆಸುತ್ತಿವೆ.

ಅಸ್ಸಾಂ ಮತ್ತು ಭಾರತದ ಅಂತರಿಕ ವ್ಯವಹಾರ ಕುರಿತು”ಶೇಖ್ ಸಾಮಾಜಿಕ ಜಾಲತಾಣಗಳಲ್ಲಿ ಮಾಡುವ ಟ್ವೀಟ್ ಕುರಿತ ತನಿಖೆಗೆ ಅಸ್ಸಾಂ ಪೊಲೀಸರು ಸೋಮವಾರ ವಿಶೇಷ ತನಿಖಾ ತಂಡ ರಚಿಸಿದೆ.

Leave a comment

Leave a Reply

Your email address will not be published. Required fields are marked *

Related Articles

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

2008 ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ

ಮುಂಬೈ: 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್,...