thekarnatakatoday.com
News

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತ

ಕಪ್ಪು ಪಟ್ಟಿಯಲ್ಲಿರುವ ಆರ್ ಟಿಐ ಕಾರ್ಯಕರ್ತನ ಹೆಸರು ತೆಗೆಯಲು ರೂ. 1 ಲಕ್ಷ ಲಂಚ ಪಡೆಯುವಾಗ ರಾಜ್ಯ ಮಾಹಿತಿ ಆಯೋಗ ಕಲಬುರಗಿ ಪೀಠದ ಆಯುಕ್ತ ರವೀಂದ್ರ ಗುರುನಾಥ ಡಾಕಪ್ಪ ಅವರು ಗುರುವಾರ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.


ಕಪ್ಪುಪಟ್ಟಿಯಿಂದ ಆರ್ ಟಿಐ ಕಾರ್ಯಕರ್ತ ಸಾಯಿಬಣ್ಣ ಅವರನ್ನು ಹೆಸರು ತೆಗೆಯಲು ಡಾಕಪ್ಪ ಅವರು ರೂ. 3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಗುರುವಾರ ರೂ. 1 ಲಕ್ಷದ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡ ಬಳಿಕ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಡಿವೈಎಸ್ ಪಿ ಗೀತಾ ಬೇನಾಳ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Related posts

ಮುಡಾ ಪ್ರಕರಣ ದೂರುದಾರ ಸ್ನೇಹಮಯಿ ಕೃಷ್ಣ ಮೇಲೆ ವಾಮಾಚಾರ ಪ್ರಯೋಗ ಪ್ರಸಾದ್ ಅತ್ತಾವರ್ ಸೇರಿ ಸಿದ್ದರಾಮಯ್ಯ ಬೆಂಬಲಿಗರ ವಿರುದ್ಧ ದೂರು

The Karnataka Today

ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣ ದಾಖಲು

The Karnataka Today

ನಕಲಿ ಚಿನ್ನ ಹಗರಣ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆಗೆ ಇಡಿ ದಾಳಿ ಅಧ್ಯಕ್ಷರ ಬಂಧನ

The Karnataka Today

Leave a Comment