ಭದ್ರತಾ ಪಡೆ ಮತ್ತು ನಕ್ಸಲ್ ರ ನಡುವೆ ಗುಂಡಿನ ಚಕಮಕಿ 16 ನಕ್ಸಲರು ಎನ್ಕೌಂಟರ್ ಗೆ ಬಲಿ

40

“ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 16 ನಕ್ಸಲರು ಮೃತಪಟ್ಟಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆಗೆ ಭದ್ರತಾ ಸಿಬ್ಬಂದಿ ಹೊರಟಿದ್ದ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಕೆರ್ಲಾಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದೊಳಗೆ ಬೆಳಗಿನ ಹೊತ್ತು ಗುಂಡಿನ ಚಕಮಕಿ ನಡೆದಿದೆ.

ಕೆರ್ಲಾಪಾಲ್ ಪ್ರದೇಶದಲ್ಲಿ ನಕ್ಸಲರ ಇರುವಿಕೆ ಬಗ್ಗೆ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ನಿನ್ನೆ ರಾತ್ರಿ ಕಾರ್ಯಾಚರಣೆ ಆರಂಭಿಸಿದ್ದರು.

ಜಿಲ್ಲಾ ಮೀಸಲು ಪಡೆ (DRG) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿ ಎನ್ ಕೌಂಟರ್ ನಲ್ಲಿ ಭಾಗಿಯಾಗಿದ್ದರು.

ಎನ್‌ಕೌಂಟರ್ ಸ್ಥಳದಿಂದ ಇದುವರೆಗೆ 16 ನಕ್ಸಲರ ಶವಗಳನ್ನು ಹೊರತೆಗೆಯಲಾಗಿದೆ

. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Leave a comment

Leave a Reply

Your email address will not be published. Required fields are marked *

Related Articles

ಮೆಗಾ ರಫೆಲ್ ಜೆಟ್ ಯೋಜನೆಗೆ ‘ಕೇಂದ್ರ’ ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂದೂರ್...

ಮುಂಬೈ ನೂತನ ಮೇಯರ್‌ ರೀತು ತಾವಡೆ ಅವಿರೋಧ ಆಯ್ಕೆ: 40ವರ್ಷ್ ಗಳ ನಂತರ ಬಿಜೆಪಿಗೆ ಒಲಿದ ಪಟ್ಟ

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರೀತು ತಾವ್ಡೆ...

ಸ್ವಪಕ್ಷ ಸರಕಾರದ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್ ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ

ಪಾಟ್ನಾ: ನೇರವಾಗಿ ಪ್ರಶ್ನೆ ಕೇಳುವುದರಲ್ಲಿ ಹೆಸರಾದ ಬಿಹಾರದ ಬಿಜೆಪಿಯ ಅತ್ಯಂತ ಕಿರಿಯ ಶಾಸಕಿ ಮೈಥಿಲಿ ಠಾಕೂರ್...

ಬಿಜೆಪಿಯಿಂದ ನಮಗೆ ಅಚ್ಚೆದಿನ್ ಬಂದಿಲ್ಲ ಬೆಂಬಲಿಸಿದ ಎಲ್ಲರಿಗೂ ರಾಮ ಮಂದಿರ ನಿರ್ಮಾಣವಾಗಿ ಲಾಭವಾಗಿದೆ :: ಮೋಹನ್ ಭಾಗವತ್

“ನವದೆಹಲಿ: ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಏಕರೂಪ ನಾಗರಿಕ ಸಂಹಿತೆಯನ್ನು (UCC) ರೂಪಿಸಬೇಕು ಮತ್ತು ಅದು ವಿಭಜನೆಗೆ...