ಮಹಾರಾಷ್ಟ್ರಔರಂಗಜೇಬ್ ನನ್ನು ಹೊಗಳಿ ಟೀಕೆ ಗುರಿಯಾಗಿದ್ದ ಎಸ್ ಪಿ ಶಾಸಕ ಅಬು ಅಜ್ಮಿ ಗೆ ಬಜೆಟ್ ಅಧಿವೇಶನ ಮುಗಿಯುವ ವರೆಗೂ ಅಮಾನತು

36

“ಔರಂಗಜೇಬನನ್ನು ಹೊಗಳಿ ತೀವ್ರ ಟೀಕೆಗೆ ಗುರಿಯಾಗಿರುವ ಸಮಾಜವಾದಿ ಪಕ್ಷದ ಶಾಸಕ ಅಬು ಅಸಿಮ್ ಅಜ್ಮಿ ಅವರನ್ನು ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶನದಿಂದ ಬುಧವಾರ ಅಮಾನತುಗೊಳಿಸಲಾಗಿದೆ.

ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನ ಮುಗಿಯುವವರೆಗೂ ಅಬು ಅಜ್ಮಿ ಅವರನ್ನು ಅಮಾನತು ಮಾಡಲಾಗಿದೆ.

ವಿಧಾನಸಭೆಯ ಬಜೆಟ್ ಅಧಿವೇಶನ ಮಾರ್ಚ್ 26ರ ವರೆಗೆ ನಡೆಯಲಿದೆ. ಅಲ್ಲಿಯವರೆಗೂ ಅಬು ಅಜ್ನಿ ಅಮಾನತಿನಲ್ಲಿ ಇರಲಿದ್ದಾರೆ

. ಸಚಿವ ಚಂದ್ರಕಾಂತ್ ಪಾಟೀಲ್ ಅವರು ಇಂದು ಸದನದಲ್ಲಿ ಅಬು ಅಜ್ಮಿ ಅವರನ್ನು ಸದನದಿಂದ ಅಮಾನತು ಮಾಡುವ ಪ್ರಸ್ತಾವನೆ ಮಂಡಿಸಿದರು. ಧ್ವನಿ ಮತದ ಮೂಲಕ ನಿರ್ಣಯವನ್ನು ಅಂಗೀಕರಿಸಲಾಯಿತು. ಬಳಿಕ ಎಸ್ಪಿ ಶಾಸಕ ಸದನದಿಂದ ಅಮಾನತಾಗಿದ್ದಾಗಿ ಸ್ಪೀಕರ್ ತಿಳಿಸಿದರು.

ಹಿಂದುಗಳ ವಿರೋಧಿ ಮತ್ತು ಕ್ರೂರ ಆಡಳಿತಗಾರ ಔರಂಗಜೇಬನನ್ನು ಎಸ್ಪಿ ಶಾಸಕ ಹೊಗಳುವ ಮೂಲಕ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಅವರ ಪುತ್ರ ಛತ್ರಪತಿ ಸಂಭಾಜಿ ಮಹಾರಾಜ್ ಅವರನ್ನು ಅವಮಾನಿಸಲಾಗಿದೆ ಎಂದು ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಟೀಕಾಪ್ರಹಾರ ನಡೆಸಿದರು.

“ನನ್ನ ಮಾತುಗಳನ್ನು ತಿರುಚಲಾಗಿದೆ. ಇತಿಹಾಸಕಾರರು ಮತ್ತು ಬರಹಗಾರರು ಹೇಳಿದ್ದನ್ನು ನಾನು ಹೇಳಿದ್ದೇನೆ. ನಾನು ಛತ್ರಪತಿ ಶಿವಾಜಿ ಮಹಾರಾಜ್, ಸಂಭಾಜಿ ಮಹಾರಾಜ್ ಅಥವಾ ಇತರ ಯಾವುದೇ ಮಹಾನ್ ವ್ಯಕ್ತಿಗಳ ಬಗ್ಗೆ ಯಾವುದೇ ಅವಹೇಳನಕಾರಿ ಹೇಳಿಕೆ ನೀಡಿಲ್ಲ – ಆದರೆ ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ,

ನಾನು ನನ್ನ ಮಾತುಗಳನ್ನು, ನನ್ನ ಹೇಳಿಕೆಯನ್ನು ಹಿಂಪಡೆಯುತ್ತೇನೆ. ಈ ವಿಷಯವನ್ನು ರಾಜಕೀಯ ವಿಷಯವನ್ನಾಗಿ ಮಾಡಲಾಗುತ್ತಿದೆ ಎಂದು ನಿನ್ನೆ ಸಮಾಜವಾದಿ ಪಕ್ಷದ ಶಾಸಕ ಅಬು ಅಜ್ಮಿ ಹೇಳಿದ್ದರು. “

ಔರಂಗಜೇಬನ ಆಳ್ವಿಕೆಯಲ್ಲಿ ಭಾರತದ ಗಡಿ ಅಫ್ಘಾನಿಸ್ತಾನ ಮತ್ತು ಬರ್ಮಾವರೆಗೂ(ಮ್ಯಾನ್ಮಾರ್) ವ್ಯಾಪಿಸಿತ್ತು. ವಿಶ್ವದ ಜಿಡಿಪಿಯಲ್ಲಿ ದೇಶದ ಜಿಡಿಪಿಯು ಶೇಕಡಾ 24 ರಷ್ಟಿತ್ತು. ಭಾರತವನ್ನು ಆತನ ಆಡಳಿತದಲ್ಲಿ ‘ಚಿನ್ನದ ಗುಬ್ಬಚ್ಚಿ’ ಎಂದು ಕರೆಯಲಾಗುತ್ತಿತ್ತು” ಎಂದು ಅಬು ಅಜ್ಮಿ ಹೇಳಿದ್ದರು.

Leave a comment

Leave a Reply

Your email address will not be published. Required fields are marked *

Related Articles

ವಂದೇ ಮಾತರಂ ವಿರೋಧಿಸುವವರಿಗೆ ಭಾರತದಲ್ಲಿ ನೆಲೆಸುವ ಹಕ್ಕಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ಲಖನೌ: ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು...

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...