ಮಾನವೀಯತೆ ಮರೆತ ಪೊಲೀಸರು ನಾಲ್ಕು ತಿಂಗಳ ಗರ್ಭಿಣಿ ಮಹಿಳೆಯನ್ನು ತಡರಾತ್ರಿವರೆಗೆ ಠಾಣೆಯಲ್ಲಿ ಕುಳ್ಳಿರಿಸಿದ್ದಕ್ಕೆ ವ್ಯಾಪಕ ಆಕ್ರೋಶ

48
ರಾಜ್ಯ ರಾಜಧಾನಿ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಗರ್ಭಿಣಿ ಮಹಿಳೆಯೊಬ್ಬರು ತಡರಾತ್ರಿವರೆಗೂ ಸಂಕಷ್ಟ ಅನುಭವಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ.


ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಕಳೆದ ದಿನ ರಾತ್ರಿ ತಡರಾತ್ರಿಯವರೆಗೂ ಗರ್ಭಿಣಿ ಮಹಿಳೆ ಪರದಾಡಿದ್ದಾರೆ. ರಾತ್ರಿ 10 ಗಂಟೆವರೆಗೂ ಠಾಣೆಯಲ್ಲಿ ನಾಲ್ಕು ತಿಂಗಳ ಗರ್ಭಿಣಿಯನ್ನು ಇರಿಸಲಾಗಿತ್ತು ಎಂಬ ಆರೋಪ ಕೇಳಿ ಬಂದಿದೆ.

ನಿಯಮದ ಪ್ರಕಾರ ಗರ್ಭಿಣಿ ಮಹಿಳೆಯನ್ನು ಸಂಜೆ ಆರು ಗಂಟೆ ಒಳಗೆ ಸಾಂತ್ವಾನ ಕೇಂದ್ರಕ್ಕೆ ಕಳುಹಿಸಬೇಕು.

ಆದರೆ ರಾತ್ರಿ 10 ಗಂಟೆವರೆಗೆ ಠಾಣೆಯಲ್ಲಿಯೇ ಪೊಲೀಸರು ಗರ್ಭಿಣಿಯನ್ನು ಇರಿಸಿಕೊಂಡಿದ್ದು, ಈ ಬಗ್ಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ

. ರಾತ್ರಿ 10 ಗಂಟೆ ಬಳಿಕ ಪೊಲೀಸರಿಂದ ಸಖಿ ಕೇಂದ್ರಕ್ಕೆ ಗರ್ಭಿಣಿಯನ್ನು ಶಿಫ್ಟ್ ಮಾಡಲಾಗಿದೆ. ಹೀಗಾಗಿ ಪೊಲೀಸರ ಮೇಲೆ ಕರ್ತವ್ಯ ಲೋಪದ ಆರೋಪ ಕೇಳಿ ಬಂದಿದೆ.

ನಿಯಮಗಳ ಪ್ರಕಾರ ಸಂಜೆ 6 ಗಂಟೆ ನಂತರ ಯಾವುದೇ ಮಹಿಳೆಯನ್ನು ಠಾಣೆಗೆ ಕರೆತರುವಂತಿಲ್ಲ. ಜೊತೆಗೆ ಠಾಣೆಯಲ್ಲಿ ಇಟ್ಟುಕೊಳ್ಳುವಂತಿಲ್ಲ.


ಆದರೆ,. ಇಲ್ಲಿ ಪೊಲೀಸರು ಆ ನಿಯಮವನ್ನು ಉಲ್ಲಂಘಿಸಿದ್ದಾರೆ. ಒಬ್ಬ ಗರ್ಭಿಣಿ ಅನ್ನೋದನ್ನು ನೋಡದೆ ಪೊಲೀಸರು ಠಾಣೆಯಲ್ಲಿ ಇರಿಸಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ

ಕೆಸಿ ಜನರಲ್ ಆಸ್ಪತ್ರೆಗೆ ನಿಯಮಿತ ತಪಾಸಣೆಗಾಗಿ ನಾಲ್ಕು ತಿಂಗಳ ಗರ್ಭಿಣಿ ತೆರಳಿದ್ದು, ಈ ವೇಳೆ ಆಸ್ಪತ್ರೆಯ ವೈದ್ಯರು ಗರ್ಭಿಣಿಯ ಆಧಾರ್ ಕಾರ್ಡ್‌ ಪರಿಶೀಲನೆ ಮಾಡಿದ್ದಾರೆ.

ಈ ವೇಳೆ ಆಕೆಗೆ ವಯಸ್ಸು 18 ವರ್ಷ, 1 ತಿಂಗಳು ಮತ್ತು 20 ದಿನಗಳು ಎಂಬುದು ಗೊತ್ತಾಗಿದೆ.

ಯುವತಿ 4 ತಿಂಗಳ ಗರ್ಭಿಣಿಯಿರುವ ಕಾರಣ 18 ವರ್ಷಕ್ಕೂ ಮೊದಲೇ ಮದುವೆಯಾಗಿರುವುದು ಗೊತ್ತಾಗಿದೆ. ಅಂದರೆ ಬಾಲ್ಯವಿವಾಹವಾಗಿರುವುದು ತಿಳಿದುಬಂದಿದೆ

. ಹೀಗಾಗಿ ಈ ಬಗ್ಗೆ ಶೇಷಾದ್ರಿಪುರಂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆಸಿಕೊಂಡಿದ್ದಾರೆ.

ಮಧ್ಯಾಹ್ನ ಎರಡು ಗಂಟೆಗೆ ಪತಿ ಹಾಗೂ ಪತ್ನಿ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಆದರೆ, ಪೊಲೀಸರು ರಾತ್ರಿ ಹತ್ತು ಗಂಟೆವರೆಗೂ ಅವರನ್ನು ಕೂರಿಸಿ ಕಾಲಹರಣ ಮಾಡಿದ್ದಾರೆಂದು ತಿಳಿದುಬಂದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ವಿಕಾಶ್ ಈ ಬಗ್ಗೆ ಇಲಾಖಾ ತನಿಖೆ ಆರಂಭಿಸಲಾಗಿದೆ ಎಂದು ಹೇಳಿದರು.

ಈ ಬಗ್ಗೆ ವರದಿಯನ್ನು ಕೋರಲಾಗಿದ್ದು, ಶೇಷಾದ್ರಿಪುರಂ ಪೊಲೀಸ್ ಅಧಿಕಾರಿಗಳ ವಿರುದ್ಧದ ಆರೋಪಗಳ ತನಿಖೆ ನಡೆಸಲು ಕೇಂದ್ರ ವಿಭಾಗದ ಡಿಸಿಪಿ ಮತ್ತು ಶೇಷಾದ್ರಿಪುರಂ ಉಪ ವಿಭಾಗದ ಎಸಿಪಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ಎಸ್ ಎಸ್ ಎಲ್ ಸಿ ತೃತೀಯ ಭಾಷೆ ವಿವಾದ: ಸಿಎಂ ಸಲಹೆ ಪಡೆಯಲು ಮುಂದಾದ ಸಚಿವ ಮಧು ಬಂಗಾರಪ್ಪ ಬದಲಾಗಲಿದೆ ಸರ್ಕಾರದ ಮುಂದಿನ ನಡೆ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ/ಗ್ರೇಡ್ ವ್ಯವಸ್ಥೆ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್...

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ...

ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆ ಯ ಚಿಂತೆ ಬಿಟ್ಟು ಐಪಿಎಲ್ ಪಂದ್ಯಾಟದ ಉಚಿತ ಟಿಕೆಟ್ ಗೆ ಮುಗಿಬಿದ್ದ ರಾಜ್ಯದ 221 ಶಾಸಕರು

ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್  ಟೂರ್ನಿಯ 11ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ...

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...