thekarnatakatoday.com
National

ಭದ್ರತಾ ಪಡೆ ಮತ್ತು ನಕ್ಸಲ್ ರ ನಡುವೆ ಗುಂಡಿನ ಚಕಮಕಿ 16 ನಕ್ಸಲರು ಎನ್ಕೌಂಟರ್ ಗೆ ಬಲಿ

“ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 16 ನಕ್ಸಲರು ಮೃತಪಟ್ಟಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆಗೆ ಭದ್ರತಾ ಸಿಬ್ಬಂದಿ ಹೊರಟಿದ್ದ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಕೆರ್ಲಾಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದೊಳಗೆ ಬೆಳಗಿನ ಹೊತ್ತು ಗುಂಡಿನ ಚಕಮಕಿ ನಡೆದಿದೆ.

ಕೆರ್ಲಾಪಾಲ್ ಪ್ರದೇಶದಲ್ಲಿ ನಕ್ಸಲರ ಇರುವಿಕೆ ಬಗ್ಗೆ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ನಿನ್ನೆ ರಾತ್ರಿ ಕಾರ್ಯಾಚರಣೆ ಆರಂಭಿಸಿದ್ದರು.

ಜಿಲ್ಲಾ ಮೀಸಲು ಪಡೆ (DRG) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿ ಎನ್ ಕೌಂಟರ್ ನಲ್ಲಿ ಭಾಗಿಯಾಗಿದ್ದರು.

ಎನ್‌ಕೌಂಟರ್ ಸ್ಥಳದಿಂದ ಇದುವರೆಗೆ 16 ನಕ್ಸಲರ ಶವಗಳನ್ನು ಹೊರತೆಗೆಯಲಾಗಿದೆ

. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Related posts

2026ರ ಮಾರ್ಚ್ ವೇಳೆಗೆ ನಕ್ಸಲಿಸಂ ನಿರ್ಮೂಲನೆ ಮಾಡುತ್ತೇವೆ; ಗುಡುಗಿದ ಕೇಂದ್ರ ಗ್ರಹ ಸಚಿವ ಅಮಿತ್ ಶಾ

The Karnataka Today

ವಿಮಾನದಲ್ಲಿ ಬಾಂಬ್ ಬೆದರಿಕೆ ನ್ಯೂಯಾರ್ಕ್ ಹೊರಟಿದ್ದ ಏರ್ ಇಂಡಿಯಾ ವಿಮಾನ ಮರಳಿ ಮುಂಬೈಯಲ್ಲಿ ತುರ್ತು ಭೂ ಸ್ಪರ್ಶ

The Karnataka Today

ಎನ್ ಆರ್ ಸಿ ಗೆ ಅರ್ಜಿ ಸಲ್ಲಿಸದಿದ್ದರೆ ಆಧಾರ್ ಕಾರ್ಡ್ ನೀಡಲಾಗುವುದಿಲ್ಲ ವಲಸಿಗರಿಗೆ ಅಸ್ಸಾಂ ಸರಕಾರದ ಖಡಕ್  ನಿರ್ಧಾರ

The Karnataka Today

Leave a Comment