ಜನಪರ ಬಜೆಟ್ ಮಂಡನೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯ

1

“ಮಾರ್ಚ್ 7 ರಂದು ಜನಪರ ಬಜೆಟ್ ಮಂಡನೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು, ರಾಜ್ಯದ ಸಾಮಾಜಿಕ ಕಲ್ಯಾಣದ ಜೊತೆಗೆ ಆರ್ಥಿಕ ಜವಾಬ್ದಾರಿ ಮತ್ತು ಅಭಿವೃದ್ಧಿಯನ್ನು ಆಧರಿಸಿ ಬಜೆಟ್ ಮಂಡನೆ ಮಾಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಯಾವುದೇ ಒಂದು ಸರ್ಕಾರ ವಿತ್ತೀಯ ಬದ್ಧತೆ ಪೂರೈಸಲು ಸಾಲ ತೆಗೆದುಕೊಳ್ಳುವುದು ಸಹಜ. ಅಂತಹ ಸಾಲವನ್ನು ಬಂಡವಾಳ ಹೂಡಿಕೆಗಳಿಗೆ ಬಳಸಬೇಕೇ ಹೊರತು.

ರಾಜಸ್ವ ವೆಚ್ಚಕ್ಕಲ್ಲ. ಆದರೆ, ಸತತ ಎರಡು ವರ್ಷ ರಾಜಸ್ವ ಕೊರತೆಯ ಬಜೆಟ್‌ ಮಂಡಿಸುವುದರೊಂದಿಗೆ ವಿತ್ತೀಯ ಹೊಣೆಗಾರಿಕೆ ಮತ್ತು ಆಯವ್ಯಯ ಕಾಯ್ದೆಯ ನಿರ್ವಹಣೆಯನ್ನು ಉಲ್ಲಂಘಿಸಿದ್ದೀರಿ.

ಎಸ್‌ಸಿಪಿ–ಟಿಎಸ್‌ಪಿ ಯೋಜನೆಗೆ ಕಾಯ್ದಿರಿಸಲಾದ ಮೊತ್ತದಲ್ಲಿ 25,426 ಕೋಟಿ ರೂಗಳನ್ನು ಇತರೆ ಯೋಜನೆಗಳಿಗೆ ಬಳಸಿಕೊಂಡಿರುವುದನ್ನು ನೀವೇ ಒಪ್ಪಿಕೊಂಡಿದ್ದೀರಿ.

ಅಲ್ಲದೇ, ಲೋಕೋಪಯೋಗಿ, ನೀರಾವರಿ, ಕಂದಾಯ ಸೇರಿದಂತೆ ನಾನಾ ಇಲಾಖೆಗಳು 6,000 ಕೋಟಿ ರೂ. ಬಿಲ್‌ ಬಾಕಿ ಉಳಿಸಿಕೊಂಡಿವೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. 15 ಬಾರಿ ಬಜೆಟ್ ಮಂಡಿಸಿರುವ ನಿಮಗೆ ಇದು ಶೋಭೆ ತರುತ್ತದೆಯೇ’ ಎಂದು ಪ್ರಶ್ನಿಸಿದ್ದಾರೆ.

ಎರಡೇ ವರ್ಷದಲ್ಲಿ 2 ಲಕ್ಷ ಕೋಟಿ ರೂ.ಸಾಲದ ಹೊರೆಯನ್ನು ಕನ್ನಡಿಗರ ಮೇಲೆ ಹೊರಿಸಿದ್ದೀರಿ. ಮುಂಬರುವ ಬಜೆಟ್‌ನಲ್ಲಿ ಇನ್ನೆಷ್ಟು ಸಾಲದ ಹೊರೆ ಹೊರಿಸುತ್ತೀರಿ ಎಂಬ ಆತಂಕ ಜನರನ್ನು ಕಾಡುತ್ತಿದೆ.

ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಗಳಿಗೆ ರಾಜ್ಯ ಸರ್ಕಾರ ಅಗತ್ಯ ಹಣ ಹಂಚಿಕೆ ಮಾಡಲು ವಿಫಲವಾದರೆ, ಕೇಂದ್ರದ ಸಹಾಯಧನ ಕಳೆದುಕೊಳ್ಳುವ ಅಪಾಯವಿದೆ’ ಎಂದು ಎಚ್ಚರಿಸಿದ್ದಾರೆ.

ನೌಕರರಿಗೆ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲದಂತಾಗಿದೆ. ನಿಮ್ಮ ಸರ್ಕಾರ ಈಗಾಗಲೇ ನೀರು, ಹಾಲು, ಪೆಟ್ರೋಲ್, ವಿದ್ಯುತ್, ತೆರಿಗೆ ಮತ್ತು ಇತರೆ ಆಗತ್ಯ ವಸ್ತುಗಳ ಬೆಲೆಯನ್ನು ಹೆಚ್ಟಳ ಮಾಡಿದ್ದು, ಇದನ್ನು ಬಿಜೆಪಿ ವಿರೋಧಿಸುತ್ತದೆ. ‘

ಮುಂದಿನ ಬಾರಿ ಬಜೆಟ್‌ ಮಂಡಿಸುತ್ತೀರೋ ಇಲ್ಲವೋ ಗೊತ್ತಿಲ್ಲ. ಆದರೆ, ರಾಜ್ಯದ ಜನರ ನಿರ್ಣಾಯಕ ಅಗತ್ಯಗಳನ್ನು ಪೂರೈಸುವುದರ ಜತೆಗೆ ರಾಜ್ಯದ ಆರ್ಥಿಕ ಸ್ಥಿರತೆಯನ್ನು ಬಲಪಡಿಸಲು ನಿಮಗೆ ಇದು ಸದಾವಕಾಶ ಎಂದು ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಇತಿಹಾಸ ಜ್ಞಾನ ಎಳ್ಳಷ್ಟೂ ಇಲ್ಲದ ಸಚಿವ ಮಹದೇವಪ್ಪ ಇತಿಹಾಸ ತಿಳಿದು ಮಾತನಾಡಲಿ ::ಸಂಸದ ಯದುವೀರ್ ಒಡೆಯರ್

“ಕೃಷ್ಣರಾಜ ಸಾಗರ ಜಲಾಶಯಕ್ಕೆ ಟಿಪ್ಪುಸುಲ್ತಾನ್‌ ಮೊದಲ ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಮಹದೇವಪ್ಪ ಅವರ ಹೇಳಿಕೆ...

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಾಗಿ 50 ಕೋಟಿ ಅನುದಾನ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50...

ರಾಜ್ಯ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಸಂಚಲನ ಮೂಡಿಸಿದ್ದ ಆರೋಪದ ಆಡಿಯೋ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ; ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌

ಬೆಂಗಳೂರು: ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಕುರಿತು ಸಚಿವ ಜಮೀರ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಸರ್ಫ‌ರಾಜ್‌...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮ :: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಸಮಾಜದಲ್ಲಿ ಪುಟಾಣಿ ಮಕ್ಕಳಿಂದ...