ಬೆಟ್ಟಿಂಗ್ ಆ್ಯಪ್  ಪರ ಪ್ರಚಾರ ಟಾಲಿವುಡ್ ನಟ ಪ್ರಕಾಶ್ ರಾಜ್ ಸಹಿತ 25 ನಟ ನಟಿಯರ ವಿರುದ್ಧ ಪ್ರಕರಣ ದಾಖಲು

50

“ಬೆಟ್ಟಿಂಗ್‌ ಆ್ಯಪ್ ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ನಟ ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಸೇರಿದಂತೆ ಟಾಲಿವುಡ್’ನ 25 ಕ್ಕೂ ಹೆಚ್ಚು ನಟ- ನಟಿಯರ ವಿರುದ್ಧ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಹೋರಾಟಗಾರ ಫಣೀಂದ್ರ ಶರ್ಮಾ ಎಂಬುವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಹೈದರಾಬಾದ್‌ನ ಮಿಯಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಟಾಲಿವುಡ್’ನ ಹಲವು ನಟ-ನಟಿಯರು ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತನ್ನು ನೀಡುವ ಮೂಲಕ ಬೆಟ್ಟಿಂಗ್ ಆ್ಯಪ್’ನ್ನು ಪ್ರಚಾರ ಮಾಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬೆಟ್ಟಿಂಗ್ ಆಪ್ ಗಳಲ್ಲಿ ಹಣ ಹಾಕಿ ಯುವ ಜನತೆ ನಷ್ಟಕ್ಕೆ ತುತ್ತಾಗಿದ್ದಾರೆ. ಈ ಆಪ್‌ನಲ್ಲಿ ಹಣ ಕಳೆದುಕೊಂಡು ಹಲವು ಯುವಕರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಟ್ಟಿಂಗ್ ಆಪ್ ಪ್ರಚಾರಕ್ಕೆ ತೆಲಂಗಾಣ ಸರ್ಕಾರ ಈಗಾಗಲೇ ನಿಷೇಧ ಹೇರಿದೆ. ಇದರ ಹೊರತಾಗಿಯೂ ಬೆಟ್ಟಿಂ ಗ್ಆಪ್ ಪರ ಪ್ರಚಾರ ನಡೆಸುತ್ತಿದ್ದಾರೆ ಎಂದು ದೂರಿದ್ದಾರೆ.

ಅಪ್ಲಿಕೇಶನ್ ಸ್ಟೋರ್‌ಗಳಲ್ಲಿ ಆ್ಯಪ್ ಸುಲಭವಾಗಿ ಲಭ್ಯವಿಲ್ಲದಿದ್ದರೂ, ಸಾಮಾಜಿಕ ಜಾಲತಾಣಗಳ ಮೂಲಕ ಜಾಹೀರಾತು ನೀಡಿ, ಜನರನ್ನು ಪ್ರಚೋದಿಸಲಾಗುತ್ತಿದೆ. ಆ್ಯಪ್’ಗಳು ದೊಡ್ಡ ಮೊತ್ತ ಹೂಡಿಕೆ ಮಾಡಲು ಪ್ರೋತ್ಸಾಹಿಸುತ್ತಿದ್ದು, ಅಂತಿಮವಾಗಿ ಜನರು ಜೂಜಾಟಕ್ಕೆ ವ್ಯಸನಿಯಾಗುವಂತೆ ಕಾರಣವಾಗುತ್ತಿವೆ.


ದೂರು ಹಿನ್ನೆಲೆ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ಪ್ರಣೀತಾ, ಲಕ್ಷ್ಮಿ ಮಂಚು ಮತ್ತು ನಿಧಿ ಅಗರ್ವಾಲ್, ಅನನ್ಯ ನಾಗೆಲ್ಲ, ಸಿರಿ ಹನುಮಂತು, ಶ್ರೀಮುಖಿ, ವರ್ಷಿಣಿ ಸೌಂದರರಾಜನ್, ವಸಂತಿ ಕೃಷ್ಣನ್, ಶೋಬಾ ಪಟ್ಟಾನಿ, ಪವನ್ ಪಟ್ಟಾನಿ, ಪವನ್ ಶೆಟ್ಟಿ ಪಾಂಡು, ಪದ್ಮಾವತಿ, ಇಮ್ರಾನ್ ಖಾನ್, ವಿಷ್ಣು ಪ್ರಿಯಾ, ಹರ್ಷ ಸಾಯಿ,

ಬಯ್ಯ ಸನ್ನಿ ಯಾದವ್, ಶ್ಯಾಮಲಾ, ಟೇಸ್ಟಿ ತೇಜಾ, ರಿತು ಚೌಧರಿ ಮತ್ತು ಬಂಡಾರು ಶೇಷಾಯನಿ ಸುಪ್ರಿತಾ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ತೆಲಂಗಾಣ ಗೇಮಿಂಗ್ ಕಾಯ್ದೆಯ ಸೆಕ್ಷನ್ 3, 3(ಎ), ಮತ್ತು 4, ಬಿಎನ್‌ಎಸ್‌ನ ಸೆಕ್ಷನ್ 49, ಸೆಕ್ಷನ್ 318(4) ಮತ್ತು 112 ಮತ್ತು ಐಟಿ ಕಾಯ್ದೆಯ ಸೆಕ್ಷನ್ 66-ಡಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Leave a comment

Leave a Reply

Your email address will not be published. Required fields are marked *

Related Articles

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ...

ಬಿಹಾರ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಭಾರತೀಯ ಜನತಾ ಪಕ್ಷದ  ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ಬುಧವಾರ ಬಿಹಾರದ 24ನೇ ಮುಖ್ಯಮಂತ್ರಿಯಾಗಿ...