thekarnatakatoday.com
Crime

ಆಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ ನಟಿ ರನ್ಯಾ ರಾವ್ ಳಿಂದ 17 ಕೋಟಿ ಆಭರಣ ಹಾಗೂ ನಗದು ಜಪ್ತಿ

“ಬರೋಬ್ಬರಿ 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರು ಪ್ರತಿ ದುಬೈ ಟ್ರಿಪ್‌ಗೆ ಸುಮಾರು 12 ಲಕ್ಷ ರೂಪಾಯಿ ಪಡೆಯುತ್ತಿದ್ದರು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ನಟಿ ರನ್ಯಾ ರಾವ್ 15 ದಿನಗಳಲ್ಲಿ ನಾಲ್ಕು ಬಾರಿ ದುಬೈಗೆ ಪ್ರಯಾಣ ಬೆಳೆಸಿದ್ದಾರೆ ಮತ್ತು ಕಳೆದ ಒಂದು ವರ್ಷದಲ್ಲಿ ಸೌದಿ ನಗರಕ್ಕೆ 30 ಬಾರಿ ಪ್ರಯಾಣಿಸಿದ್ದಾರೆ.

ಪ್ರತಿ ಪ್ರವಾಸದಲ್ಲೂ ಅವರು ಚಿನ್ನವನ್ನು ಸಾಗಿಸುತ್ತಿದ್ದರು ಎಂದು ವರದಿಯಾಗಿದೆ. ಪ್ರಕರಣದ ತನಿಖೆಯ ಸಮಯದಲ್ಲಿ ರನ್ಯಾ ರಾವ್‌ಗೆ ಪ್ರತಿ ಬಾರಿ ಚಿನ್ನ ಕಳ್ಳಸಾಗಣೆ ಮಾಡಲು 12 ಲಕ್ಷ ರೂ. ಸಂಭಾವನೆ ನೀಡಲಾಗುತ್ತಿತ್ತು ಎಂದು ವರದಿಯಾಗಿದೆ.

ದುಬೈನ ಖಾಸಗಿ ಹೋಟೆಲ್ ಶೌಚಾಲಯದಲ್ಲಿ ನಟಿಗೆ ವ್ಯಕ್ತಿಯೊಬ್ಬ ಚಿನ್ನ ನೀಡುತ್ತಿದ್ದರು ಎನ್ನಲಾಗಿದ್ದು, ಪ್ರತಿ ಬಾರಿಯೂ ಚಿನ್ನದ ಗಟ್ಟಿಯನ್ನು ತನ್ನ ಸೊಂಟ ಹಾಗೂ ಹೊಟ್ಟೆ ಭಾಗದಲ್ಲಿ ಇಟ್ಟುಕೊಂಡು ಟೇಪ್ ಸುತ್ತಿಕೊಳ್ಳುತ್ತಿದ್ದಳು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಮಲಮಗಳಾಗಿರುವ ರನ್ಯಾ ರಾವ್ 12 ಕೆಜಿ ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ಮಾರ್ಚ್‌ 3 ರಂದು ಬೆಂಗಳೂರಿನ ಅಂತರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಮತ್ತು ನಟಿಯಿಂದ ಈಗಾಗಲೇ 17 ಕೋಟಿ ಬೆಲೆಬಾಳುವ ಆಭರಣ ಹಾಗೂ ನಗದನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

Related posts

ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರನ ಕಲ್ಟ್ ಚಲನಚಿತ್ರಕ್ಕೆ ಆರಂಭದಲ್ಲಿ ಕಂಟಕ ಚಿತ್ರದ ಟೆಕ್ನಿಷಿಯನ್ ಆತ್ಮಹತ್ಯೆ ಯತ್ನ

The Karnataka Today

ಹೋಟೆಲ್ ಹೊರಗಡೆ ನಿಲ್ಲಿಸಿದ್ದ ಕಾರಿನ ನಾಲ್ಕು ಚಕ್ರಗಳನ್ನು ಕಳವು ಮಾಡಿ ಪರಾರಿಯಾದ ದುಷ್ಕರ್ಮಿಗಳು

The Karnataka Today

ಅಮೆಜಾನ್ ಕಂಪನಿಗೆ ಬಹುಕೋಟಿ  ಪಂಗನಾಮ ಇಬ್ಬರು ಆರೋಪಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರು

The Karnataka Today

Leave a Comment