ಕೇಂದ್ರ ಜಲ ಶಕ್ತಿ ಸಚಿವಸಿ ಆರ್ ಪಾಟೀಲ್ ರನ್ನು ಭೇಟಿಯಾದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರಾಜ್ಯದಲ್ಲಿ 6ಹೊಸ ಯೋಜನೆಗಳಿಗೆ ಅನುಮತಿ ಕೋರಿಕೆ

51

“ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ರಾಜ್ಯದ 6 ಹೊಸ ನೀರಾವರಿ ಯೋಜನೆಗಳಿಗೆ ಅನುಮೋದನೆ ಮತ್ತು ಹಣಕಾಸಿನ ನೆರವು ನೀಡುವಂತೆ ಕೋರಿದರು.

ಜೊತೆಗೆ ಈಗಾಗಲೇ ಅಸ್ತಿತ್ವದಲ್ಲಿರುವ ನೀರಾವರಿ ಯೋಜನೆಗಳಿಗೆ ಕೇಂದ್ರದಿಂದ ಅನುಮೋದನೆ ಮತ್ತು ಹಣ ಬಿಡುಗಡೆಗೂ ಮನವಿ ಮಾಡಿದರು.

ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ಅಡಿಯಲ್ಲಿ 11,123 ಕೋಟಿ ರೂ.ಗಳ ಅಂದಾಜು ವೆಚ್ಚದ ಆರು ಹೊಸ ನೀರಾವರಿ ಯೋಜನೆಗಳಿಗೆ ಅನುದಾನ ಕೋರಿದ್ದಾರೆ.

ಈ ಆರು ಹೊಸ ಪ್ರಸ್ತಾವನೆಗಳಲ್ಲಿ ಪ್ರವಾಹ ನಿರ್ವಹಣೆ ಮತ್ತು ಬೆಣ್ಣೆಹಳ್ಳದಲ್ಲಿ ಗಡಿ ಪ್ರದೇಶದ ಕಾರ್ಯಕ್ರಮ; ಭೀಮಾ ನದಿಗೆ ಅಡ್ಡಲಾಗಿ ಸೋಂತಿ ಏತ ನೀರಾವರಿ ಯೋಜನೆಯಡಿ 16,000 ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವುದು, ಮಲಪ್ರಭಾ ಕಾಲುವೆ ವಿಸ್ತರಣೆ,

ನವೀಕರಣ ಮತ್ತು ಆಧುನೀಕರಣ (ERM), ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಇಂಡಿ ಶಾಖಾ ಕಾಲುವೆ, ಘಟಪ್ರಭಾ ಬಲದಂಡೆ ಕಾಲುವೆ, ಚಿಕ್ಕೋಡಿ ಶಾಖಾ ಕಾಲುವೆ ಮತ್ತು ತುಂಗಭದ್ರಾ ಎಡದಂಡೆ ಕಾಲುವೆ ಕಾಮಗಾರಿ ಸೇರಿವೆ.

ಈ ಉದ್ದೇಶಿತ ಯೋಜನೆಗಳಿಂದ ವಿಜಯಪುರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಿಗೆ ಅನುಕೂಲವಾಗಲಿದೆ.

ಮೇಕೆದಾಟು ಯೋಜನೆಗೆ ಮಂಜೂರಾತಿ, ಭದ್ರಾ ಮೇಲ್ದಂಡೆ ಯೋಜನೆಗೆ ಆರ್ಥಿಕ ನೆರವು, ಕೃಷ್ಣಾ ಜಲವಿವಾದ ನ್ಯಾಯಮಂಡಳಿ (ಕೆಡಬ್ಲ್ಯುಡಿಟಿ-2) ತೀರ್ಪಿನ ಗೆಜೆಟ್ ಅಧಿಸೂಚನೆ, ಕಳಸಾ-ಭಂಡೂರಿ ನಾಲಾ ಯೋಜನೆಗಳಿಗೆ ಮಂಜೂರಾತಿ

, ಮಹಾನದಿಯಿಂದ ಹೆಚ್ಚುವರಿ ನೀರನ್ನು ಕೃಷ್ಣಾ-ಕಾವೇರಿ ನದಿಗೆ ಮತ್ತು ಪೆನ್ನಾರ್-ಪಾಲಾರ್ ಜಲಾನಯನ ಪ್ರದೇಶಗಳಿಗೆ ಹರಿಸುವ ಕುರಿತು ಮತ್ತು ರಾಜ್ಯದ ಇತರ ನೀರಾವರಿ ಯೋಜನೆಗಳ ಬಗ್ಗೆಯೂ ಕೇಂದ್ರ ಜಲಶಕ್ತಿ ಸಚಿವರಿಗೆ ಸಲ್ಲಿಸಿರುವ ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ

Leave a comment

Leave a Reply

Your email address will not be published. Required fields are marked *

Related Articles

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ...

ಬಿಹಾರ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಭಾರತೀಯ ಜನತಾ ಪಕ್ಷದ  ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ಬುಧವಾರ ಬಿಹಾರದ 24ನೇ ಮುಖ್ಯಮಂತ್ರಿಯಾಗಿ...