ವಾಮಾಚಾರ ಪ್ರಕರಣ ಪ್ರಸಾದ ಅತ್ತಾವರ್ ಹಾಗೂ ಆತನ ಪತ್ನಿ ಉಡುಪಿ ಸಬ್ ಇನ್ಸ್ಪೆಕ್ಟರ್ ಸುಮಾ ತನಿಖೆಗೆ ಸಹಕರಿಸುತ್ತಿಲ್ಲ:: ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್

29
ಮೈಸೂರಿನ ‘ಮುಡಾ’ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್ಟಿಐ ಕಾರ್ಯಕರ್ತ ಗಂಗರಾಜು ಫೋಟೋಗಳಿಗೆ ವಾಮಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ರಾಮಸೇನೆ ಸ್ಥಾಪಕ ಪ್ರಸಾದ್ ಅತ್ತಾವರ ಮತ್ತು ಆತನ ಪತ್ನಿ, ಉಡುಪಿಯಲ್ಲಿ ಸಬ್ ಇನ್ ಸ್ಪೆಕ್ಟರ್ ಆಗಿರುವ ಸುಮಾ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಹೇಳಿದ್ದಾರೆ.


ಪ್ರಸಾದ್ ಅತ್ತಾವರ ವಾಮಾಚಾರ ವಿಚಾರದ ಬಗ್ಗೆ  ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿರುವ ಪೊಲೀಸ್ ಆಯುಕ್ತರು, ತನಿಖೆಗೆ ಸಂಬಂಧಿಸಿ ಪ್ರಸಾದ್ ಅತ್ತಾವರ ಮತ್ತು ಆತನ ಪತ್ನಿಗೆ ಎರಡು ಬಾರಿ ನೋಟಿಸ್ ನೀಡಲಾಗಿದೆ. ಆದರೆ ಅವರಿಬ್ಬರೂ ತನಿಖೆಗೆ ಸಹಕರಿಸುತ್ತಿಲ್ಲ. ಮತ್ತೊಮ್ಮೆ ನೋಟಿಸ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

ತನಗೆ  ಹೃದಯ ಕಾಯಿಲೆ ಇದೆ ಎಂದು ಹೇಳಿ ಪ್ರಸಾದ್ ಅತ್ತಾವರ ಆಸ್ಪತ್ರೆಗೆ ದಾಖಲಾಗಿದ್ದ. ಆಸ್ಪತ್ರೆಯಲ್ಲಿರುವಾಗ ವಿಚಾರಣೆ ನಡೆಸಲಾಗಿತ್ತು. ಬಳಿಕ ಆತ ಜಾಮೀನು ಪಡೆದುಕೊಂಡು ಬೇರೆ ಕಡೆ ತಿರುಗಾಡುತ್ತಿದ್ದಾನೆ ಎಂದರು.

ಪ್ರಸಾದ್ ಅತ್ತಾವರ ಬಳಸಿರುವ ಸೊತ್ತುಗಳ ವಿಧಿವಿಜ್ಞಾನ ವಿಶ್ಲೇಷಣೆ ಮಾಡಲಾಗುತ್ತಿದೆ. ಉಡುಪಿಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿರುವ ಪ್ರಸಾದ್ ಅತ್ತಾವರನ ಪತ್ನಿ ಸುಮಾ ಅವರಿಗೂ ನೋಟಿಸ್ ನೀಡಲಾಗಿದೆ

. ಆದರೆ ಅವರು ಕರ್ತವ್ಯಕ್ಕೆ ರಜೆ ಹಾಕಿ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಬಿಜೈಯ ಯುನಿಸೆಕ್ಸ್ ಸೆಲೂನ್ ಒಂದರಲ್ಲಿ ಜ.23ರಂದು ನಡೆದ ದಾಂಧಲೆ ನಡೆಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರಾಮಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರನ ಮೊಬೈಲ್ ಫೋನ್ ಪರಿಶೀಲನೆ ವೇಳೆ ದೇವಸ್ಥಾನವೊಂದರಲ್ಲಿ ಐದು ಕುರಿಗಳನ್ನು ಬಲಿ ಕೊಟ್ಟು

ಅದರ ರಕ್ತವನ್ನು ಸ್ನೇಹಮಯಿ ಕೃಷ್ಣ ಮತ್ತು ಇತರ ಕೆಲವರ ಫೋಟೋಗಳಿಗೆ ಹಾಗೂ ಅವರ ಹೆಸರಿನ ಚೀಟಿಗೆ ಹಚ್ಚಿ ಪೂಜೆ ಮಾಡುತ್ತಿರುವ ವೀಡಿಯೋ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

Leave a comment

Leave a Reply

Your email address will not be published. Required fields are marked *

Related Articles

ಪ್ರೀತಿ ನಾಟಕವಾಡಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಕೈಕೊಟ್ಟು ಪರಾರಿಯಾದ ಮುಸ್ಲಿಂ ಯುವಕ

“ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ,...

ತಾಯಿಯ ಖಾಸಗಿ ಫೋಟೋ ತೆಗೆದು ಪ್ರಿಯಕರನಿಗೆ ಕಳುಹಿಸಿದ ಮಗಳು ಪ್ರಕರಣ ದಾಖಲು

“ಬೆಂಗಳೂರು: ತಾಯಿಯ ಒಪ್ಪಿಗೆ ಇಲ್ಲದೆ ಆಕೆಯ ಖಾಸಗಿ ಪೋಟೋಗಳನ್ನು ತನ್ನ ಲವರ್ ಗೆ ಕಳುಹಿಸಿದ 23...

10ನೇ ತರಗತಿ ಬಾಲಕಿ ಗರ್ಭಿಣಿ,ಪೋಕ್ಸೊ ಪ್ರಕರಣದಾಖಲು ಆರೋಪಿ ಬಂಧನ ಶಾಲೆಯ ಪ್ರಾಂಶುಪಾಲ ಹಾಗೂ ವಾರ್ಡನ್ ಅಮಾನತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಸತಿ ಶಾಲೆಯಲ್ಲಿ ಓದುತ್ತಿರುವ 10 ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ....

ಅನ್ಯಕೋಮಿನ  ಗಂಡ ಹೆಂಡತಿ ಜಗಳ ನಿಲ್ಲಿಸಲು ಹೋದ ನೆರೆಮನೆಯ ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ

ಮುಸ್ಲಿಂ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಹಿಂದೂ ಯುವಕನೊಬ್ಬನ ಮೇಲೆ ಬರ್ಬರ ರೀತಿಯಲ್ಲಿ ಹಲ್ಲೆ...