thekarnatakatoday.com
News

ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಪ್ರಾರಂಭ ಮಾರ್ಚ್ 7 ಬಜೆಟ್ ಮಂಡನೆ

ನಾಳೆ ಸೋಮವಾರದಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭಗೊಳ್ಳಲಿದ್ದು, ಮಾ.21ರ ತನಕ ನಡೆಯಲಿದೆ.

ನಾಳೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಶನಿವಾರ ಮತ್ತು ಭಾನುವಾರ ಹೊರತುಪಡಿಸಿ 14 ದಿನ ಬಜೆಟ್ ಅಧಿವೇಶನ ಕಲಾಪಗಳು ನಡೆಯಲಿವೆ. ಮಾರ್ಚ್ 4ರಿಂದ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.

ಇತ್ತೀಚೆಗೆ ಬೆಂಗಳೂರಿನ ಬಿಜೆಪಿ ಶಾಸಕರು ಮತ್ತು ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.

ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ , ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲು ಮನವಿ ಮಾಡಿದರು.

ರಾಜ್ಯದ ಒಟ್ಟಾರೆ ಆಯವ್ಯಯಕ್ಕೆ ಬೆಂಗಳೂರು ನಗರದಿಂದಲೇ ಹೆಚ್ಚಿನ ಆದಾಯ ಬರುತ್ತಿರುವುದರಿಂದ ಬೆಂಗಳೂರು ಬಿಜೆಪಿ ಶಾಸಕರುಗಳ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಹೆಚ್ಚಿನ ಅನುದಾನ ಒದಗಿಸಿ ಎಂದು ಕೋರಿಕೆ ಸಲ್ಲಿಸಿದ್ದಾರೆ.

ರ್ಯಾಂಪ್ ವ್ಯವಸ್ಥೆ ಈ ನಡುವೆ ಮಂಡಿ ಚಿಪ್ಪು ನೋವಿನಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದಲ್ಲಿ ವಿಶೇಷ ರ್ಯಾಂಪ್‌ ಸಿದ್ದಗೊಳ್ಳುತ್ತಿದೆ. ಕಳೆದ ಅನೇಕ ದಿನಗಳಿಂದ ಮಂಡಿ ಚಿಪ್ಪು ನೋವಿನಿಂದ ಬಳಲುತ್ತಿದ್ದಾರೆ.

ವೈದ್ಯರು ಆರು ವಾರಗಳ ವಿಶ್ರಾಂತಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಅವರಿಗೆ ನಡೆದಾಡಲು ಸಾಧ್ಯವಾಗುತ್ತಿಲ್ಲ.

ಮಾರ್ಚ್ 7 ರಂದು ಸಿಎಂ ಸಿದ್ದರಾಮಯ್ಯ 16 ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಅವರಿಗೆ ವಿಧಾನಸೌಧದಕ್ಕೆ ಆಗಮಿಸಲು ಅನುಕೂಲ ಆಗಲಿ ಎಂದು ರ್ಯಾಂಪ್‌ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಸಿದ್ದರಾಮಯ್ಯನವರು ಈ ಬಾರಿ ಕುಳಿತುಕೊಂಡು ಬಜೆಟ್ ಪ್ರತಿ ಓದುವ ಸಾಧ್ಯತೆಯಿದೆ.

Related posts

ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲೆಯಲ್ಲಿ ಮುಸ್ಲಿಮರಿಗೆ ರಕ್ಷಣೆ ಇಲ್ಲದಂತಾಗಿದೆ.ಎನ್ನುವ ಹೇಳಿಕೆಗೆ ಅವರೇನು ಒಂದು ನಿರ್ದಿಷ್ಟ ಸಮುದಾಯವನ್ನು ರಕ್ಷಿಸುವ ಉಸ್ತುವಾರಿ ಸಚಿವರೇ? ಶೋಭಾ ಕರಂದ್ಲಾಜೆ

The Karnataka Today

ವಕ್ಫ್ ನಿಂದ ನಿಮ್ಮ ಆಸ್ತಿಬೇಕಾದರೆ ಹೋರಾಟ ಮಾಡಿ ಎಲ್ಲಾ ಬಸವಣ್ಣನವರರೀತಿಯಲ್ಲಿಹೊಳೆಗೆ ಹಾರಿ ಸಾಯಿರಿ ಯತ್ನಾಳ್ ಹೇಳಿಕೆಗೆ ಆಕ್ರೋಶ

The Karnataka Today

ಮುಡಾ ಹಗರಣ ಸಿದ್ದರಾಮಯ್ಯ ವಿರುದ್ಧ ತನಿಖೆ ಮುಂದುವರಿಸಲು ಲೋಕಾಯುಕ್ತಕ್ಕೆ ಸೂಚನೆ ಮೇ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

The Karnataka Today

Leave a Comment