ಜಮ್ಮು ಕಾಶ್ಮೀರ ಸೇನಾ ವಾಹನದ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ

37

“ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿಯ ಹಳ್ಳಿಯೊಂದರಲ್ಲಿ ಬುಧವಾರ ಸೇನಾ ವಾಹನದ ಮೇಲೆ ಶಂಕಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಂದರ್‌ಬನಿ ಸೆಕ್ಟರ್‌ನ ಫಾಲ್ ಗ್ರಾಮದ ಬಳಿ ನಡೆದ ಅಲ್ಪಾವಧಿ ಗುಂಡಿನ ದಾಳಿಯಲ್ಲಿ ಯಾವುದೇ ಸಾವುನೋವು ಸಂಭವಿಸಿದ ಬಗ್ಗೆ ತಕ್ಷಣಕ್ಕೆ ಮಾಹಿತಿ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

ಕಾಡಿನಲ್ಲಿ ಅಡಗಿಕೊಂಡಿದ್ದ ಶಂಕಿತ ಭಯೋತ್ಪಾದಕರು, ಆ ಪ್ರದೇಶದ ಮೂಲಕ ಹಾದುಹೋಗುತ್ತಿದ್ದ ಸೇನಾ ವಾಹನದ ಮೇಲೆ ಕೆಲವು ಸುತ್ತು ಗುಂಡು ಹಾರಿಸಿದರು.

ಭಯೋತ್ಪಾದಕರನ್ನು ತಟಸ್ಥಗೊಳಿಸಲು ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದರು. ಸದ್ಯ ಸ್ಥಳದಲ್ಲಿ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ಲಖನೌ: ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು...

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...