thekarnatakatoday.com
News

ಐ ಪಿ ಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ವರ್ಗಾವಣೆ ಬೆನ್ನಲೇ ಐ ಪಿ ಎಸ್ ಡಿ ರೂಪ ವರ್ಗಾವಣೆ ಮಾಡಿದ ಸರಕಾರ

“ಕಳೆದ ಸೋಮವಾರ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಬುಧವಾರ ಹಿರಿಯ ಐಪಿಎಸ್ ಅಧಿಕಾರಿ ಡಿ ರೂಪಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.


ಡಿ ರೂಪಾ ಅವರ ವಿರುದ್ಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲಿಖಿತ ದೂರು ನೀಡಿದ್ದ ವರ್ತಿಕಾ ಕಟಿಯಾರ್ ಅವರನ್ನು ಸೋಮವಾರ ವರ್ಗಾವಣೆ ಮಾಡಲಾಗಿತ್ತು

. ಇದೀಗ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿದ್ದ ಡಿ ರೂಪಾ ಅವರನ್ನು ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

ಕಳೆದ ತಿಂಗಳು, ವರ್ತಿಕಾ ಕಟಿಯಾರ್ ಅವರು 2000 ಬ್ಯಾಚ್‌ನ ಐಪಿಎಸ್ ಅಧಿಕಾರಿ ಡಿ ರೂಪಾ ಅವರ ವಿರುದ್ಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲಿಖಿತ ದೂರು ನೀಡಿದ್ದರು.

ರೂಪಾ ಅವರು ತಮ್ಮ ಅನುಪಸ್ಥಿತಿಯಲ್ಲಿ ಇಬ್ಬರು ಕಿರಿಯ ಪೊಲೀಸ್ ಅಧಿಕಾರಿಗಳ ಮೂಲಕ ನಿಯಂತ್ರಣ ಕೊಠಡಿಯಿಂದ ಕೀ ತೆಗೆದುಕೊಂಡು ತಮ್ಮ ಕಚೇರಿ ಪ್ರವೇಶಿಸಿದ್ದಾರೆ ಎಂದು ಆರೋಪಿಸಿದ್ದರು.

ಡಿ ರೂಪಾ ವಿರುದ್ಧ ದೂರು ನೀಡಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ವರ್ಗಾವಣೆ ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿತ್ತು.

ದೂರು ನೀಡಿದವರನ್ನೇ ವರ್ಗಾವಣೆ ಮಾಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೀಗ ರೂಪ ಅವರನ್ನೂ ಸಹ ಸರ್ಕಾರ ವರ್ಗಾವಣೆ ಮಾಡಿದ್ದು, ಇಬ್ಬರನ್ನೂ ಬೇರೆ ಕಡೆಗೆ ವರ್ಗಾವಣೆ ಮಾಡಲಾಗಿದೆ.

Related posts

ಹೈಕೋರ್ಟ್ ಆದೇಶದ ವಿರುದ್ಧ ರಾಜ್ಯ ಸರಕಾರ 14 ಸಬ್ ರಿಜಿಸ್ಟರ್ ಗಳ ವರ್ಗಾವಣೆ ರದ್ದು ಪಡಿಸಿ ಮರು ನಿಯೋಜನೆಗೊಳಿಸದೆ ಹೈಕೋರ್ಟ್ ಆದೇಶ ಉಲ್ಲಂಘನೆ

The Karnataka Today

ಮುಂಬೈ ಗೇಟ್ ವೇ ಆಫ್ ಇಂಡಿಯಾ ಪ್ರಯಾಣಿಕರ ದೋಣಿಗೆ ನೌಕಾಪಡೆ ಬೋಟ್ ಡಿಕ್ಕಿ ದುರಂತ ಮೃತಪಟ್ಟವರ ಕುಟುಂಬಕ್ಕೆ ಸಂತಾಪ ಸೂಚಿಸಿ 2,ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

The Karnataka Today

ಮುಂದುವರೆದ ಕರ್ನಾಟಕ ಸರಕಾರ ಹಾಗೂ ರಾಜ್ಯಪಾಲರ ನಡುವೆ ಜಟಾಪಟಿ ಮಸೂದೆಗಳಿಗೆ ಸಹಿ ಹಾಕದೆ ಹಿಂದೆ ಕಳುಹಿಸಿದ ರಾಜ್ಯಪಾಲರು

The Karnataka Today

Leave a Comment