ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟನೆ

55

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

ರಾಜ್ಯಾಧ್ಯಕ್ಷರ ವಿರುದ್ಧ ಅವಹೇಳನ ಮತ್ತು ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದರಿಂದ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ನಾಲಿಗೆ ಹರಿಬಿಟ್ಟು ಅವರ ಬಗ್ಗೆ ಅವಹೇಳನವಾಗಿ ಮಾತನಾಡಿದ್ದರು. ಜೊತೆಗೆ, ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದರು.

ಹೀಗಾಗಿ, ಬಿಜೆಪಿ ಹೈಕಮಾಂಡ್‌ನಿಮದ ಶೋಕಾಸ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು. ಅದಕ್ಕೆ ಉತ್ತರವನ್ನೂ ಕೊಟ್ಟಿದ್ದರು.

ಇದೀಗ ದೆಹಲಿ ಬಿಜೆಪಿ ಹೈಕಮಾಂಡ್‌ಗೆ ಅವರ ಉತ್ತರದಿಂದ ಸೂಕ್ತ ಉತ್ತರ ಸಿಕ್ಕಿಲ್ಲವೆಂದು ಶಾಸಕ ಬಸನಗೌಡ ಪಾಟೀಲ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಇನ್ನು ಅವರ ಶಾಸಕ ಸ್ಥಾನಕ್ಕೂ ಕುತ್ತು ಬರುತ್ತಾ ಎಂಬ ಪ್ರಶ್ನೆ ಶುರುವಾಗಿದೆ.

ಶಾಸಕ ಸ್ಥಾನದಲ್ಲಿ ಅವರು ಸ್ವತಂತ್ರವಾಗಿ ಮುಂದುವರೆಯಬಹುದು. ಒಂದು ವೇಳೆ ಪಕ್ಷದ ಚಿಹ್ನೆಯಡಿ ಗೆದ್ದಿರುವುದು ತನಗೆ ಬೇಡವೆಂದು ರಾಜೀನಾಮೆ ಕೊಟ್ಟರೆ, ಶಾಸಕ ಸ್ಥಾನ ರದ್ದಾಗಿ ಪುನಃ ಚುನಾವಣೆಗೆ ಹೋಗಬಹುದು.

ಉಚ್ಛಾಟನೆ ಆದೇಶದಲ್ಲಿ ಏನಿದೆ? ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ

ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತಿನ ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ.

ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 [ಆರು] ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ

  ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

Related Articles

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್...

ವಿಭಜನೆಯತ್ತ ತೃಣಮೂಲ ಕಾಂಗ್ರೆಸ್  ಬಂಡಾಯ ಸಂಸದರ ಸಂಖ್ಯೆ 20ರ ಮ್ಯಾಜಿಕ್

“ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಹುಕಾಲದಿಂದ ನಡೆಯುತ್ತಿದ್ದ ಅಂತರ್ಯುದ್ಧ ಈಗ ನಿಜವಾಗಿದೆ. ತೃಣಮೂಲ ಕಾಂಗ್ರೆಸ್  ಸ್ಥಾಪಕಿ ಮಮತಾ...