ಹೋಳಿ ಹಬ್ಬದ ಪ್ರಯುಕ್ತ ಲಾಟ್ ಸಾಹೇಬ್ ಮೆರವಣಿಗೆ  ಮಸೀದಿಗಳಿಗೆ ಟಾರ್ಪಲಿನ್  ಮುಚ್ಚಿ ಮೆರವಣಿಗೆ  ಪೊಲೀಸ್ ಬಂದೋಬಸ್ತ್

51

“ಹೋಳಿ ಹಬ್ಬದ ಆಚರಣೆ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದ್ದು ಯಾವುದೇ ಅಹಿತಕ ಘಟನೆಗಳು ನಡೆಯದಂತೆ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ

. ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹೋಳಿ ಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾಗುವ ಐತಿಹಾಸಿಕ ‘ಲಾಟ್‌ ಸಾಹೇಬ್‌’ ಮೆರವಣಿಗೆ ಸಾಗುವ ಮಾರ್ಗದಲ್ಲಿನ ಮಸೀದಿಗಳನ್ನು ಟಾರ್ಪಾಲಿನ್‌ನಿಂದ ಮುಚ್ಚಲು ನಗರ ಪಾಲಿಕೆ ನಿರ್ಧರಿಸಿದೆ

. ಈ ಬಗ್ಗೆ ಮಾಹಿತಿ ನೀಡಿರುವ ಪಾಲಿಕೆ ಆಯುಕ್ತ ವಿಪಿನ್‌ ಕುಮಾರ್ ಮಿಶ್ರಾ ಅವರು, ‘ಲಾಡ್‌ ಸಾಹೇಬ್‌’ ಮೆರವಣಿಗೆ ಸಾಗುವ ಮಾರ್ಗದಲ್ಲಿನ 20 ಮಸೀದಿಗಳಿಗೆ ಟಾರ್ಪಾಲಿನ್‌ ಹೊದಿಸಲಾಗುವುದು. ಈ ಮಾರ್ಗದುದ್ದಕ್ಕೂ 350 ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಸುರಕ್ಷತೆ ದೃಷ್ಟಿಯಿಂದ ಮಸೀದಿಗಳು ಹಾಗೂ ಟ್ರಾನ್ಫ್‌ಫಾರ್ಮರ್‌ಗಳ ಬಳಿ ತಡೆಗೋಡೆಗಳನ್ನು ನಿರ್ಮಿಸಲಾಗಿದೆ ಎಂದರು.

ಏನಿದು ‘ಲಾಟ್‌ ಸಾಹೇಬ್’ ಮೆರವಣಿಗೆ? ಅಂದಹಾಗೆ ‘ಲಾಟ್‌ ಸಾಹೇಬ್’ ಮೆರವಣಿಗೆ 18ನೇ ಶತಮಾನದಿಂದ ನಡೆದುಕೊಂಡು ಬರುತ್ತಿರುವ ಸಂಪ್ರದಾಯ. ಬ್ರಿಟಿಷ್‌ ಅಧಿಕಾರಿಯಂತೆ ವೇಷ ತೊಟ್ಟ ವ್ಯಕ್ತಿ ಎತ್ತಿನ ಗಾಡಿಯಲ್ಲಿ ಕುಳಿತುಕೊಂಡಿರುತ್ತಾನೆ.

ಈ ಗಾಡಿ ಸಾಗುವಾಗ ಜನರು ಈ ವ್ಯಕ್ತಿಯತ್ತ ಪಾದರಕ್ಷೆಗಳನ್ನು ಎಸೆಯುತ್ತಾರೆ. ಈ ವಿಧಿಯೊಂದಿಗೆ ಹೋಳಿ ಆಚರಣೆಗೆ ಚಾಲನೆ ಸಿಗುತ್ತದೆ. ಸಂಭಾಲ್ ನಲ್ಲೂ ಮಸೀದಿಗಳಿಗೆ ಹೊದಿಕೆ ಇನ್ನು ಶಹಜಹಾನ್ ಪುರ ಮಾತ್ರವಲ್ಲದೇ ಸಂಭಾಲ್ ನಲ್ಲೂ ಮಸೀದಿಗಳಿಗೆ ಹೊದಿಕೆಗಳನ್ನು ಹೊದಿಸಲಾಗಿದ್ದು,

ಸಂಭಾಲ್ ಜಾಮಾ ಮಸೀದಿಯನ್ನು ಟಾರ್ಪಾಲಿನ್ ನಿಂದ ಮುಚ್ಚಲಾಗಿದೆ. ಸಂಭಾಲ್ ಜಿಲ್ಲೆಯ ಆಡಳಿತದ ಅಧಿಕಾರಿಗಳು ಮಸೀದಿಯನ್ನು ಟಾರ್ಪಲಿನ್ ನಿಂದ ಮುಚ್ಚಿದ್ದಾರೆ.

ಜಾಮಾ ಮಸೀದಿ ಮಾತ್ರವಲ್ಲದೇ ಹೋಳಿ ಮೆರವಣಿಗೆಯ ಮಾರ್ಗದಲ್ಲಿ ಬರುವ 10 ಮಸೀದಿಗಳನ್ನು ಇದೇ ರೀತಿಯಲ್ಲಿ ಮುಚ್ಚಲಾಗಿದೆ ಎಂದು ಹೇಳಲಾಗಿದೆ.

ಒಂದೇ ತಿಂಗಳಲ್ಲಿ ಹೋಳಿ ಮತ್ತು ರಂಜಾನ್ ಹಬ್ಬ ಬಂದಿದ್ದು, ಎರಡೂ ಧಾರ್ಮಿಕ ಕಾರ್ಯಕ್ರಮಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಮತ್ತು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷ ನ್ಯಾಯಾಲಯದ ನಿರ್ದೇಶನದ ಜಾಮಾ ಮಸೀದಿಯ ಸಮೀಕ್ಷೆಯ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದ ನಂತರ ಕನಿಷ್ಠ ಐದು ಜನರು ಸಾವನ್ನಪ್ಪಿದರು ಮತ್ತು 20 ಜನರು ಗಾಯಗೊಂಡಿದ್ದರು.

ಈ ಜಾಮಾ ಮಸೀದಿಯನ್ನು ಕೆಡವಲಾದ ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಇಲ್ಲಿ ಸಮೀಕ್ಷೆ ನಡೆಸಲಾಗಿತ್ತು. ಬಳಿಕ ಪ್ರತಿಭಟನೆ ಭುಗಿಲೆದ್ದು ವ್ಯಾಪಕ ಹಿಂಸಾಚಾರ ಕೂಡ ನಡೆದಿತ್ತು.

Leave a comment

Leave a Reply

Your email address will not be published. Required fields are marked *

Related Articles

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಸಂದರ್ಭದಲ್ಲಿ ಮೋದಿ ಸರಕಾರದ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದಂತಹ ಪರಿಸ್ಥಿತಿಯ ನಡುವೆ, ಹಿರಿಯ ಕಾಂಗ್ರೆಸ್ ನಾಯಕ...

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆ ಟಿಎಂಸಿಯಲ್ಲಿ ಭುಗಿಲೆದ್ದ ಅಸಮಾಧಾನ

ಕೋಲ್ಕತ್ತಾ: ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ...

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ  ಸೇರಿದಂತೆ 40ಪ್ರಮುಖರು ಬಿಜೆಪಿಗೆ ಸೇರ್ಪಡೆ

“ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿಯಿರುವಂತೆಯೇ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಿದೆ....

ಮಹಿಳೆಯರ ಬಗ್ಗೆ ಅಶ್ಲೀಲ ಹಾಡು ಹಾಡಿದ ರ‍್ಯಾಪರ್ ಬಾದ್‌ಶಾ ಹಣೆಗೆ ನೇರವಾಗಿ ‘ಗುಂಡು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬೆದರಿಕೆ

“ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈಗ ಗಾಯಕ-ರ‍್ಯಾಪರ್ ಬಾದ್‌ಶಾ ಅವರ ಹರಿಯಾಣ ಭಾಷೆಯ ಹಾಡು ‘ಟಟೀರಿ’ ಸುತ್ತಲಿನ...