ಉತ್ತರಾಖಂಡ್ ಚಮೋಲಿ ಜಿಲ್ಲೆಯ ಮಾನ ಬಳಿ ಬಾರಿ ಹಿಮಾಪಾತ 47 ಕಾರ್ಮಿಕರು ಹಿಮದಡಿಯಲ್ಲಿ ಸಿಲುಕಿರುವ ಶಂಕೆ

26

“ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಗಡಿ ರಸ್ತೆ ಸಂಸ್ಥೆ(ಬಿಆರ್‌ಒ) ಕನಿಷ್ಠ 47 ಕಾರ್ಮಿಕರು ಹಿಮದಡಿಯಲ್ಲಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 50ಕ್ಕೂ ಹೆಚ್ಚು ಕಾರ್ಮಿಕರು ಹಿಮಪಾತದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.


“ಮಾನಾದ ಗಡಿ ಪ್ರದೇಶದ ಗಡಿ ರಸ್ತೆ ಸಂಸ್ಥೆ ಶಿಬಿರದ ಬಳಿ ಭಾರೀ ಹಿಮಪಾತ ಸಂಭವಿಸಿದ್ದು, ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 57 ಕಾರ್ಮಿಕರು ಸಿಲುಕಿಕೊಂಡಿದ್ದಾರೆ.

ಈ ಕಾರ್ಮಿಕರಲ್ಲಿ 10 ಕಾರ್ಮಿಕರನ್ನು ರಕ್ಷಿಸಿ ಮಾನಾ ಬಳಿಯ ಸೇನಾ ಶಿಬಿರಕ್ಕೆ ಕಳುಹಿಸಲಾಗಿದೆ” ಎಂದು ಉತ್ತರಾಖಂಡ ಪೊಲೀಸ್ ವಕ್ತಾರ ನೀಲೇಶ್ ಆನಂದ್ ಭರ್ನೆ ಎಎನ್‌ಐಗೆ ತಿಳಿಸಿದ್ದಾರೆ.

ಮೂರರಿಂದ ನಾಲ್ಕು ಆಂಬ್ಯುಲೆನ್ಸ್‌ಗಳನ್ನು ಕಳುಹಿಸಲಾಗಿದೆ. ಆದರೆ ಭಾರೀ ಹಿಮಪಾತದಿಂದಾಗಿ, ರಕ್ಷಣಾ ತಂಡ ಸ್ಥಳಕ್ಕೆ ತಲುಪಲು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದೆ ಎಂದು ಬಿಆರ್‌ಒ(ಗಡಿ ರಸ್ತೆ ಸಂಸ್ಥೆ) ಕಾರ್ಯನಿರ್ವಾಹಕ ಎಂಜಿನಿಯರ್ ಸಿಆರ್ ಮೀನಾ ಅವರು ಹೇಳಿದ್ದಾರೆ

. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘಟನೆಯ ಬಗ್ಗೆ ಎಕ್ಸ್‌ನಲ್ಲಿ ದುಃಖ ವ್ಯಕ್ತಪಡಿಸಿದ್ದು, ಐಟಿಬಿಪಿ, ಬಿಆರ್‌ಒ ಮತ್ತು ಇತರ ರಕ್ಷಣಾ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ.

“ಚಮೋಲಿ ಜಿಲ್ಲೆಯ ಮಾನಾ ಗ್ರಾಮದ ಬಳಿ ಬಿಆರ್‌ಒ ನಡೆಸುತ್ತಿರುವ ನಿರ್ಮಾಣ ಕಾರ್ಯದ ಸಮಯದಲ್ಲಿ ಅನೇಕ ಕಾರ್ಮಿಕರು ಹಿಮಪಾತದ ಅಡಿಯಲ್ಲಿ ಸಮಾಧಿಯಾಗಿರುವ ಬಗ್ಗೆ ದುಃಖದ ಸುದ್ದಿ ಬಂದಿದೆ.

ಐಟಿಬಿಪಿ, ಬಿಆರ್‌ಒ ಮತ್ತು ಇತರ ರಕ್ಷಣಾ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಎಲ್ಲಾ ಕಾರ್ಮಿಕ ಸಹೋದರರ ಸುರಕ್ಷತೆಗಾಗಿ ನಾನು ಭಗವಾನ್ ಬದ್ರಿ ವಿಶಾಲ್‌ನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಧಾಮಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.


ಉತ್ತರಖಂಡ್‌ನ ಮಾಲಾದಿಂದ ಘಸೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆ ಪ್ರಧಾನಿ ನರೇಂದ್ರಮೋದಿ ಅವರು ಉತ್ತರಖಂಡ್‌ ಮುಖ್ಯಮಂತ್ರಿ ಪುಷ್ಕರ್‌ ಧಾಮಿ ಜೊತೆ ಮಾತನಾಡಿ ರಕ್ಷಣಾ ಕಾರ್ಯದ ಬಗ್ಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಅಭಯ ನೀಡಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ’ ಹಾಡುವುದು ಕಡ್ಡಾಯ: ಏಕಪಕ್ಷೀಯ ಮತೀಯ ಅಜೆಂಡಕ್ಕೆ ವಿರೋಧ:: ಜಮಿಯತ್ ಉಲಮಾ-ಇ -ಹಿಂದ್

ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ...

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಕಲು ಹದಿನೆಂಟು ಅಭ್ಯರ್ಥಿಗಳ ಬಂಧನ

“ಬೆಂಗಳೂರು: ಇತ್ತೀಚೆಗೆ ನಡೆದ ಸೇನಾ ಗ್ರೂಪ್ ಸಿ ನೇಮಕಾತಿ ಪರೀಕ್ಷೆಗೆ ಹಾಜರಾದ ಹದಿನೆಂಟು ಅಭ್ಯರ್ಥಿಗಳನ್ನು ವಂಚನೆ...

ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೈಕೋರ್ಟ್ ಬಿಗ್ ಶಾಕ್  ನಿರೀಕ್ಷಣಾ ಜಾಮೀನು ಅರ್ಜಿ ವಜಾ

“ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್...

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ ದಾಖಲಿಸದಂತೆ ಹೊಸ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ “ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ” ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ...