ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಸ್ವಸಹಾಯ ಸಂಘದ ಸಿಬ್ಬಂದಿಗಳಿಂದ ಸಾಲ ಮರುಪಾವತಿಗಾಗಿ ಕಿರುಕುಳ ಯುವತಿ ಆತ್ಮಹತ್ಯೆಗೆ ಯತ್ನ ಸಂಘದ ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲು

31

ಉಡುಪಿ ಜಿಲ್ಲೆ , ಹಿರಿಯಡ್ಕ ಬೊಮ್ಮಾರ ಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸ್ವಸಹಾಯ ಸಂಘದ ಸಿಬ್ಬಂದಿಗಳಿಂದ ಸಾಲ ಬಾಕಿಉಳಿಸಿಕೊಂಡಿದ್ದ ಮಹಿಳೆಯ

ಸಹೋದರಿಯ ಪುತ್ರಿಗೆ ಕಿರುಕುಳ ಯುವತಿ ಆತ್ಮಹತ್ಯೆ ಯತ್ನ ಸ್ಥಳೀಯರಿಂದ ರಕ್ಷಣೆ ಸ್ವಸಹಾಯ ಸಂಘದ ಸಿಬ್ಬಂದಿಗಳ ವಿರುದ್ಧ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲು

ಬೊಮ್ಮರಬೆಟ್ಟು ಗ್ರಾಮ ಹಿರಿಯಡ್ಕ ದುಗುಣಿ ಇವರ ತಂಗಿ ಇಂದಿರಾ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಸಂಘದ ಸದಸ್ಯರಾಗಿದ್ದು ಕೆಲವು ತಿಂಗಳ ಹಿಂದೆ ಸಂಘದಲ್ಲಿ 65 ಸಾವಿರ ರೂಪಾಯಿ ಸಾಲವನ್ನು ಪಡೆದಿದ್ದರು


ವಾರಕ್ಕೆ 1 ಸಾವಿರ ದಂತೆ ಸಾಲದ ಕಂತನ್ನು ಕಟ್ಟುತ್ತಾ ಬರುತ್ತಿದ್ದು, ಇಂದಿರಾರವರ ಮಗ ಎರಡು ತಿಂಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟ ಕಾರಣ

ಇಂದಿರಾವರಿಗೆ ಕೆಲಸಕ್ಕೆ ಹೋಗಲು ಸಾಧ್ಯವಾಗದೇ ಎರಡು ತಿಂಗಳಿನಿಂದ ವಾರದ ಕಂತನ್ನು ಕಟ್ಟಲು ವಿಳಂಬವಾದ ಕಾರಣದಿಂದ ದಿನಾಂಕ 22/03/2025 ರಂದು ಸಂಜೆ 6:00 ಗಂಟೆ ಸಮಯಕ್ಕೆ  ದುಗುಣಿಯವರ ಮಗಳು ಸಂಧ್ಯಾ ಕೆಲಸಕ್ಕೆ ಹೋಗಿ ಮನೆಗೆ ಬಂದಾಗ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಸ್ಥೆಯಲ್ಲಿ ಕೆಲಸದಲ್ಲಿರುವ ಸಿಬ್ಬಂದಿಗಳಾದ ನಳಿನಿ, ಪ್ರಭಾಕರ, ವಿಜಯ, ಸವಿತಾ ಇವರು ಧಾವಿಸಿ ಮನೆ ಮುಂದೆ 7:30 ಗಂಟೆ ತನಕ ಕೂತು ಕೆಟ್ಟ ಪದಗಳನ್ನು ಉಪಯೋಗಿಸಿ ಆತ್ಮಹತ್ಯೆಗೆ ಪ್ರಚೋದನೆ ಕೊಟ್ಟ ಹಿನ್ನೆಲೆಯಲ್ಲಿ.

ದುಗುಣಿ ,ಯವರ  ಮಗಳು ಆತ್ಮಹತ್ಯೆಗೆ ಯತ್ನಿಸಿದ್ದು, ಆಗ ನೆರೆಕೆರೆಯವರು ಸಂಧ್ಯಾಳನ್ನು ರಕ್ಷಣೆ ಮಾಡಿರುವುದಾಗಿ ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 27/2025 ಕಲಂ: 329(4),351(2) ಜೊತೆಗೆ 3(5) BNS ‌ ಮತ್ತು ಕಲಂ: 8,12 The Karnataka Micro loan and small loan(Prevention Coerice actions) ordiance 2025 ರಂತೆ ಪ್ರಕರಣ ದಾಖಲಾಗಿರುತ್ತದೆ.

Leave a comment

Leave a Reply

Your email address will not be published. Required fields are marked *

Related Articles

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ...