thekarnatakatoday.com
World News

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಮೇಲೆ ದಾಳಿಗೆ ಯತ್ನ

“ಲಂಡನ್‌ಗೆ ತೆರಳಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಅವರು ಕುಳಿತಿದ್ದ ಕಾರಿನ ಮೇಲೆ ಖಾಲಿಸ್ತಾನಿ ಪರ ಬೆಂಬಲಿಗನೊಬ್ಬ ದಾಳಿ ನಡೆಸಲು ಯತ್ನಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಕುರಿತಾದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ

ವಿಡಿಯೊದಲ್ಲಿ, ಜೈಶಂಕರ್‌ ಅವರು ಕಾರನ್ನು ಹತ್ತಿ ಕುಳಿತ ತಕ್ಷಣ ಬದಿಯಲ್ಲಿದ್ದ ವ್ಯಕ್ತಿಯೊಬ್ಬ ಭಾರತದ ಧ್ವಜ ಹಿಡಿದು ಕಾರಿನತ್ತ ನುಗ್ಗುತ್ತಾನೆ, ತಕ್ಷಣ ಅಲ್ಲಿದ್ದ ಪೊಲೀಸರು ಆತನನ್ನು ತಡೆಯುತ್ತಾರೆ. ಸುತ್ತಲೂ ನೂರಾರು ಮಂದಿ ಖಲಿಸ್ತಾನಿಗಳು ಧ್ವಜ ಹಿಡಿದು ಘೋಷಣೆ ಕೂಗುತ್ತಿರುವ ದೃಶ್ಯಗಳಿವೆ.

ಭಾರತ ಮತ್ತು ಲಂಡನ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ), ಕಾರ್ಯತಂತ್ರದ ಸಮನ್ವಯ ಮತ್ತು ರಾಜಕೀಯ ಸಹಕಾರದ ಕುರಿತು ಮಾತುಕತೆ ನಡೆಸಲು ಜೈಶಂಕರ್‌ ಲಂಡನ್‌ಗೆ ತೆರಳಿದ್ದಾರೆ.

ಜೈಶಂಕರ್ ಚರ್ಚೆಯಲ್ಲಿ ಭಾಗವಹಿಸುತ್ತಿದ್ದ ಸ್ಥಳದ ಹೊರಗೆ ಖಾಲಿಸ್ತನಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿರುವುದನ್ನು ತೋರಿಸುವ ಮತ್ತೊಂದು ವೀಡಿಯೊ ಕೂಡ ಇದೆ.

ಈ ದೃಶ್ಯಾವಳಿಯಲ್ಲಿ ಅವರು ಧ್ವಜಗಳನ್ನು ಬೀಸುತ್ತಾ ಮತ್ತು ಖಲಿಸ್ತಾನಿ ಪರ ಘೋಷಣೆಗಳನ್ನು ಕೂಗುತ್ತಿರುವುದನ್ನು ಕಾಣಬಹುದು. ಸದ್ಯ ಈ ವಿಡಿಯೊ ಲಂಡನ್‌ ಪೊಲೀಸರ ಭದ್ರತಾ ಕ್ರಮದ ಕುರಿತು ಪ್ರಶ್ನೆ ಹುಟ್ಟುಹಾಕಿದೆ.

ಅಲ್ಲದೆ ಈ ಕುರಿತು ಭಾರತ ಅಥವಾ ಲಂಡನ್‌ ಸರ್ಕಾರಗಳಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕಳೆದ ಕೆಲವು ವರ್ಷಗಳಿಂದ, ಯುಕೆ, ಯುಎಸ್ ಮತ್ತು ಕೆನಡಾದಲ್ಲಿರುವ ಖಲಿಸ್ತಾನ್ ಉಗ್ರಗಾಮಿಗಳಿಂದ ಭಾರತೀಯ ರಾಜತಾಂತ್ರಿಕರು ಮತ್ತು ವಲಸಿಗರಿಗೆ ಬೆದರಿಕೆ ಹೆಚ್ಚಾಗಿದೆ

. ಈ ವಿವಾದವು ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಹಳಸಲು ಕಾರಣವಾಗಿದ್ದರೂ, ಅಮೆರಿಕ ಮತ್ತು ಯುಕೆಯಲ್ಲಿ ಹೆಚ್ಚಿದ ಚಟುವಟಿಕೆಗಳ ಬಗ್ಗೆ ಭಾರತ ತನ್ನ ಕಳವಳ ವ್ಯಕ್ತಪಡಿಸುತ್ತಲೇ ಇದೆ.

Related posts

ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಗೆ ದಿನ ನಿಗದಿ

The Karnataka Today

ಬಾಹ್ಯಕಾಶದಿಂದ ಭಾರತದ ಭೂ ಪ್ರದೇಶಗಳ ಸೌಂದರ್ಯ ವರ್ಣಿಸಿದ ಸುನೀತಾ ವಿಲಿಯಮ್ಸ್

The Karnataka Today

26/11 ಮುಂಬೈ ದಾಳಿ ಸೂತ್ರದಾರ ಉಗ್ರ ತಹವ್ವೂರ್ ರಾಣಾ  ಭಾರತಕ್ಕೆ ಗಡಿಪಾರು ಮಾಡಲು ಅಮೆರಿಕ ಸುಪ್ರೀಂ ಕೋರ್ಟ್ ಸಮ್ಮತಿ

The Karnataka Today

Leave a Comment