ನಟಿ ರನ್ಯಾ ರಾವ್ ಸಂಸ್ಥೆಗೆ ನೀಡಿದ ಭೂಮಿ ಹಂಚಿಕೆಯಲ್ಲಿ ಯಾವುದೇ ಲೋಪವಾಗಿಲ್ಲ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಜಿ ಸಚಿವ ಮುರುಗೇಶ್ ನಿರಾಣಿ

54

ನಟಿ ರನ್ಯಾ ರಾವ್‌ಗೆ ಸೇರಿದ ಸಂಸ್ಥೆಗೆ ಭೂಮಿ ಹಂಚಿಕೆಯಲ್ಲಿ ಯಾವುದೇ ಲೋಪವಾಗಿಲ್ಲ. ಅದಕ್ಕಾಗಿಯೇ ಪ್ರತ್ಯೇಕ ಸಮಿತಿ ಇದ್ದು, ಆ ಸಮಿತಿಯಲ್ಲೇ ಆದ ನಿರ್ಧಾರದಂತೆ ಹಂಚಿಕೆಯಾಗಿದೆ ಎಂದು ಕೈಗಾರಿಕೆ ಇಲಾಖೆ ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರಗೇಶ ನಿರಾಣಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮುರುಗೇಶ್ ನಿರಾಣಿ, ರನ್ಯಾ ರಾವ್‌ ಎಂಬ ಉದ್ಯಮಿ 2022ರಲ್ಲಿ 12 ಎಕರೆ ಭೂಮಿ ಬೇಕೆಂದು ಅರ್ಜಿ ಕೊಟ್ಟಿದ್ದರು. 2023ರ ಜನವರಿಯಲ್ಲಿ ಅದು ಕ್ಲಿಯರ್‌ ಆಗಿದೆ.

ಇದರಲ್ಲಿ ಕೈಗಾರಿಕಾ ಸಚಿವರದ್ದಾಗಲಿ, ನಮ್ಮ ಹಿರಿಯ ಅಧಿಕಾರಿಗಳದ್ದಾಗಲಿ ಯಾವುದೇ ರೀತಿಯ ಕಾನೂನು ಲೋಪದೋಷಗಳಾಗಿಲ್ಲ. ಅವರ ಪರವಾಗಿ ಯಾವುದೇ ನಿರ್ಧಾರ ಮಾಡಿಲ್ಲ.

ಈ ಬಗ್ಗೆ ಯಾವುದೇ ರೀತಿಯ ಅನುಮಾನಗಳಿದ್ದರೆ ನನ್ನನ್ನು ನೇರವಾಗಿ ಸಂಪರ್ಕ ಮಾಡಬಹುದು ಎಂದರು. ನಾನು ಕೈಗಾರಿಕಾ ಸಚಿವನಾಗಿದ್ದ ಅವಧಿಯಲ್ಲಿ ಕಾನೂನು ಪ್ರಕಾರ, ಜಮೀನು ಮಂಜೂರು ಮಾಡಲಾಗಿತ್ತು

. 2022ರಲ್ಲಿ 12 ಎಕರೆ ಜಮೀನಿಗಾಗಿ ಮನವಿ ಸಲ್ಲಿಸಿದ್ದರು. ತುಮಕೂರು ಜಿಲ್ಲೆ ಶಿರಾ ಕೈಗಾರಿಕಾ ಪ್ರದೇಶದಲ್ಲಿನ ಜಮೀನಿನಲ್ಲಿ 138 ಕೋಟಿ ರು. ವೆಚ್ಚದ ಕಬ್ಬಿಣದ ಟಿಎಂಟಿ ಬಾರ್‌ ಮತ್ತು ಕಬ್ಬಿಣ ಉತ್ಪನ್ನ ಉತ್ಪಾದಿಸುವ ಕಾರ್ಖಾನೆ ಆರಂಭಿಸಲಾಗುವುದು.

160 ಜನರಿಗೆ ಉದ್ಯೋಗ ಸಿಗಲಿದೆಯೆಂದು ತಿಳಿಸಿದ್ದರು. 30 ಅಧಿಕಾರಿಗಳ ತಂಡವು ಸಾಧಕ–ಬಾಧಕ ಅಂಶಗಳನ್ನು ಚರ್ಚಿಸಿ, ಜಮೀನು ಮಂಜೂರು ಮಾಡಿತ್ತು ಎಂದು ಅವರು ತಿಳಿಸಿದ್ದಾರೆ.

ಚಿತ್ರನಟಿ ರನ್ಯಾ ರಾವ್‌ ಅಕ್ರಮ ಚಿನ್ನ ಸಾಗಣೆ ಮಾಡಿರುವ ಜಾಲದಲ್ಲಿರುವವರ ಪತ್ತೆಗೆ ಸಮಗ್ರ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.

ಜತೆಗೆ ನಮ್ಮ ಅವಧಿಯಲ್ಲಿ ರನ್ಯಾರಾವ್‌ ನಿರ್ದೇಶಕಿಯಾದ ಕಂಪೆನಿಗೆ ಜಮೀನು ನೀಡಿರುವುದು ನನ್ನ ಹಂತದವರೆಗೂ ಬಂದಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ

. ಅವರಿಗೆ ಜಮೀನು ಹಂಚಿಕೆ ಮಾಡಿದ ಮೇಲೆ ಹಣ ಪಾವತಿಸುವಂತೆ ನೊಟೀಸ್‌ ನೀಡಲಾಗಿತ್ತು. ಅವರು ಹಣ ಪಾವತಿಸದ ಕಾರಣ ಭೂಮಿ ಹಂಚಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...

ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಭಾವಿ ಪತಿ ಸೈಯದ್

ಬೆಂಗಳೂರು: ತನ್ನನ್ನು  ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ...

1 ಲಕ್ಷ ರೂ ಬಿಲ್ ಮಾಡಿದ ಆಸ್ಪತ್ರೆ ಐಟಮೈಸ್ಡ್ ಬಿಲ್ ಕೇಳಿದ ಮೇಲೆ 57 ಸಾವಿರಕ್ಕೆ ಇಳಿಕೆ ರೋಗಿ ತಾನು ಮಾಡಿಸಿಕೊಳ್ಳದ ಶಸ್ತ್ರಚಿಕಿತ್ಸೆಗೂ ಬಿಲ್

ನವದೆಹಲಿ: ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಯೊಂದು ಮನಸೋ ಇಚ್ಛೆ ಬಿಲ್ ಮಾಡಿ ಹಣ ಪೀಕುವ...

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿಯನ್ನು ಅತಿಕ್ರಮಣ ಮಾಡಿದವರು ಮುಸ್ಲಿಮರೇ:: ಸಚಿವ ಜಮೀರ್ ಅಹ್ಮದ್

ಬೆಂಗಳೂರು: ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಸೋಮವಾರ...