ಕೇಂದ್ರ ಜಲ ಶಕ್ತಿ ಸಚಿವಸಿ ಆರ್ ಪಾಟೀಲ್ ರನ್ನು ಭೇಟಿಯಾದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರಾಜ್ಯದಲ್ಲಿ 6ಹೊಸ ಯೋಜನೆಗಳಿಗೆ ಅನುಮತಿ ಕೋರಿಕೆ

31

“ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ರಾಜ್ಯದ 6 ಹೊಸ ನೀರಾವರಿ ಯೋಜನೆಗಳಿಗೆ ಅನುಮೋದನೆ ಮತ್ತು ಹಣಕಾಸಿನ ನೆರವು ನೀಡುವಂತೆ ಕೋರಿದರು.

ಜೊತೆಗೆ ಈಗಾಗಲೇ ಅಸ್ತಿತ್ವದಲ್ಲಿರುವ ನೀರಾವರಿ ಯೋಜನೆಗಳಿಗೆ ಕೇಂದ್ರದಿಂದ ಅನುಮೋದನೆ ಮತ್ತು ಹಣ ಬಿಡುಗಡೆಗೂ ಮನವಿ ಮಾಡಿದರು.

ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ಅಡಿಯಲ್ಲಿ 11,123 ಕೋಟಿ ರೂ.ಗಳ ಅಂದಾಜು ವೆಚ್ಚದ ಆರು ಹೊಸ ನೀರಾವರಿ ಯೋಜನೆಗಳಿಗೆ ಅನುದಾನ ಕೋರಿದ್ದಾರೆ.

ಈ ಆರು ಹೊಸ ಪ್ರಸ್ತಾವನೆಗಳಲ್ಲಿ ಪ್ರವಾಹ ನಿರ್ವಹಣೆ ಮತ್ತು ಬೆಣ್ಣೆಹಳ್ಳದಲ್ಲಿ ಗಡಿ ಪ್ರದೇಶದ ಕಾರ್ಯಕ್ರಮ; ಭೀಮಾ ನದಿಗೆ ಅಡ್ಡಲಾಗಿ ಸೋಂತಿ ಏತ ನೀರಾವರಿ ಯೋಜನೆಯಡಿ 16,000 ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವುದು, ಮಲಪ್ರಭಾ ಕಾಲುವೆ ವಿಸ್ತರಣೆ,

ನವೀಕರಣ ಮತ್ತು ಆಧುನೀಕರಣ (ERM), ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಇಂಡಿ ಶಾಖಾ ಕಾಲುವೆ, ಘಟಪ್ರಭಾ ಬಲದಂಡೆ ಕಾಲುವೆ, ಚಿಕ್ಕೋಡಿ ಶಾಖಾ ಕಾಲುವೆ ಮತ್ತು ತುಂಗಭದ್ರಾ ಎಡದಂಡೆ ಕಾಲುವೆ ಕಾಮಗಾರಿ ಸೇರಿವೆ.

ಈ ಉದ್ದೇಶಿತ ಯೋಜನೆಗಳಿಂದ ವಿಜಯಪುರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಿಗೆ ಅನುಕೂಲವಾಗಲಿದೆ.

ಮೇಕೆದಾಟು ಯೋಜನೆಗೆ ಮಂಜೂರಾತಿ, ಭದ್ರಾ ಮೇಲ್ದಂಡೆ ಯೋಜನೆಗೆ ಆರ್ಥಿಕ ನೆರವು, ಕೃಷ್ಣಾ ಜಲವಿವಾದ ನ್ಯಾಯಮಂಡಳಿ (ಕೆಡಬ್ಲ್ಯುಡಿಟಿ-2) ತೀರ್ಪಿನ ಗೆಜೆಟ್ ಅಧಿಸೂಚನೆ, ಕಳಸಾ-ಭಂಡೂರಿ ನಾಲಾ ಯೋಜನೆಗಳಿಗೆ ಮಂಜೂರಾತಿ

, ಮಹಾನದಿಯಿಂದ ಹೆಚ್ಚುವರಿ ನೀರನ್ನು ಕೃಷ್ಣಾ-ಕಾವೇರಿ ನದಿಗೆ ಮತ್ತು ಪೆನ್ನಾರ್-ಪಾಲಾರ್ ಜಲಾನಯನ ಪ್ರದೇಶಗಳಿಗೆ ಹರಿಸುವ ಕುರಿತು ಮತ್ತು ರಾಜ್ಯದ ಇತರ ನೀರಾವರಿ ಯೋಜನೆಗಳ ಬಗ್ಗೆಯೂ ಕೇಂದ್ರ ಜಲಶಕ್ತಿ ಸಚಿವರಿಗೆ ಸಲ್ಲಿಸಿರುವ ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ಲಖನೌ: ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು...

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...