ಸಾಲ ವಸೂಲಾತಿ ಸೊಸೈಟಿಯಲ್ಲಿ ಮಹಿಳೆಯನ್ನು ರಾತ್ರಿವರೆಗೆ ಕುಳ್ಳಿರಿಸಿ ಜಾತಿನಿಂದನೆ,ಜೀವ ಬೆದರಿಕೆ ಒಡ್ಡಿದ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

2

ಉಡುಪಿ ಕಲ್ಯಾಣಪುರ  ಸಂತೆಕಟ್ಟೆ  ಮೇರಿ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಯಲ್ಲಿ  ನಿಕಿತ ಎನ್ನುವ ಮಹಿಳೆ ಸಾಲವನ್ನು ಪಡೆದುಕೊಂಡಿದ್ದು, ಸಾಲದ ಕಂತನ್ನು ಸ್ವಲ್ಪ ಸ್ವಲ್ಪ ಕಟ್ಟುತ್ತಿದ್ದು,

ಆದರೂ ಸೊಸೈಟಿಯ ಇಬ್ಬರೂ ಸಿಬ್ಬಂದಿಗಳು ಪದೇ-ಪದೇಇವರ ಮನೆಗೆ ಹಾಗೂ ಅವರ ಗಂಡ ಕೆಲಸ ಮಾಡುವ ಸ್ಥಳಕ್ಕೆ ಹೋಗಿ ಸಾಲದ ಹಣವನ್ನು ಕಟ್ಟುವಂತೆ ಕಿರುಕುಳ ನೀಡುತ್ತಿದ್ದು,

ಇದೇ ಕಾರಣದಿಂದ ನಿಕಿತಅವರ ಗಂಡನನ್ನು ಕೆಲಸದಿಂದ ತೆಗೆದುಹಾಕಿದ್ದು, ದಿನಾಂಕ:13/03/2025 ರಂದು ಸಂಜೆ 5 ಗಂಟೆಗೆ ದ್ವಿಚಕ್ರ ವಾಹನದಲ್ಲಿ ಬಂದ ಸೊಸೈಟಿಯ ಇಬ್ಬರು ಸಿಬ್ಬಂದಿಗಳು  ದೂರುದಾರರ ಮನೆಯನ್ನು ಅಕ್ರಮವಾಗಿ ಪ್ರವೇಶಮಾಡಿ,

ಏಕವಚನದಲ್ಲಿ ಅವಾಚ್ಯ ಶಬ್ದಗಳಿಂದ ಬೈದು ನಾಳೆ ಸೊಸೈಟಿಗೆ 10,000/- ರೂಪಾಯಿ ಹಣವನ್ನು ಕಟ್ಟಬೇಕು, ಇಲ್ಲವಾದಲ್ಲಿ ಹೇಗೆ ವಸೂಲಿ ಮಾಡಬೇಕು ಗೊತ್ತಿದೆ ಎಂದು ಬೆದರಿಕೆ ಹಾಕಿದ್ದು,

ಮರುದಿನ ದಿನಾಂಕ: 14/03/2025 ರಂದು ನಿಕಿತಅವರು ಸೊಸೈಟಿಗೆ 3000/-ರೂಪಾಯಿಗಳನ್ನು ತೆಗೆದುಕೊಂಡು ಹೋಗಿ ಕಟ್ಟಿದ್ದು, ಸೊಸೈಟಿಯವರು ಹಣ ಕಟ್ಟಿರುವುದಕ್ಕೆ  ಯಾವುದೇ ರಶೀದಿಯನ್ನು ನೀಡದೇ

ನಿಕಿತರನ್ನು ಸಂಜೆ 5:30 ಗಂಟೆಯಿಂದ 7 ಗಂಟೆಯವರೆಗೆ ಅಲ್ಲಿಯೇ ಕೂರಿಸಿ ಸೊಸೈಟಿಯ ಮ್ಯಾನೇಜರ್‌ ಹಾಗೂ ಅಲ್ಲಿಯ ಸಿಬ್ಬಂದಿಗಳಾದ 2 ಮಹಿಳೆಯರು ಮತ್ತು 2 ಪುರುಷರು ಅವಾಚ್ಯ ಶಬ್ದಗಳಿಂದ ಕೆಟ್ಟದಾಗಿ ಬೈದಿದ್ದು,

ಮ್ಯಾನೇಜರ್‌ ದೂರುದಾರರಿಗೆ ಜಾತಿ ನಿಂದನೆ ಮಾಡಿ  ನೀನು 10,000/- ರೂಪಾಯಿ ಹಣವನ್ನು ಕಟ್ಟಲೇ ಬೇಕು ಎಂದು ಹೇಳಿ ಬೆದರಿಕೆ ಹಾಕಿರುತ್ತಾರೆ . ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

Leave a comment

Leave a Reply

Your email address will not be published. Required fields are marked *

Related Articles

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್...

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು...