thekarnatakatoday.com
News

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರದ್ದುಗೊಳಿಸುವಂತೆ ವಿಧಾನ ಪರಿಷತ್ ನಲ್ಲೂ ಮುಂದುವರಿದ ಬಿಜೆಪಿ ಜೆಡಿಎಸ್ ಪ್ರತಿಭಟನೆ

“ವಿಧಾನ ಪರಿಷತ್ತಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರದ್ದುಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ, ಏಜೆನ್ಸಿಗಳಿಗೆ 40 ಲಕ್ಷ ರೂ.ಗಳನ್ನು ನೀಡಿರುವುದನ್ನು ಒಪ್ಪಿಕೊಂಡಿದೆ ಎಂದು ಬಿಜೆಪಿ ಸದಸ್ಯ ಮತ್ತು ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

“ನೀವು ಏಜೆನ್ಸಿಗಳಿಗೆ ಹಣ ನೀಡಿದ್ದರೆ, ಅನುಷ್ಠಾನ ಸಮಿತಿ ಏಕೆ? ಕಾರ್ಯಕರ್ತರಿಗೆ ಸಂಬಳ ನೀಡಿ ಜನರಿಂದ ಮಾಹಿತಿ ಪಡೆಯುವುದರ ಅರ್ಥವೇನು?” ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು.

ಈ ವೇಳೆ ನಾರಾಯಣಸ್ವಾಮಿ ಅವರಿಗೆ ಸಾಥ್ ನೀಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಎಂ2ಎಂ ಸಂಸ್ಥೆಗೆ ಒಂದು ಕೋಟಿ ರೂ. ಮತ್ತು ಇನ್ನೊಂದು ಸಂಸ್ಥೆಗೆ 9.25 ಕೋಟಿ ರೂ. ನೀಡಲಾಗಿದೆ

ಎಂದು ಗಮನಸೆಳೆದರು. ಇದನ್ನು ಉತ್ತರದಲ್ಲಿ ಉಲ್ಲೇಖಿಸಲಾಗಿಲ್ಲ. ಇದನ್ನು ಏಕೆ ಮರೆಮಾಚಲಾಗುತ್ತಿದೆ? ಎಂದು ಪ್ರಶ್ನಿಸಿದರು.

ಇದಕ್ಕು ಮೊದಲು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ ಅವರು, , ಗ್ಯಾರಂಟಿಗಳಿಂದ ರಾಜ್ಯಕ್ಕೆ ನಷ್ಟವೆಂದು ಬಿಜೆಪಿ ಆರೋಪಿಸಿತ್ತು. ಹಣ ಸರಿಯಾಗಿ ಜನರಿಗೆ ತಲುಪುತಿದೆಯಾ ಎಂದು ತಿಳಿಯುವುದಕ್ಕೆ ಕೆಲ ಏಜೆನ್ಸಿಗಳಿಗೆ ವಹಿಸಿದ್ದೆವು.

ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ಮೀಸಲಿರಿಸಲಾಗಿದೆ. ಮೌಲ್ಯಮಾಪನ ನಡೆಸಲು ಶೇ.1ರಷ್ಟು ಖರ್ಚು ಮಾಡಿದರೆ ತಪ್ಪೇನು? ಎಂದು ಪ್ರಶ್ನಿಸಿದರು.

ಈ ಮಧ್ಯೆ, ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಅವರು ಮಧ್ಯಪ್ರವೇಶಿಸಿ ಶುಕ್ರವಾರ ಇದರ ಬಗ್ಗೆ ಚರ್ಚೆಗೆ ಅರ್ಧ ಗಂಟೆ ಸಮಯ ನೀಡಲಾಗುವುದು ಎಂದು ಹೇಳಿದರು.

Related posts

ಬಿಟ್ ಕಾಯಿನ್ ಹಗರಣ ಎಸ್ಐಟಿ ಮುಂದೆ ಹಾಜರಾದ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್

The Karnataka Today

ಜಾತಿ ಗಣತಿ ಜಾರಿಗೆ ತರುವ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದೆ ಮುಗಿದ ಸಚಿವ ಸಂಪುಟ ಸಭೆ ಮುಂದಿನ ಸಭೆಯಲ್ಲಿ ವಿಸ್ಕೃತ ಚರ್ಚೆ:: ಮುಖ್ಯಮಂತ್ರಿ ಸಿದ್ದರಾಮಯ್ಯ

The Karnataka Today

ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹತ್ಯೆಗೆ ಬಿಜೆಪಿಯಿಂದ ಸಂಚು ಆರೋಪ ಅತಿಶಿ ದೆಹಲಿ ಮುಖ್ಯ ಮಂತ್ರಿ

The Karnataka Today

Leave a Comment