thekarnatakatoday.com
Crime

ಟೊಯೋಟಾ ಬುಶೋಕುನಲ್ಲಿ ಪಾಕ್ ಪರ ಗೋಡೆ ಬರಹ ಕಾರ್ಖಾನೆ ಕಾರ್ಮಿಕರಿಗೆ ನೋಟಿಸ್ ಪೊಲೀಸರಿಗೆ ದೂರು

ಬಿಡದಿಯ ಇಂಡಸ್ಟ್ರಿಯಲ್‌ ಏರಿಯಾದಲ್ಲಿರುವ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಪತ್ತೆಯಾಗಿದ್ದು, ಕಿಡಿಗೇಡಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಬಿಡದಿಯ ಟೊಯೋಟಾ ಬುಶೋಕುನಲ್ಲಿ ಮಾರ್ಚ್ 15 ರಂದು ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ ಕೆಲವು ಕಿಡಿಗೇಡಿಗಳು ಶಾಚಾಲಯದ ಗೋಡೆಯಲ್ಲಿ “ಪಾಕಿಸ್ತಾನ ಜೈ, ಕನ್ನಡಿಗರು ಸೂ,…. ಮಕ್ಕಳು ಎಂದು ಬರೆದಿದ್ದಾರೆಂದು ತಿಳಿದುಬಂದಿದೆ.

ಈ ಬಗ್ಗೆ ಉದ್ಯೋಗಿಗಳಿಗೆ ಕಂಪನಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಯಾರೇ ಕಿಡಿಗೇಡಿ ಇದ್ದರೂ ಕಠಿಣ ಕ್ರಮವಹಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ ರೀತಿಯ ಬರವಣಿಗೆಗಳು ಉದ್ಯೋಗಿಗಳ ಮನಸ್ಸಿನಲ್ಲಿ ಅಶಾಂತಿಯನ್ನು ಸೃಷ್ಟಿಸುವುದಲ್ಲದೇ ಸಂಸ್ಥೆಯಲ್ಲಿ ತೀವ್ರ ರೀತಿಯ ಅಶಿಸ್ತಿನ ಬೆಳವಣಿಗೆಗೆ ಕಾರಣವಾಗುತ್ತದೆ.

ಮುಂದುವರೆದು ಈ ರೀತಿಯ ಬರವಣಿಗೆಗಳು ದೇಶದ ಕಾನೂನಿನ ಚೌಕಟ್ಟಿನಲ್ಲಿ “ದೇಶದ್ರೋಹಿ” ಅಪರಾಧಗಳಡಿಯಲ್ಲಿ ವರ್ಗೀಕೃತವಾಗಿರುತ್ತವೆ

. ಈ ಕೃತ್ಯ ಇದೇ ರೀತಿ ಮುಂದುವರೆದಲ್ಲಿ ಮಾಹಿತಿಯನ್ನು ಪೊಲೀಸರ ಗಮನಕ್ಕೆ ತರುವುದರೊಂದಿಗೆ ಜೈಲು ವಾಸವಾಗುವವರೆಗೂ ಕಿಡಿಗೇಡಿಗಳನ್ನು ಬಿಡುವುದಿಲ್ಲ ಮತ್ತು ಬೆರಳಚ್ಚು ಹಾಗೂ ಬರವಣಿಗೆ ತಜ್ಞರ ಗಮನಕ್ಕೆ ತಂದು ಈ ಕೃತ್ಯ ಹೆಸಗುವವರನ್ನು ಕಂಡುಹಿಡಿದು ಹೆಚ್ಚಿನ ಮಟ್ಟದಲ್ಲಿ ಶಿಕ್ಷೆಯಾಗುವವರೆಗೂ ಆಡಳಿತ ಮಂಡಳಿಯು ಕಾಳಜಿ ವಹಿಸಲು ಸಿದ್ಧವಿರುತ್ತದೆ.

ಆದ್ದರಿಂದ ಎಲ್ಲಾ ವರ್ಗದ ಉದ್ಯೋಗಿಗಳು ಮೇಲೆ ತಿಳಿಸಿದ ವಿಷಯವನ್ನು ಸೂಕ್ಷ್ಮವಾಗಿ ಗಮನಕ್ಕೆ ತೆಗೆದುಕೊಳ್ಳಬೇಕೆಂದು ಈ ಮೂಲಕ ತಿಳಿಸಲಾಗಿದೆ.

ಹಾಗೂ ಯಾವುದೇ ಉದ್ಯೋಗಿಯು ಈ ರೀತಿಯ ಕಿಡಿಗೇಡಿ ಕೃತ್ಯ ಮಾಡುವಾಗ ಸಿಕ್ಕಿಬಿದ್ದಲ್ಲಿ ಅತ್ಯಂತ ಕಠಿಣ ಶಿಸ್ತಿನ ಕ್ರಮ ಎದುರಿಸಬೇಕಾಗುತ್ತದೆ ಎಂದು ಈ ಮೂಲಕ ಆಡಳಿತ ಮಂಡಳಿಯು ತಿಳಿಸುತ್ತದೆ ಎಂದು ಸುತ್ತೋಲೆ ಹೊರಡಿಸಿದೆ.

Related posts

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರ  ಗುಂಡೇಟು

The Karnataka Today

ಉದ್ಯಮಿ ಅಪಹರಣ5ಕೋಟಿ ಹಣಕ್ಕೆ ಬೇಡಿಕೆ ಪ್ರಕರಣ ಸಚಿವ ಸತೀಶ್ ಜಾರಕಿಹೊಳಿ  ಆಪ್ತೆ ಬಂಧನ

The Karnataka Today

ನವಜಾತ ಶಿಶು ಅಪಹರಣ ಪೊಲೀಸರ ಕಾರ್ಯಾಚರಣೆಯಿಂದ ತಾಯಿಯ ಮಡಿಲು ಸೇರಿದ ಮಗು ಮೂವರ ಬಂಧನ

The Karnataka Today

Leave a Comment