ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ ಸ್ಪಷ್ಟನೆ ನೀಡಿದ :: ವಿಧಾನ ಪರಿಷತ್ ಸಭಾಪತಿ  ಬಸವರಾಜ್ ಹೊರಟ್ಟಿ

50

“ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗತೊಡಗಿದ್ದರ ಬೆನ್ನಲ್ಲೇ ಬಸವರಾಜ್ ಹೊರಟ್ಟಿ ಸ್ವತಃ ಸ್ಪಷ್ಟನೆ ನೀಡಿದ್ದಾರೆ.

ತಮ್ಮ ರಾಜೀನಾಮೆ ವಿಷಯ ವೈರಲ್ ಆಗುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಹೊರಟ್ಟಿ, ಹನಿಟ್ರ್ಯಾಪ್ ನಂತಹ ಪ್ರಕರಣಗಳು ಸದನದಲ್ಲಿ ಕೇಳಿ ಬರುತ್ತಿವೆ.

ಚಿಂತಕರ ಚಾವಡಿ ಎನಿಸಿಕೊಂಡಿರುವ ವಿಧಾನ ಪರಿಷತ್‌ನಲ್ಲಿ ಎಲ್ಲವೂ ಸರಿಯಿಲ್ಲ. ಕಾಲ ಕೆಟ್ಟಿದ್ದು, ರಾಜಕಾರಣ ಬಹಳ ಕಲುಷಿತ ಆಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ವಿಧಾನ ಪರಿಷತ್‌ ನ ಗೌರವ ಕಳೆದು ಹೋಗಿ ಬಹಳ ದಿನ ಆಗಿದೆ. ಇಂತಹ ಸಮಯದಲ್ಲಿ ಸಭಾಪತಿಯಾಗಿ ಮುಂದುವರೆಯುವದೋ ಬೇಡವೋ ಎಂಬ ಗೊಂದಲ ಉಂಟಾಗಿದ್ದು ನಿಜ. ಸದನದ ಸದಸ್ಯರ ವರ್ತನೆಯಿಂದ ಬೇಸತ್ತು ಹೋಗಿದ್ದೇನೆ ಎಂದು ಹೊರಟ್ಟಿ ಹೇಳಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ ನಾನು ರಾಜೀನಾಮೆ ನೀಡಬೇಕು ಅಂತ ತೀರ್ಮಾನ ಮಾಡಿದ್ದು ನಿಜ. ನನ್ನ ಕಚೇರಿಯಿಂದ ನಾನು ಸಹಿ ಮಾಡದ ಪತ್ರದ ಫೋಟೋ ವೈರಲ್ ಆಗತೊಡಗಿದೆ. ರಾಜೀನಾಮೆಗೆ ಸಹಿ ಮಾಡಿರುವ ಪತ್ರ ನನ್ನ ಬಳಿಯೇ ಇದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಮೂಲಕ ಇಲ್ಲಿಯವರೆಗೂ ತಾವು ರಾಜೀನಾಮೆ ಸಲ್ಲಿಸಿಲ್ಲ ಎಂಬುದನ್ನು ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ. ಸದನದಲ್ಲಿ ಮೊನ್ನೆ ನಡೆದ ಘಟನೆ ಮನಸ್ಸಿಗೆ ಬಹಳ ನೋವಾಗಿದೆ. ಕುರ್ಚಿ ಆಸೆಗೆ ಕೂರೋದು ಸರಿಯಲ್ಲ ಅಂತ ನನಗೆ ಅನ್ನಿಸಿದೆ.

ನನ್ನ ಆಪ್ತರು ನನಗೆ ರಾಜೀನಾಮೆ ನೀಡಬೇಡಿ ಅಂತ ಒತ್ತಾಯ ಮಾಡ್ತಿದ್ದಾರೆ. ಹೀಗಾಗಿ ನಾನು ಸ್ವಲ್ಪ ವಿಚಾರ ಮಾಡ್ತೇನೆ. ಇನ್ನು ಮೂರ್ನಾಲ್ಕು ದಿನದಲ್ಲಿ ರಾಜೀನಾಮೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಬಸವರಾಜ ಹೊರಟ್ಟಿ ಅವರು ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಡಿಜಿಟಲ್ ಅಂಕಪಟ್ಟಿ ಲಭ್ಯ : ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ....

ಸನ್ನಡತೆಯ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಕಾರಾಗೃಹಗಳಲ್ಲಿರುವ 30 ಕೈದಿಗಳ ಬಿಡುಗಡೆ ಆದೇಶ

“ಜೀವಾವಧಿ ಶಿಕ್ಷೆಗೆ ಗುರಿಯಾಗಿ ರಾಜ್ಯದ ಬೇರೆಬೇರೆ ಕಾರಾಗೃಹಗಳಲ್ಲಿರುವ 30 ಕೈದಿಗಳನ್ನು ಸನ್ನಡತೆಯ ಆಧಾರದಲ್ಲಿ ಬಿಡುಗಡೆಗೊಳಿಸಿ ರಾಜ್ಯ...

ಬಳ್ಳಾರಿ ಬ್ಯಾನರ್ ಗಲಾಟೆ ನಿನ್ನೆ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ...

2025 ರಲ್ಲಿ ರಾಜ್ಯದಲ್ಲಿ ನಿರ್ಲಕ್ಷದ ಚಾಲನೆಗಾಗಿ 5947 ವಾಹನ ಚಾಲನಾ ಪರವಾನಿಗೆ ರದ್ದು

ಬೆಂಗಳೂರು: ಕರ್ನಾಟಕದ ಸಾರಿಗೆ ಇಲಾಖೆಯು 2025 ರಲ್ಲಿ ಕರ್ನಾಟಕದಾದ್ಯಂತ 5,947 ಚಾಲನಾ ಪರವಾನಗಿಗಳನ್ನು (DL) ಅಮಾನತುಗೊಳಿಸಿದೆ....