ನಕ್ಸಲ್ ಮುಕ್ತ ರಾಜ್ಯಘೋಷಣೆ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ ನಕ್ಸಲ್ ಪೀಡಿತ ಪ್ರದೇಶಗಳ ಮೂಲಸೌಕರ್ಯಕ್ಕಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ

3

“ರಾಜಧಾನಿ ಬೆಂಗಳೂರಿನಲ್ಲಿ ಪರಿಣಾಮಕಾರಿ ಪೊಲೀಸ್ ವ್ಯವಸ್ಥೆಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್‌ನಲ್ಲಿ ಪೊಲೀಸ್ ವಿಭಾಗಗಳ ಸಂಖ್ಯೆಯನ್ನು ಎಂಟರಿಂದ 11 ಕ್ಕೆ ಹೆಚ್ಚಿಸುವುದಾಗಿ ಶುಕ್ರವಾರ ಘೋಷಿಸಿದ್ದಾರೆ

. ಪ್ರಸ್ತುತ ಬೆಂಗಳೂರು ಉತ್ತರ, ದಕ್ಷಿಣ, ಮಧ್ಯ, ಪೂರ್ವ, ಪಶ್ಚಿಮ, ಆಗ್ನೇಯ, ಈಶಾನ್ಯ ಮತ್ತು ವೈಟ್‌ಫೀಲ್ಡ್ ಸೇರಿ ಎಂಟು ಪೊಲೀಸ್ ವಿಭಾಗಗಳಿವೆ.

ಇಂದು ವಿಧಾನಸಭೆಯಲ್ಲಿ 2025-26ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ ಇನ್ನೂ ಮೂರು ಪೊಲೀಸ್ ವಿಭಾಗಗಳೊಂದಿಗೆ, ಪೊಲೀಸ್ ಠಾಣೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು.


ನಗರದಲ್ಲಿ ಇನ್ನೂ ಮೂವರು ಐಪಿಎಸ್ ಅಧಿಕಾರಿಗಳನ್ನು ಡಿಸಿಪಿಗಳಾಗಿ ನೇಮಿಸಲಾಗುವುದು. ಪ್ರತಿದಿನ ಹೆಚ್ಚಿನ ಸೈಬರ್ ಅಪರಾಧಗಳು ವರದಿಯಾಗುತ್ತಿರುವುದರಿಂದ ಐದು ಕೋಟಿ ರೂ. ಅನುದಾನದೊಂದಿಗೆ ಸೈಬರ್ ಅಪರಾಧ ವಿಭಾಗವನ್ನು ಸಹ ಬಲಪಡಿಸಲಾಗುವುದು ಎಂದರು.

ಶೀಘ್ರದಲ್ಲೇ ಏಳು ಪೊಲೀಸ್ ಠಾಣೆ ಕಟ್ಟಡಗಳು ಪೂರ್ಣಗೊಳ್ಳಲಿವೆ. ಇದಲ್ಲದೆ, 30 ಕೋಟಿ ರೂ. ವೆಚ್ಚದಲ್ಲಿ 12 ಪೊಲೀಸ್ ಠಾಣೆಗಳು, ಒಂದು ಉಪವಿಭಾಗ ಕಚೇರಿ, ಎರಡು ವೃತ್ತ ಕಚೇರಿಗಳು ಮತ್ತು ಒಂದು ಪೊಲೀಸ್ ಔಟ್ ಪೋಸ್ಟ್ ಕಟ್ಟಡದ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದರು.

ಈ ವರ್ಷ ಬಳ್ಳಾರಿ, ದಾವಣಗೆರೆ, ಮೈಸೂರು ಮತ್ತು ಬೆಂಗಳೂರು ಕೇಂದ್ರ ವಲಯಗಳಲ್ಲಿ ನಾಲ್ಕು ಬಾಂಬ್ ಪತ್ತೆ ಮತ್ತು ವಿಲೇವಾರಿ ದಳಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ತಿಳಿಸಿದರು

. ಪೊಲೀಸ್ ಸಿಬ್ಬಂದಿಯನ್ನು ಸದೃಢವಾಗಿ ಮತ್ತು ಆರೋಗ್ಯವಾಗಿಡಲು, ಪೊಲೀಸ್ ಸಿಬ್ಬಂದಿಗೆ ವಾರ್ಷಿಕ ವೈಯಕ್ತಿಕ ಆರೋಗ್ಯ ತಪಾಸಣೆಗಾಗಿ ನೀಡಲಾಗುವ ಮೊತ್ತವನ್ನು ಪ್ರಸ್ತುತ ರೂ. 1000 ರಿಂದ ರೂ. 1500 ಕ್ಕೆ ಹೆಚ್ಚಿಸಲಾಗುವುದು.


ಬಂದೋಬಸ್ತ್ ಕರ್ತವ್ಯದಲ್ಲಿರುವ ಪೊಲೀಸರು ಮತ್ತು ಸಿಬ್ಬಂದಿಗೆ ನೀಡಲಾಗುವ ಆಹಾರ ಭತ್ಯೆಯನ್ನು ರೂ. 200 ರಿಂದ 300 ರೂ. ಗೆ ಹೆಚ್ಚಿಸಲಾಗುವುದು ಎಂದರು. ನಕ್ಸಲ್ ನಿಗ್ರಹ ಪಡೆ ವಿಸರ್ಜನೆ ರಾಜ್ಯವು ನಕ್ಸಲ್ ಮುಕ್ತವಾಗಿದ್ದು, ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.

ನಮ್ಮ ಸರ್ಕಾರದ ಅವಧಿಯಲ್ಲಿ 6 ಜನ ಭೂಗತ ನಕ್ಸಲರು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿಯ ಮುಂದೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ ಮಾಡಲಾಗುತ್ತಿದೆ.

ಶರಣಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಸೇರ್ಪಡೆಗೊಳಿಸಲು ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು 10 ಕೋಟಿ ರೂ. ವಿಶೇಷ ಪ್ಯಾಕೇಜ್ ನೀಡಲಾಗುವುದು ಎಂದು ಸಿಎಂ ತಿಳಿಸಿದರು.

Leave a comment

Leave a Reply

Your email address will not be published. Required fields are marked *

Related Articles

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಾಗಿ 50 ಕೋಟಿ ಅನುದಾನ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50...

ರಾಜ್ಯ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಸಂಚಲನ ಮೂಡಿಸಿದ್ದ ಆರೋಪದ ಆಡಿಯೋ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ; ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌

ಬೆಂಗಳೂರು: ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಕುರಿತು ಸಚಿವ ಜಮೀರ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಸರ್ಫ‌ರಾಜ್‌...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮ :: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಸಮಾಜದಲ್ಲಿ ಪುಟಾಣಿ ಮಕ್ಕಳಿಂದ...

ನವೆಂಬರ್ ನಂತರ ಕರ್ನಾಟಕ ರಾಜ್ಯದ ಮುಂದಿನ ಮುಖ್ಯ ಮಂತ್ರಿ ಯಾಗಿ ಡಿಕೆ ಶಿವಕುಮಾರ್ ಅಥವಾ ಖರ್ಗೆ :: ಎಚ್‌ ವಿಶ್ವನಾಥ್‌

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚೆಂದರೆ ನವೆಂಬರ್ ವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ನಂತರ ಸಿಎಂ...