ಕಾಲೇಜ್ ಆವರಣದೊಳಗೆ ಮುಸ್ಲಿಂ ವಿದ್ಯಾರ್ಥಿಗಳ ಇಫ್ತಾರ್ ಕೂಟ ಬಜರಂಗದಳ ದಾಳಿ

53

“ಹರಿದ್ವಾರದ ಋಷಿಕುಲ್ ಆಯುರ್ವೇದಿಕ್ ಕಾಲೇಜಿನಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿಗಳು ಆಯೋಜಿಸಿದ ಇಫ್ತಾರ್ ಕೂಟಕ್ಕೆ ಹೊರಗಿನ ವಿದ್ಯಾರ್ಥಿಗಳನ್ನು ಕರೆಸಲಾಗಿದೆ ಎಂದು ಆರೋಪಿಸಿ ಬಜರಂಗ ದಳ ಕಾರ್ಯಕರ್ತರು ಶನಿವಾರ ಸಂಜೆ ಮುತ್ತಿಗೆ ಹಾಕಿದರು.

ತಕ್ಷಣ ಆಗಮಿಸಿದ ಪೊಲೀಸರು ಹೆಚ್ಚಿನ ಗಲಾಟೆಯಾಗದಂತೆ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಮೂರು ದಿನಗಳಲ್ಲಿ ಈ ವಿಷಯದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ

ಕಾಲೇಜು ಕ್ಯಾಂಪಸ್‌ಗೆ ಹೊರಗಿನವರನ್ನು ಕರೆತರುವ ಷಡ್ಯಂತ್ರದ ಭಾಗವಾಗಿ ಇಫ್ತಾರ್ ಕೂಟ ಆಯೋಜಿಸಲಾಗಿದೆ ಎಂದು ಬಜರಂಗದಳದ ಪದಾಧಿಕಾರಿ ಅಮಿತ್ ಕುಮಾರ್ ಆರೋಪಿಸಿದ್ದಾರೆ.

ಋಷಿಕುಲ ಆಯುರ್ವೇದಿಕ್ ಕಾಲೇಜಿಗೆ ಐತಿಹಾಸಿಕ ಮಹತ್ವವಿದೆ. ಪಂಡಿತ್ ಮಹಾಮಾನ ಮದನ್ ಮೋಹನ್ ಮಾಳವೀಯ ಅವರು ಸ್ಥಾಪಿಸಿದ ಋಷಿಕುಲ ವಿದ್ಯಾಪೀಠದಡಿ ಈ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗಿದೆ.

ದೇಶಾದ್ಯಂತ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಲು ಇಲ್ಲಿಗೆ ಬರುತ್ತಾರೆ” ಎಂದು ಬಜರಂಗದಳದ ಪದಾಧಿಕಾರಿ ಹೇಳಿದರು.

ಹರಿದ್ವಾರ ಪ್ರದೇಶದಲ್ಲಿ ಹಿಂದೂಯೇತರರು ಇಂತಹ ಯಾವುದೇ ಕಾರ್ಯಕ್ರಮವನ್ನು ಆಯೋಜಿಸುವುದನ್ನು ಈಗಾಗಲೇ ಮುನ್ಸಿಪಲ್ ಕಾರ್ಪೊರೇಷನ್ ಬೈಲಾಗಳ ಅಡಿಯಲ್ಲಿ ನಿಷೇಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

“ಇಸ್ಲಾಮಿಕ್ ಜಿಹಾದ್ ಗಳು ಧಾರ್ಮಿಕ ನಗರದಲ್ಲಿ ಪಿತೂರಿ ನಡೆಸುತ್ತಿದ್ದಾರೆ. ಮೂರು ದಿನಗಳಲ್ಲಿ ತಪ್ಪಿತಸ್ಥ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಹಾಕಲು ಆಡಳಿತ ಮಂಡಳಿ ಕ್ರಮಕೈಗೊಳ್ಳದಿದ್ದರೆ, ಭಜರಂಗ ದಳ ಪ್ರತಿಭಟನೆ ತೀವ್ರಗೊಳಿಸುತ್ತದೆ ಎಂದು ಕುಮಾರ್ ಎಚ್ಚರಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪಶ್ಚಿಮ ಬಂಗಾಳ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ನಾಳೆ ಪ್ರಮಾಣವಚನ ಸ್ವೀಕಾರ

“ಕೋಲ್ಕತ್ತಾ: ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಶಾಸಕಾಂಗ...

ವೀಟೋ ಅಧಿಕಾರ ಬಳಸಿ ಮಮತಾ ಬ್ಯಾನರ್ಜಿ ಮಂತ್ರಿಮಂಡಲ ವಿಸರ್ಜಿಸಿದ ರಾಜ್ಯಪಾಲ ಆರ್‌ಎನ್ ರವಿ

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಪ್ರಮುಖ ಸಾಂವಿಧಾನಿಕ ಬಿಕ್ಕಟ್ಟು ಭುಗಿಲೆದ್ದಿತು. ರಾಜ್ಯಪಾಲ ಆರ್.ಎನ್. ರವಿ ತಮ್ಮ ವಿಶೇಷ...

ಪಂಜಾಬ್‌ನ ಜಲಂಧರ್‌ ಹಾಗೂ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಎರಡು ಬಾಂಬ್ ಸ್ಫೋಟ ಕಚ್ ಜಿಲ್ಲೆಯ ತೊರೆ ಪ್ರದೇಶದಲ್ಲಿ ಶಂಕಿತ ಪಾಕಿಸ್ತಾನಿ ದೋಣಿ ಪತ್ತೆ

“ಪಂಜಾಬ್‌ನ ಜಲಂಧರ್‌ ಹಾಗೂ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಸತತ ಎರಡು ಬಾಂಬ್ ಸ್ಫೋಟಗಳು ಸಂಭವಿಸಿದ...

ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ, ಒದ್ದು ಹೊರಹಾಕಿ ::ವಕೀಲ ಮಹೇಶ್ ಜೇಠ್ಮಲಾನಿ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶಗಳ ನಂತರ ರಾಜಕೀಯ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಮತಾ ಬ್ಯಾನರ್ಜಿ...