ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮಂಡಿಸಿದ ಹಾಗೂ ಸದನವು ಅಂಗೀಕರಿಸಿದ ಪ್ರಸ್ತಾವದಂತೆ
ಈ ದಿನದಿಂದ ಅಂದರೆ, ದಿನಾಂಕ: 21.03.2025ರಂದು ಸದನದಲ್ಲಿ ಪೀಠದ ಆದೇಶವನ್ನು ಲೆಕ್ಕಿಸದೇ ಸದನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಾ, ಅಶಿಸ್ತಿನಿಂದ ಹಾಗೂ ಅಗೌರವದಿಂದ ನಡೆದುಕೊಂಡಿದ್ದ ಕಾರಣಕ್ಕಾಗಿ
ಮಾನ್ಯ ವಿಧಾನಸಭಾ ಸದಸ್ಯರುಗಳಾದಂತಹ ಶ್ರೀ ದೊಡ್ಡನಗೌಡ ಹೆಚ್. ಪಾಟೀಲ್, ವಿರೋಧ ಪಕ್ಷದ ಮುಖ್ಯ ಸಚೇತಕರು, ಡಾ: ಅಶ್ವಥ್ನಾರಾಯಣ್ ಸಿ.ಎನ್., ಶ್ರೀ ಎಸ್.ಆರ್. ವಿಶ್ವನಾಥ್, ಶ್ರೀ ಬಿ.ಎ.ಬಸವರಾಜ, ಶ್ರೀ ಎಂ.ಆರ್. ಪಾಟೀಲ್, ಶ್ರೀ ಚನ್ನಬಸಪ್ಪ (ಚೆನ್ನಿ),
ಶ್ರೀ ಬಿ.ಸುರೇಶ್ ಗೌಡ, ಶ್ರೀ ಉಮಾನಾಥ್ ಎ. ಕೋಟ್ಯಾನ್, ಶ್ರೀ ಶರಣು ಸಲಗರ, ಡಾ: ಶೈಲೇಂದ್ರ ಬೆಲ್ದಾಳೆ, ಶ್ರೀ ಸಿ.ಕೆ.ರಾಮಮೂರ್ತಿ, ಶ್ರೀ ಯಶಪಾಲ್ ಎ.ಸುವರ್ಣ, ಶ್ರೀ ಬಿ.ಪಿ. ಹರೀಶ್, ಡಾ: ಭರತ್ ಶೆಟ್ಟಿ ವೈ.,
ಶ್ರೀ ಮುನಿರತ್ನ, ಶ್ರೀ ಬಸವರಾಜ್ ಮತ್ತಿಮೂಡ್, ಶ್ರೀ ಧೀರಜ್ ಮುನಿರಾಜು ಮತ್ತು ಡಾ: ಚಂದ್ರು ಲಮಾಣಿ ಅವರುಗಳನ್ನು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಾವಳಿಗಳ ನಿಯಮ 348ರ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ
6 ತಿಂಗಳುಗಳ ಕಾಲ ಸದನಕ್ಕೆ ಬಾರದಂತೆ ತಡೆಹಿಡಿದು ಅಮಾನತ್ತುಗೊಳಿಸಲಾಗಿರುತ್ತದೆ. ಸದರಿಯವರುಗಳ ಅಮಾನತ್ತು ಅವಧಿಯಲ್ಲಿ ಈ ಕೆಳಕಂಡ ಪರಿಣಾಮಗಳು ಜಾರಿಯಲ್ಲಿರುತ್ತವೆ
. 1. ಅವರುಗಳು ವಿಧಾನಸಭೆಯ ಸಭಾಂಗಣ, ಲಾಬಿ ಮತ್ತು ಗ್ಯಾಲರಿಗಳಿಗೆ ಪ್ರವೇಶಿಸುವಂತಿಲ್ಲ. 2. ಅವರು ಸದಸ್ಯರಾಗಿರುವ ವಿಧಾನಮಂಡಲದ/ವಿಧಾನ ಸಭೆಯ ಸ್ಥಾಯಿ ಸಮಿತಿಗಳ ಸಭೆಗಳಲ್ಲಿಯೂ ಭಾಗವಹಿಸುವಂತಿಲ್ಲ. 3. ವಿಧಾನ ಸಭೆಯ ಕಾರ್ಯಕಲಾಪಗಳ ಪಟ್ಟಿಯಲ್ಲಿ ಅವರುಗಳ ಹೆಸರಿನಲ್ಲಿ ಯಾವ್ಯದೇ ವಿಷಯವನ್ನು ನಮೂದು ಮಾಡತಕ್ಕದಲ್ಲ.
4. ಅಮಾನತ್ತಿನ ಅವಧಿಯಲ್ಲಿ ಅವರುಗಳು ನೀಡುವ ಯಾವುದೇ ಸೂಚನೆಗಳನ್ನು ಸ್ವೀಕರಿಸಲಾಗುವುದಿಲ್ಲ. 5. ಅಮಾನತ್ತಿನ ಅವಧಿಯಲ್ಲಿ ನಡೆಯುವ ಸಮಿತಿಗಳ ಚುನಾವಣೆಯಲ್ಲಿ ಅವರುಗಳು ಮತದಾನ ಮಾಡುವಂತಿಲ್ಲ.
6. ಅಮಾನತ್ತಿನ ಅವಧಿಯಲ್ಲಿ ಅವರುಗಳು ಯಾವುದೇ ದಿನಭತ್ಯೆಯನ್ನು ಪಡೆಯಲು ಅರ್ಹರಿರುವುದಿಲ್ಲ. ಎಂದು ಈ ಮೂಲಕ ತಿಳಿಯಪಡಿಸಲಾಗಿದೆ.