ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಪ್ರಾರಂಭ ಮಾರ್ಚ್ 7 ಬಜೆಟ್ ಮಂಡನೆ

2

ನಾಳೆ ಸೋಮವಾರದಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭಗೊಳ್ಳಲಿದ್ದು, ಮಾ.21ರ ತನಕ ನಡೆಯಲಿದೆ.

ನಾಳೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಶನಿವಾರ ಮತ್ತು ಭಾನುವಾರ ಹೊರತುಪಡಿಸಿ 14 ದಿನ ಬಜೆಟ್ ಅಧಿವೇಶನ ಕಲಾಪಗಳು ನಡೆಯಲಿವೆ. ಮಾರ್ಚ್ 4ರಿಂದ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.

ಇತ್ತೀಚೆಗೆ ಬೆಂಗಳೂರಿನ ಬಿಜೆಪಿ ಶಾಸಕರು ಮತ್ತು ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.

ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ , ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲು ಮನವಿ ಮಾಡಿದರು.

ರಾಜ್ಯದ ಒಟ್ಟಾರೆ ಆಯವ್ಯಯಕ್ಕೆ ಬೆಂಗಳೂರು ನಗರದಿಂದಲೇ ಹೆಚ್ಚಿನ ಆದಾಯ ಬರುತ್ತಿರುವುದರಿಂದ ಬೆಂಗಳೂರು ಬಿಜೆಪಿ ಶಾಸಕರುಗಳ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಹೆಚ್ಚಿನ ಅನುದಾನ ಒದಗಿಸಿ ಎಂದು ಕೋರಿಕೆ ಸಲ್ಲಿಸಿದ್ದಾರೆ.

ರ್ಯಾಂಪ್ ವ್ಯವಸ್ಥೆ ಈ ನಡುವೆ ಮಂಡಿ ಚಿಪ್ಪು ನೋವಿನಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದಲ್ಲಿ ವಿಶೇಷ ರ್ಯಾಂಪ್‌ ಸಿದ್ದಗೊಳ್ಳುತ್ತಿದೆ. ಕಳೆದ ಅನೇಕ ದಿನಗಳಿಂದ ಮಂಡಿ ಚಿಪ್ಪು ನೋವಿನಿಂದ ಬಳಲುತ್ತಿದ್ದಾರೆ.

ವೈದ್ಯರು ಆರು ವಾರಗಳ ವಿಶ್ರಾಂತಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಅವರಿಗೆ ನಡೆದಾಡಲು ಸಾಧ್ಯವಾಗುತ್ತಿಲ್ಲ.

ಮಾರ್ಚ್ 7 ರಂದು ಸಿಎಂ ಸಿದ್ದರಾಮಯ್ಯ 16 ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಅವರಿಗೆ ವಿಧಾನಸೌಧದಕ್ಕೆ ಆಗಮಿಸಲು ಅನುಕೂಲ ಆಗಲಿ ಎಂದು ರ್ಯಾಂಪ್‌ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಸಿದ್ದರಾಮಯ್ಯನವರು ಈ ಬಾರಿ ಕುಳಿತುಕೊಂಡು ಬಜೆಟ್ ಪ್ರತಿ ಓದುವ ಸಾಧ್ಯತೆಯಿದೆ.

Leave a comment

Leave a Reply

Your email address will not be published. Required fields are marked *

Related Articles

ಧರ್ಮಸ್ಥಳ ಪ್ರಕರಣ: ಮೃತದೇಹಗಳ ಅಸ್ತಿಪಂಜರ ಪತ್ತೆ ಕಾರ್ಯಾಚರಣೆಗೆ ಜಿಪಿಆರ್ ಬಳಕೆಗೆ ಆಗ್ರಹ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಪತ್ತೆಗೆ ಜಿಪಿಆರ್ ಬಳಕೆ ಮಾಡುವಂತೆ ಒತ್ತಾಯ ಕೇಳಿಬರುತ್ತಿದೆ....

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ...