thekarnatakatoday.com
Karavali Karnataka

ಪೆರ್ಡೂರು ಬಿಜೆಪಿ ಮುಖಂಡ ವೈನ್ ಶಾಪ್ ಮಾಲೀಕ ಸುಭಾಷ್ ಹೆಗ್ಡೆ ಯಿಂದ ವಯೋವೃದ್ಧರ ಮೇಲೆ ಹಲ್ಲೆ ಜೀವ ಬೆದರಿಕೆ ಪ್ರಕರಣ ದಾಖಲು

ಪೆರ್ಡೂರು ಬಿಜೆಪಿ ಮುಖಂಡ, ವೈನ್ ಶಾಪ್ ಮಾಲೀಕ ಸುಭಾಷ್ ಹೆಗ್ಡೆ ಯಿಂದ ವಯೋವೃದ್ಧರ ಮೇಲೆ ಹಲ್ಲೆ ಹಾಗೂ ಜೀವ ಬೆದರಿಕೆ ದೂರು ದಾಖಲು

ಪದ್ಮನಾಭ ಅವರು ತಮ್ಮ ಜಾಗದಲ್ಲಿದ್ದ ನಾಗಬನವನ್ನ ಅಭಿವೃದ್ಧಿಪಡಿಸಿ ಅದಕ್ಕೆ ಸುತ್ತಲೂ ಕಾಂಪೌಂಡ್ ನಿರ್ಮಿಸುವ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅದಕ್ಕೆ ಅಡ್ಡಿ ಪಡಿಸುವ ಉದ್ದೇಶದಿಂದ ನಾಗಬನ ದಿಂದ

ಪಕ್ಕದಲ್ಲಿ ಅವರ ಪಟ್ಟಾ ಜಾಗದಲ್ಲಿ ಮೂರು ನಾಲ್ಕು ಮನೆಯವರಿಗೂ ಉಪಯೋಗಕ್ಕಾಗಿ ರಸ್ತೆಯನ್ನು ಕೂಡ ನೀಡಿದ್ದರು ಇವರ ನಾಗಬನದಲ್ಲಿ ಅಭಿವೃದ್ಧಿ ಕಾರ್ಯವನ್ನು ಹಾಗೂ ಇವರ ಜಾಗದಲ್ಲಿ ನಡೆಸಲು

ಉದ್ದೇಶಿಸಿದ್ದ ಅಭಿವೃದ್ಧಿ ಕಾರ್ಯವನ್ನ ತಡೆಯಬೇಕೆನ್ನುವ ದುರುದ್ದೇಶದಿಂದ ರಸ್ತೆ ಹಾಗೂ ಪದ್ಮನಾಭ ಅವರ ಜಾಗಕ್ಕೆ ಜಲ್ಲಿಹಾಗೂ ಮರಮಟ್ಟುಗಳನ್ನು ತಂದು ಹಾಕಿ ತೊಂದರೆ ನೀಡಿರುವುದು ಸುಭಾಸ್ ಹೆಗ್ಡೆಯ ಗೂಂಡಾಗಿರಿಗೆ ಸ್ಪಷ್ಟ ನಿದರ್ಶನವಾಗಿದೆ

ಈ ಹಿಂದೆ ಕೂಡ ಹಣದ ದರ್ಪದಿಂದ ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಂಡು ಬಡಜನರಿಗೆ ಅನ್ಯಾಯ ಮಾಡಿರುವುದು ಸಾಕಷ್ಟು ನಿದರ್ಶನವಿದೆ ಎನ್ನುತ್ತಾರೆ ಸ್ಥಳೀಯರು

ಬಿಜೆಪಿ ಮುಖಂಡ ಎಂದು ಹೇಳಿಕೊಂಡು ನಾಗದೇವರ ಪೂಜೆ ಹಾಗೂ ನಾಗಬನವನ್ನು ಅಭಿವೃದ್ಧಿ ಪಡಿಸಲು ಆಡ್ಡಿ ಪಡಿಸಿದ್ದು ಎಷ್ಟು ಸರಿಯನ್ನೋದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ ಕೂಡಲೆ ಸುಭಾಸ್ ಹೆಗ್ಡೆ ಯನ್ನು ಬಂಧಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ

ದೂರುದಾರರಾದ ಪದ್ಮನಾಭ (78) ಇವರ ಬಾಬ್ತು 1.38 ಎಕ್ರೆ ಜಾಗವು ಪೆರ್ಡೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿದ್ದು

ಸದರಿ ಜಾಗಕ್ಕೆ ದಿನಾಂಕ 18/03/2025 ರಂದು ಬೆಳಿಗ್ಗೆ 11 ಗಂಟೆಗೆ ಪದ್ಮನಾಭ ಅವರು ಹಾಗೂ ಅವರ ಮಗ ಹೋಗಿದ್ದು ಸದರಿ ಸ್ಥಳದಲ್ಲಿ ಪೆರ್ಡೂರಿನ ಸುಭಾಸ್‌ ಹೆಗ್ಡೆ ರವರು ಅಕ್ರಮವಾಗಿ ಪ್ರವೇಶಿಸಿ ಮರದ ತುಂಡು ಹಾಗೂ ಕಲ್ಲುಗಳನ್ನು ಶೇಖರಿಸಿಟ್ಟಿದ್ದು
ಸದರಿ ಸ್ವತ್ತುಗಳನ್ನು ತೆರವುಗೊಳಿಸುವಂತೆ ಅವರಲ್ಲಿ ವಿನಂತಿಸಿಕೊಂಡಾಗ ಅವರು ದೂರುದಾರರ ಕಾಲರ್‌ ಪಟ್ಟಿ ಹಿಡಿದು” ಅವ್ಯಾಚ್ಯ ಶಬ್ದದಿಂದ ಬೈದು ಕೈಯಿಂದ ತಳ್ಳಿದ್ದು ಅಲ್ಲದೇ ʼʼನಿನ್ನ ಕೈಕಾಲು ಕಡಿದು ಹಾಕಿ ಕೊಂದು ಜಮೀನಿನಲ್ಲಿ ಹೂತು ಹಾಕುತ್ತೇನೆ ʼʼ ಎಂದುಜೀವ ಬೆರದರಿಕೆ ಹಾಕಿರುತ್ತಾನೆ.
ಈ ಬಗ್ಗೆ ಹಿರಿಯಡ್ಕ ಠಾಣಾ ಅಪರಾಧ ಕ್ರಮಾಂಕ 25/2025 U/S : 329(3), 115(2). 352, 351(2) BNS ರಂತೆ ಪ್ರಕರಣ ದಾಖಲಾಗಿದೆ.

Related posts

ಉಡುಪಿ -ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜುಗಲ್ ಬಂದಿ ಭಜನಾ ಸ್ಪರ್ಧೆ ಬೆಳ್ತಂಗಡಿಯ ಸುನಾದ ವಿನೋದಿನಿ ಭಜನಾ ತಂಡಕ್ಕೆ ಪ್ರಶಸ್ತಿ

The Karnataka Today

ಪಡುಬಿದ್ರಿ ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ಮಾರ್ಚ್ 21 ರಂದು ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ವತಿಯಿಂದ  “ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮ

The Karnataka Today

ಉಡುಪಿ ವಕೀಲರ ಸಂಘದ ವತಿಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಶ್ರೀಮತಿ ಬಿ ವಿ ನಾಗರತ್ನ ಭೇಟಿ

The Karnataka Today

Leave a Comment