ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಮಾಜಿ ಸಚಿವ ಎಚ್ ಎಂ ರೇವಣ್ಣ  ರಿಂದ ಕಾಂಗ್ರೆಸ್  ಮಹಿಳಾ ಕಾರ್ಯಕರ್ತೆ ಮೇಲೆ ಹಲ್ಲೆ  ಆರೋಪ ದೂರು ದಾಖಲು

51

“ಮಾಜಿ ಸಚಿವ ಹೆಚ್.ಎಂ.ರೇವಣ್ಣ ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಬೆಂಗಳೂರಿನ ಹೈ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ದೂರು ದಾಖಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಎಚ್.ಎಂ. ರೇವಣ್ಣ ಅವರ ವಿರುದ್ಧ ಹಲ್ಲೆ ಮತ್ತು ಜೀವ ಬೆದರಿಕೆ ಆರೋಪ ಕೇಳಿ ಬಂದಿದೆ.

ಸದ್ಯ ರೇವಣ್ಣ ಅವರು ಕರ್ನಾಟಕ ರಾಜ್ಯ ಖಾತರಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿದ್ದಾರೆ. ರೇವಣ್ಣ ನಂದಿನಿ ಅವರನ್ನು ತಳ್ಳುತ್ತಿರುವ ವೀಡಿಯೊ ಸಾಕ್ಷ್ಯವನ್ನು ನಂದಿನಿ ಪೊಲೀಸರಿಗೆ ಸಲ್ಲಿಸಿದ್ದಾರೆ.

ವಿಡಿಯೋ ತುಣುಕಿನಲ್ಲಿ, ನಂದಿನಿ ರೇವಣ್ಣ ಅವರು ರಾಹುಲ್ ಗಾಂಧಿ ಅವರಿಗೆ ಈ ವಿಷಯವನ್ನು ವರದಿ ಮಾಡಿ ವೀಡಿಯೊವನ್ನು ಕಳುಹಿಸುವುದಾಗಿ ಹೇಳುತ್ತಿರುವುದು ಕಂಡುಬರುತ್ತಿದೆ. ಅಲ್ಲಿಂದ ಹೊರಹೋಗುವಂತೆ ಹೇಳುತ್ತಿರುವುದು ಕಂಡುಬರುತ್ತದೆ

. ಎಚ್. ಎಂ ರೇವಣ್ಣ ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿರುವ ಕಾರಣ ಈ ಪ್ರಕರಣ ಸದ್ಯ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಗೆ ಕಾರಣವಾಗುವ ಸಾಧ್ಯತೆಯಿದೆ.

ತಮ್ಮ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಮಾಜಿ ಸಚಿವ ಹೆಚ್ಎಂ ರೇವಣ್ಣ ಸ್ಪಷ್ಟನೆ ನೀಡಿದ್ದಾರೆ. ಆ ಮಹಿಳೆ ನನಗೆ ಕಿರಿಕಿರಿ ಮಾಡಿಕೊಂಡು ಗಲಾಟೆ ಮಾಡುತ್ತಿದ್ದರು.

ಪದೇ ಪದೇ ರಾಹುಲ್ ಗಾಂಧಿ ಹೆಸರು ಹೇಳುತ್ತಿದ್ದಳು. ಕೊಲೆ ಮಾಡಲು ಬಂದಿದ್ದರು, ಹೊಡೆದರು ಅನ್ನೋದು ಸರಿಯಲ್ಲ. ವಿಡಿಯೋ ಮಾಡಬೇಡ ಅಂತಾ ಮೊಬೈಲ್ ತಳ್ಳಿದ್ದು ನಿಜ. ನಾವು ಯಾರೂ ಆಕೆಯ ಮೇಲೆ ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ಅಧಿಕಾರಿಯನ್ನು ವರ್ಗಾವಣೆ ಮಾಡಿಸುವುದಾಗಿ ಮಹಿಳೆ ಫೋನ್ಪೇ ಮೂಲಕ 1 ಲಕ್ಷ ರೂ. ದುಡ್ಡು ಪಡೆದಿದ್ದಾಳೆ. ನಾನು ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ ಎಂದು ಹೇಳಿದರು.


ಅಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದನ್ನು ನಿಲ್ಲಿಸುವಂತೆ ಆಕೆಗೆ ಹೇಳಿದ್ದೆ ಎಂದು ರೇವಣ್ಣ ತಿಳಿಸಿದ್ದಾರೆ. ಆದರೆ ಆಕೆ ಇದನ್ನು ಒಪ್ಪಿಕೊಳ್ಳುತ್ತಿಲ್ಲ. ನಾನು ಮಹಿಳಾ ಕಾರ್ಯಕರ್ತೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದೇನೆ ಮತ್ತು ಅನುಚಿತ ಭಾಷೆಯನ್ನು ಬಳಸಿದ್ದೇನೆ ಎಂದು ಈಗ ಸುಳ್ಳು ಆರೋಪ ಮಾಡುತ್ತಿದ್ದಾರೆ.


ನನ್ನಿಂದಾಗಿ ತನಗೆ ಜೀವ ಭಯವಿದೆ ಎಂದು ಅವರು ಹೇಳಿಕೊಳ್ಳುತ್ತಿದ್ದಾರೆ. ಅವರಿಗೆ ಹಾನಿ ಮಾಡುವುದರಿಂದ ನನಗೇನು ಲಾಭ? ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ, ನಾನು ಎಂದಿಗೂ ಅಂತಹ ಕೃತ್ಯಗಳಲ್ಲಿ ತೊಡಗಿಲ್ಲ ಎಂದು ರೇವಣ್ಣ ಪ್ರತಿಪಾದಿಸಿದರು.

ನಾನು ಏನಾದರೂ ತಪ್ಪು ಮಾಡಿದ್ದರೆ, ಪಕ್ಷವು ನನ್ನ ವಿರುದ್ಧ ಕ್ರಮ ಕೈಗೊಳ್ಳಲಿ. ಅವರು ರಾಹುಲ್ ಗಾಂಧಿಯವರ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಮತ್ತು ವರ್ಗಾವಣೆಗೆ ಸಂಬಂಧಿಸಿದ ಹಣಕಾಸಿನ ವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ನಾನು ಎಐಸಿಸಿಗೆ ದೂರು ನೀಡುತ್ತೇನೆ. ಈ ಬೆಳವಣಿಗೆಯಿಂದ ನನಗೆ ತುಂಬಾ ನೋವಾಗಿದೆ” ಎಂದು ಅವರು ಹೇಳಿದ್ದಾರೆ

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ ಉಪ ಚುನಾವಣೆ ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ:: ಡಿಕೆ ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್ ಎಸ್...

ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಭಾವಿ ಪತಿ ಸೈಯದ್

ಬೆಂಗಳೂರು: ತನ್ನನ್ನು  ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ...

1 ಲಕ್ಷ ರೂ ಬಿಲ್ ಮಾಡಿದ ಆಸ್ಪತ್ರೆ ಐಟಮೈಸ್ಡ್ ಬಿಲ್ ಕೇಳಿದ ಮೇಲೆ 57 ಸಾವಿರಕ್ಕೆ ಇಳಿಕೆ ರೋಗಿ ತಾನು ಮಾಡಿಸಿಕೊಳ್ಳದ ಶಸ್ತ್ರಚಿಕಿತ್ಸೆಗೂ ಬಿಲ್

ನವದೆಹಲಿ: ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಯೊಂದು ಮನಸೋ ಇಚ್ಛೆ ಬಿಲ್ ಮಾಡಿ ಹಣ ಪೀಕುವ...

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿಯನ್ನು ಅತಿಕ್ರಮಣ ಮಾಡಿದವರು ಮುಸ್ಲಿಮರೇ:: ಸಚಿವ ಜಮೀರ್ ಅಹ್ಮದ್

ಬೆಂಗಳೂರು: ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಸೋಮವಾರ...