thekarnatakatoday.com
News

ಬಿಜೆಪಿಯಲ್ಲಿರುವ ಲಿಂಗಾಯತ ಶಾಸಕರೇ, ಬಿಜೆಪಿ ಪಕ್ಷ ಬಿಟ್ಟು ಹೊರಬನ್ನಿ ಜಯ ಮೃತ್ಯುಂಜಯ ಸ್ವಾಮೀಜಿ ಕರೆ

“ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿದ ಬೆನ್ನಲ್ಲೇ ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರಬನ್ನಿ ಎಂದು ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ

. ಧಾರವಾಡದಲ್ಲಿ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ ಉಚ್ಛಾಟನೆಗೆ ಬಿಎಸ್‌ ಯಡಿಯೂರಪ್ಪ ಮತ್ತು ಅವರ ಕುಟುಂಬವೇ ಕಾರಣ. ಇದನ್ನು ನಾನು ನೇರವಾಗಿ ಆರೋಪ ಮಾಡುತ್ತೇನೆ. ಬಿಜೆಪಿಯಲ್ಲಿರುವ ಪಂಚಮಸಾಲಿಗಳು ರಾಜೀನಾಮೆ ನೀಡಬೇಕು. ಪಕ್ಷದಲ್ಲಿರುವ ಪಂಚಮಸಾಲಿಗಳು ಹೊರಗೆ ಬರಬೇಕು.

ಯತ್ನಾಳ ಉಚ್ಛಾಟನೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಪಂಚಮಸಾಲಿಗಳು ಬಿಜೆಪಿಯಿಂದ ಹೊರ ಬರಬೇಕು ಎಂದು ಕರೆ ನೀಡಿದ್ದಾರೆ. ಯತ್ನಾಳ್‌ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಛಾಟನೆ ಮಾಡುವಂತೆ ಮಾಡಿವೆ. ಕುಟುಂಬ ರಾಜಕಾರಣ ಬೇಡ ಎನ್ನುವುದು ತಪ್ಪೇ?

ಯತ್ನಾಳ್‌ ಏನೇ ಮಾತನಾಡಿದರೂ ಅವರು ಉತ್ತರ ಕರ್ನಾಟಕ, ಹಿಂದುತ್ವದ ಬಗ್ಗೆಯೇ ಮಾತನಾಡಿದ್ದಾರೆ ಎಂದರು. ಯತ್ನಾಳ್‌ ಅವರನ್ನು ಉಚ್ಛಾಟನೆ ಮಾಡಿ ಬಿಜೆಪಿ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿದೆ. ಇದರಿಂದ ಬಿಜೆಪಿ ಪಕ್ಷಕ್ಕೆ ಹಿನ್ನಡೆಯಾಗಲಿದೆ. ಈಗ ಬಿಜೆಪಿಗೆ 60 ಸ್ಥಾನ ಬಂದಿವೆ. ಮುಂದೆ ಮೂವತ್ತು ಸೀಟು ಕೂಡ ಬರುವದಿಲ್ಲ.

ಮೋದಿ ಹಾಗೂ ಅಮಿತ್ ಶಾ ಅವರಿಗೆ ಗೊತ್ತಿರದೇ ಇರುವ ಅಂಶಗಳು ಇಲ್ಲಿವೆ ಎಂದು ಹೇಳಿದರು. ಜಯ ಮೃತ್ಯುಂಜಯ ಸ್ವಾಮೀಜಿ BJP ಏಜೆಂಟ್, ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದ್ರೆ ಕೈ ಕತ್ತರಿಸುತ್ತೇವೆ: ಕೆಎಸ್ ಶಿವರಾಮು ಎಚ್ಚರಿಕೆ ನಾವು ಉಗ್ರ ಹೋರಾಟ ಮಾಡುತ್ತೇವೆ.

ಈ ಹೋರಾಟ ಪ್ರಧಾನಿ ಮೋದಿ, ಸಚಿವ ಅಮಿತ್ ಶಾ ವಿರುದ್ಧ ಅಲ್ಲ. ಪಂಚಮಸಾಲಿಗಳ ನಾಯಕತ್ವ ತುಳಿದವರ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಅಂದು, ಕಿತ್ತೂರು ರಾಣಿ ಚನ್ನಮ್ಮಳಿಗೆ ಮೋಸ ಮಾಡಿದ ಶಕ್ತಿಗಳೇ ಈಗ ಹೀಗೆ ಮಾಡುತ್ತಿವೆ. 21ನೇ ಶತಮಾನದಲ್ಲಿ ಅದೇ ಶಕ್ತಿಗಳು ಅಟ್ಟಹಾಸ ಮೆರೆಯುತ್ತಿವೆ.

ಉಚ್ಛಾಟನೆ ವಾಪಸ್ ಪಡೆಯಲೇಬೇಕು. ಇಲ್ಲದೇ ಹೋದಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಬೆಳಗಾವಿಯಲ್ಲಿ ನಾಳೆ ಸಭೆ ಕರೆಯುತ್ತೇನೆ. ಮುಂದೆ ಒಂದು ದಿನ ರಾಜ್ಯದ್ಯಂತ ಪ್ರತಿಭಟನೆ ಮಾಡುತ್ತೇವೆ.

ವೀರೇಂದ್ರ ಪಾಟೀಲ, ಜೆ.ಎಚ್.ಪಟೇಲರಂತೆ ಯತ್ನಾಳರಿಗೂ ಮಾಡುತ್ತಿದ್ದಾರೆ. ಹೈಕಮಾಂಡ್ ನಮಗೆ ಕುಟುಂಬ ರಾಜಕಾರಣ ಬೇಕು ಎಂದು ನೇರವಾಗಿ ಹೇಳಲಿ. ನಾಳೆ ಎಲ್ಲವನ್ನೂ ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ ಎಂದು ಗುಡುಗಿದರು.

Related posts

ರಾಜ್ಯದಲ್ಲಿ ಕಳೆದ ಏಪ್ರಿಲ್ ನಿಂದ 327 ಬಾಣಂತಿಯರ ಸಾವು ಬಳ್ಳಾರಿ ಬಿಮ್ಸ್ ನಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸರಕಾರ

The Karnataka Today

ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೈಲೆಟ್ ನ ಸಮಯಪ್ರಜ್ಞೆಯಿಂದ ತಪ್ಪಿದ ವಿಮಾನ ದುರಂತ

The Karnataka Today

ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷ ಬಲವರ್ಧನೆಗಾಗಿ ಈ ಭಾರಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಏಪ್ರಿಲ್ ನಲ್ಲಿ ಬೆಂಗಳೂರಿನಲ್ಲಿ ಸಾಧ್ಯತೆ

The Karnataka Today

Leave a Comment