ಮಹಾರಾಷ್ಟ್ರಸಚಿವರ ತಲೆದಂಡ ಹತ್ಯೆ ಪ್ರಕರಣ ಸಂಬಂಧ ಸಚಿವ ಧನಂಜಯ್ ಮುಂಡೆ ರಾಜೀನಾಮೆ

27

“ಸರಪಂಚ್‌ ಸಂತೋಷ್‌ ದೇಶಮುಖ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ತ ಸಹಾಯಕನ ಬಂಧನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ  ನೀಡಿದ್ದಾರೆ.

ಎನ್‌ಸಿಪಿಯ ಅಜಿತ್‌ ಪವಾರ್‌ ಬಣದ ನಾಯಕರಾಗಿರುವ ಧನಂಜಯ ಅವರು ಪ್ರಸ್ತುತ ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದರು.

ಧನಂಜಯ ಅವರ ಆಪ್ತ ವಾಲ್ಮಿಕ್‌ ಕರಾಡ್‌ ಸರಪಂಚ್‌ ಸಂತೋಷ್‌ ದೇಶಮುಖ್‌ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಗಿರುವುದರಿಂದ ರಾಜಿನಾಮೆ ನೀಡುವಂತೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚಿಸಿದ್ದರು ಎನ್ನಲಾಗಿದೆ.

ಸಂತೋಷ್‌ ದೇಶ್‌ಮುಖ್‌ ಹತ್ಯೆ ಪ್ರಕರಣದ ಪ್ರಮುಖ ಸಂಚುಕೋರ ಎಂದು ಉಲ್ಲೇಖಿಸಿ ಸಿಐಡಿ ದೋಷಾರೋಪ ಪಟ್ಟಿ ಸಲ್ಲಿಸಿದ ಬೆನ್ನಲ್ಲೇ ಧನಂಜಯ ಮುಂಡೆ ಅವರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸಿದ್ದವು.

ಬೀಡ್‌ನ ಮಸ್ಸಾಜೋಗ್ ಗ್ರಾಮದ ಸರಪಂಚ್‌ ಆಗಿದ್ದ ಸಂತೋಷ್ ದೇಶಮುಖ್‌ ಅವರನ್ನು ಕಳೆದ ವರ್ಷ ಡಿಸೆಂಬರ್ 6ರಂದು ಅಪಹರಿಸಿ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು.

ಪ್ರಕರಣ ಸಂಬಂಧ ಬೀಡ್‌ ಜಿಲ್ಲಾ ನ್ಯಾಯಾಲಯಕ್ಕೆ 1,200 ಪುಟಗಳ ದೋಷಾರೋಪಪಟ್ಟಿ ಸಲ್ಲಿಸಿದ್ದ ಸಿಐಡಿ, ವಾಲ್ಮಿಕ್‌ ಕರಾಡ್‌ನನ್ನು ಪ್ರಮುಖ ಆರೋಪಿ ಎಂದು ಹೆಸರಿಸಿತ್ತು.

ದೇಶಮುಖ್‌ ಹತ್ಯೆ ಪ್ರಕರಣದಲ್ಲಿ ಸಿಐಡಿ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಸಚಿವರ ಆಪ್ತ ಸಹಾಯಕ ವಾಲಿಕ್‌ಕರದ್‌ ಆರೋಪಿಯನ್ನಾಗಿ ಹೆಸರಿಸಿರುವ ಕಾರಣ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಕಳೆದ ರಾತ್ರಿ ಫಡ್ನವೀಸ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಂತರ ಈ ಬೆಳವಣಿಗೆ ನಡೆದಿದೆ.


ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುಂಡೆ ಅವರು ಬೀಡ್‌ ಜಿಲ್ಲೆಯ ಪಾರ್ಲಿಯ ಕ್ಷೇತ್ರದ ಎನ್‌ಸಿಪಿ ಶಾಸಕರಾಗಿದ್ದಾರೆ. ಅವರು ಈ ಹಿಂದೆ ಬೀಡ್‌ನ ಉಸ್ತುವಾರಿ ಸಚಿವರಾಗಿದ್ದರು.”

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ಲಖನೌ: ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು...

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...